WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, April 19, 2020

ಲಾಕ್‌ಡೌನ್‌: ದ್ವಿಚಕ್ರ ವಾಹನ ಓಡಾಟಕ್ಕಿಲ್ಲ ಅವಕಾಶ: ಐಟಿ–ಬಿಟಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ

ಹೆಜ್ಜೆ ಹಿಂದಿಟ್ಟ ಸರ್ಕಾರ

ಬೆಂಗಳೂರು: ಕೋವಿಡ್ 19 ಪ್ರಕರಣಗಳು ಪತ್ತೆಯಾದ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆ
ಗಳಲ್ಲಿ ಲಾಕ್‌ ಡೌನ್‌ ನಿರ್ಬಂಧ ಸಡಿಲಿಸು
ವುದಾಗಿ ಶನಿವಾರ ಮಧ್ಯಾಹ್ನ ಪ್ರಕಟಿ
ಸಿದ್ದ ರಾಜ್ಯ ಸರ್ಕಾರ,
ಕೆಲವೇ ಗಂಟೆಗಳಲ್ಲಿ ಇಟ್ಟ ಹೆಜ್ಜೆಯಿಂದ ಹಿಂದೆ ಸರಿದಿದೆ.
ಇದೇ 20ರಿಂದ ದ್ವಿಚಕ್ರ ವಾಹನ ಓಡಾಟಕ್ಕೆ ಹಾಗೂ ಐ.ಟಿ–ಬಿಟಿ ಕಂಪನಿಗಳ ಸಿಬ್ಬಂದಿ ಶೇ 33ರಷ್ಟು ಮಂದಿ ಕಚೇರಿಗೆ ತೆರಳಲು ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಕಟಿಸಿದ್ದರು. ಲಾಕ್‌ಡೌನ್ ಸಡಿಲಗೊಳಿ
ಸುವ ತೀರ್ಮಾನದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ, ಮುಖ್ಯಮಂತ್ರಿ ಜತೆ ಚರ್ಚಿಸಿದ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು, ಸೋಮವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಅದಕ್ಕೆ ಮುನ್ನವೇ ಲಾಕ್ ಡೌನ್ ಸಡಿಲಗೊಳಿಸುವ ತೀರ್ಮಾನ ತೆಗೆದುಕೊಂಡಿರುವುದು ಸರಿಯಲ್ಲ. ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದಿತ್ತು ಎಂದು ಪ್ರತಿಪಾದಿ
ಸಿದರು. ಹೀಗಾಗಿ, ನಿರ್ಧಾರದಿಂದ ಹಿಂದೆ ಸರಿಯಲಾಯಿತು ಎಂದು ಮೂಲಗಳು ಹೇಳಿವೆ.
ಲಾಕ್‌ಡೌನ್ ಸಡಿಲಗೊಳಿಸುವ ತೀರ್ಮಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಆಕ್ಷೇಪ ವ್ಯಕ್ತ
ಪಡಿಸಿದ್ದರು.
ಪ್ರಮುಖ ತೀರ್ಮಾನಗಳು: ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ್ದ ಯಡಿಯೂರಪ್ಪ, ಲಾಕ್‌ಡೌನ್‌ ಸಡಿಲಿ
ಸುವ ಕುರಿತಂತೆ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದರು.
ಈ ಪೈಕಿ, ಸೋಂಕು ಪತ್ತೆಯಾದ ಪ್ರದೇಶವನ್ನು ‘ನಿಯಂತ್ರಣ ವಲಯ’ (ಕಂಟೇನ್ಮೆಂಟ್ ಝೋನ್) ಎಂದು ಘೋಷಿಸಿ ಕಠಿಣ ನಿರ್ಬಂಧ ಹೇರು
ವುದು. ಇತರ ವಲಯಗಳಲ್ಲಿ ದ್ವಿಚಕ್ರ ವಾಹನಗಳ ಮುಕ್ತ ಓಡಾಟಕ್ಕೆ ಅನುಮತಿ ಮತ್ತು ಐಟಿ ಬಿಟಿ ವಲಯಗಳಲ್ಲಿ ಶೇ 33 ರಷ್ಟು ಮಂದಿ ಕಚೇರಿಗಳಿಗೆ ಹಾಜರಾಗಲು ಅವಕಾಶ ಕೂಡಾ ಸೇರಿತ್ತು. ವಿರೋಧ ಬಳಿಕ ಈ ಎರಡು ನಿರ್ಧಾರಗಳನ್ನು ಕೈಬಿಡಲಾಗಿದೆ.
‘ನಿಯಂತ್ರಣ ವಲಯಗಳ ಮೇಲ್ವಿ
ಚಾರಣೆಗೆ ಇನ್ಸಿಡೆಂಟ್ ಕಮಾಂಡರ್
ನೇಮಿಸಿ, ಮ್ಯಾಜಿಸ್ಟೀರಿಯಲ್‌ ಅಧಿಕಾರ ನೀಡಲಾಗುವುದು. ನಿಯಂತ್ರಣ ವಲಯ
ದಲ್ಲಿ ಯಾರೂ ಮನೆಯಿಂದ ಹೊರಬರು
ವಂತಿಲ್ಲ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಬಫರ್‌ ವಲಯಗಳಲ್ಲಿ ಹೆಚ್ಚಿನ ಮನ್ನೆಚ್ಚರಿಕೆ ವಹಿಸಲಾಗುವುದು. ‘ನಗರಗಳಲ್ಲಿ ಕಾರ್ಮಿಕರ ವಾಸ್ತವ್ಯಕ್ಕೆ
ವ್ಯವಸ್ಥೆ ಇರುವ ಕಡೆಗಳಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾ
ಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ವಲಯದ ಕೈಗಾರಿಕೆಗಳು ಹಾಗೂ ನಗರಗಳಲ್ಲಿ ವಿಶೇಷ ಆರ್ಥಿಕ ವಲಯಗಳ (ಎಸ್ಇಝಡ್), ಕೈಗಾರಿಕಾ ವಸಾಹತುಗಳ ಮತ್ತು ಕೈಗಾರಿಕಾ ಟೌನ್‌ಷಿಪ್‌ಗಳ ಕಾರ್ಯನಿರ್ವಹಣೆಗೂ ಅವಕಾಶ ನೀಡಲಾಗುವುದು’‘ಅಂತರ ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ. ಬೆಂಗಳೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಕೈಗಾರಿಕೆಗಳ ಉದ್ಯೋಗಿಗಳ ಓಡಾಟದ ದೃಷ್ಟಿಯಿಂದ ಒಂದು ಜಿಲ್ಲೆಯಾಗಿ ಪರಿಗಣಿಸಲಾಗುವುದು. ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು. ಮಾಸ್ಕ್ ಧರಿಸುವುದು ಕಡ್ಡಾಯ. ಎಲ್ಲ ಕಡೆಗಳಲ್ಲಿ ಅಂತರ ಪಾಲನೆ ಕಡ್ಡಾಯ. ಉಗುಳುವುದನ್ನು ನಿಷೇಧಿಸಲಾಗಿದೆ. ಲಾಕ್‌ಡೌನ್‌ ಘೋಷಿಸಿರುವ (ಮೇ 3) ಅವಧಿವರೆಗೂ ನಿಷೇಧಾಜ್ಞೆ (ಸೆಕ್ಷನ್ 144) ಮುಂದುವರಿಯಲಿದೆ’.



No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ