WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Monday, June 15, 2020

ಶಿವಮೊಗ್ಗ: ಜಮೀನು ವಿವಾದದಿಂದ ಬೇಸರ, ವಿಷ ಕುಡಿದು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಕೌಟುಂಬಿಕ ಆಸ್ತಿ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರದ ಕಾಗಿನೆಲ್ಲಿ ಗ್ರಾಮದ ಸುಶೀಲಮ್ಮ(43) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ.
ಘಟನೆ ವಿವರ
ಸುಶೀಲಮ್ಮ ಅವರ ಪತಿ ಚಂದ್ರಪ್ಪ ಅವರು ಹತ್ತು ಎಕರೆ ಭೂಮಿಯನ್ನು ಖರೀದಿಸಿದ್ದರು. ಈ ಆಸ್ತಿಯನ್ನು ಆತ ತನ್ನ ತಾಯಿಯ ಹೆಸರಲ್ಲಿ ನೊಂದಾಯಿಸಿದ್ದರು. ಆದರೆ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಚಂದ್ರಪ್ಪ ಸೋದರರು ಈ ಆಸ್ತಿಯನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸುವಂತೆ ತಾಯಿಗೆ ಪೀಡಿಸುತ್ತಿದ್ದರು. ಈ ವಿಷಯದಲ್ಲಿ, ಸಹೋದರರು ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು.
ಅಂತಿಮವಾಗಿ ತಾಯಿ ಸೋದರರ ನಡುವೆ ಮಾತುಕತೆಗೆ ಸಿದ್ದತೆ ಂಆಡಿದ್ದಾರೆ.
ಅಲ್ಲದೆ ಆಸ್ತಿಯನ್ನು ಮೂವರು ಸಹೋದರರ ನಡುವೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದಾರೆ. ಆದರೆ ತನ್ನ ಪತಿಗೆ ಸೇರಿದ್ದ ಭೂಮಿಗೆ ಭೇಟಿ ನೀಡಿದ್ದ ಸುಶೀಲಮ್ಮನನ್ನು ಕಂಡ ಆಕೆಯ ಮೈದುನರು ಅವಾಚ್ಯ ಶಬ್ದಗಳನ್ನಾಡಿ ಅಪಮಾನಿಸಿದ್ದಾರೆ. ಇದರಿಂದಾಗಿ ಆಕೆಯ ಮನಸ್ಸಿಗೆ ಘಾಸಿಯಾಗಿದೆ.
ಮನನೊಂದಿದ್ದ ಸುಶೀಲಮ್ಮ ಮನೆಗೆ ತೆರಳಿದವಳೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಕುಡಿದಿದ್ದ ಆಕೆಯನ್ನು ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವ ಮೊದಲು ಆಕೆ ಕೊನೆಯುಸಿರೆಳೆದಿದ್ದಾಳೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಮಾಹಿತಿ ಕೃಪೆ ಕನ್ನಡಪ್ರಭ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ