WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, May 2, 2020

ನಡು ರಸ್ತೆಯಲ್ಲೇ ಸಚಿವ ಈಶ್ವರಪ್ಪ ಕಾಲಿಗೆ ಅಡ್ಡಬಿದ್ದ ತಹಸೀಲ್ದಾರ್‌..!

ಶಿವಮೊಗ್ಗ(ಮೇ.02): ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರ್‌ ಸಚಿವರ ಕಾಲಿಗೆ ಸಾರ್ವಜನಿಕವಾಗಿ ಅಡ್ಡ ಬಿದ್ದು ನಮಸ್ಕರಿಸಿದ ಘಟನೆ ಶುಕ್ರವಾರ ಇಲ್ಲಿ ನಡೆದಿದ್ದು, ಈ ಪ್ರಸಂಗ ಸಾರ್ವಜನಿಕರ ತೀವ್ರ ಟೀಕೆಗೆ ಒಳಗಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಎನ್‌. ಜೆ.ನಾಗರಾಜ್‌ ಅವರೇ ಈ ರೀತಿ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದವರು.
ತಮ್ಮ ಖಡಕ್‌ ಶೈಲಿಯಿಂದ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದ ತಹಸೀಲ್ದಾರ್‌ ಗಿರೀಶ್‌ ವರ್ಗಾವಣೆಗೊಂಡ ಬಳಿಕ ಆ ಸ್ಥಾನಕ್ಕೆ ನಿಯುಕ್ತಿಗೊಂಡ ನಾಗರಾಜ್‌ ಗುರುವಾರವಷ್ಟೇ ಅಧಿಕಾರ ಸ್ವೀಕರಿಸಿದ್ದರು. ಇದಕ್ಕೆ ಮುನ್ನ ಇವರು ಚೆನ್ನಗಿರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಶಂಕರಮೂರ್ತಿಗೆ ಮೋದಿ ದೂರವಾಣಿ ಕರೆ, ಸಹಪಾಠಿ ಆರೋಗ್ಯ ವಿಚಾರಿಸಿದ ಪ್ರಧಾನಿ
ಶುಕ್ರವಾರ ಮಧ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.
ಈಶ್ವರಪ್ಪ ಅವರು ಓಂ ಶಕ್ತಿ ಸಂಘಟನೆಯಿಂದ ಬಡವರಿಗೆ ಆಹಾರದ ಕಿಟ್‌ ಹಂಚುವ ಕಾರ್ಯಕ್ರಮಕ್ಕೆಂದು ಹಳೆ ತೀರ್ಥಹಳ್ಳಿ ರಸ್ತೆಗೆ ಆಗಮಿಸಿದ ವೇಳೆ ಅಲ್ಲಿಗೆ ಆಗಮಿಸಿದ ನಾಗರಾಜ್‌ ದಿಢೀರನೆ ಸಚಿವರ ಕಾಲಿಗೆ ಎರಗಿದರು. ಇದರ ಬೆನ್ನಲ್ಲೇ ಜೊತೆಗಿದ್ದ ಕಂದಾಯ ಅಧಿಕಾರಿ ವಿಜಯ್‌ಕುಮಾರ್‌ ಕೂಡಾ ಕಾಲಿಗೆ ಬಿದ್ದರು. ಈ ಘಟನೆ ಕಂಡು ಸಾರ್ವಜನಿಕರು ಒಂದು ಕ್ಷಣ ಆವಕ್ಕಾದರು. ತಾಲೂಕು ದಂಡಾಧಿಕಾರಿಯೂ ಆದ ತಹಶೀಲ್ದಾರ್‌ ಅವರ ಈ ವರ್ತನೆಗೆ ಸಾರ್ವಜನಿಕವಾಗಿ ವ್ಯಾಪಕ ಟೀಕೆ ಎದುರಾಗಿದೆ.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ