WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, April 11, 2020

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ: ಸಾವು

ಹೊಸಪೇಟೆ: ತಾಲ್ಲೂಕಿನ ಮಲಪನಗುಡಿ ಬಳಿ ಶುಕ್ರವಾರ ದ್ವಿಚಕ್ರ ವಾಹನ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ ಹೊಡೆದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಗಾಳೆಮ್ಮನಗುಡಿಯ ರಾಮಪ್ಪ (60) ಮೃತರು.
'ರಾಮಪ್ಪ ಅವರು ಶುಕ್ರವಾರ ಮಧ್ಯಾಹ್ನ ಪಡಿತರ ತೆಗೆದುಕೊಂಡು ಹೋಗಲು ಮಲಪನಗುಡಿಗೆ ಬಂದಿದ್ದರು. ರಸ್ತೆ ದಾಟಿಕೊಂಡು ಹೋಗುವಾಗ ಈ ವೇಳೆ ಕಮಲಾಪುರದಿಂದ ನಗರದ ಕಡೆಗೆ ದ್ವಿಚಕ್ರ ವಾಹನದ ಮೇಲೆ ಇಬ್ಬರು ಯುವಕರು ಬರುತ್ತಿದ್ದರು. ಅವರನ್ನು ತಡೆಯಲೆತ್ನಿಸಿದಾಗ ತಪ್ಪಿಸಿಕೊಂಡು ಹೋಗುವ ಭರದಲ್ಲಿ ನಿಯಂತ್ರಣ ತ‍ಪ್ಪಿ ರಾಮಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ' ಎಂದು ಪೊಲೀಸ್‌ ಅಧಿಕಾರಿ  ತಿಳಿಸಿದ್ದಾರೆ.
'ಬೈಕ್‌ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲಾಗಿದೆ. ಯುವಕರು ಇಲ್ಲಿನ ಪಟೇಲ್‌ ನಗರದ ನಿವಾಸಿ ಎಂದು ಗೊತ್ತಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ' ಎಂದು ಹೇಳಿದ್ದಾರೆ.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ