WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, June 18, 2020

ಮಹಾ ಮಳೆಗೆ ತುಂಬಿ ಹರಿಯುತ್ತಿರುವ ಕೃಷ್ಣೆ: ಹಿಪ್ಪರಗಿ ಜಲಾಶಯಕ್ಕೆ 44ಸಾವಿರ ಕ್ಯೂಸೆಕ್ಸ್ ನೀರು

ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೊಯ್ನಾ ಜಲಾಶಯ ಹಾಗೂ ರಾಜಾಪೂರ ಡ್ಯಾಂಗಳಿಂದ ನೀರು ಸರಾಗವಾಗಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಒಂದೇ ದಿನದಲ್ಲಿ ಬಾರಿ ಪ್ರಮಾಣದ ನೀರು ಹರಿದು ಬಂದಿದೆ.
ವಿಜಯಪುರ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಯ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಸಂಖ್ಯೆಯ ಜನ ಮತ್ತು ಜಾನುವಾರುಗಳಿಗೆ ಹಿಪ್ಪರಗಿ ಜಲಾಶಯ ಸಂಜೀವಿನಿಯಾಗಿದ್ದು, ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜಲಾಶಯ ನೋಡುಗರನ್ನು ಸೆಳೆಯುತ್ತಿದೆ. ಹಾಗೂ ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದರಿಂದ ಅಕ್ಕ ಪಕ್ಕದ ಗ್ರಾಮಗಳ ಜನರು ಹಾಗೂ ರೈತರ ಮುಖದಲ್ಲಿ ಮತ್ತಷ್ಟು ಮಂದಹಾಸ ಮೂಡಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಇಂದು ಹಿಪ್ಪರಗಿ ಜಲಾಶಯಕ್ಕೆ ಒಟ್ಟು 44,000 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಅದೇ ರೀತಿಯಾಗಿ ಜಲಾಶಯದಿಂದ 44,000 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಮುಂದೆ ಹರಿ ಬೀಡಲಾಗುತ್ತದೆ. ಜಲಾಶಯದ ನೀರಿನ ಮಟ್ಟ 521.60 ಮೀ ಆಗಿದೆ ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ ಪ್ರಶಾಂತ ಚನಗೋಂಡ ತಿಳಿಸಿದ್ದಾರೆ.
(ಮಾಹಿತಿ
ಉದಯವಾಣಿ ಕೃಪೆ ) 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ