WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Friday, June 19, 2020

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬಾಗಲಕೋಟೆ: ಸಾಲದ ಬಾಧೆಯಿಂದ ಬಾದಾಮಿ ತಾಲ್ಲೂಕಿನ ತಳಕವಾಡದ ರೈತ ಶಂಕರಪ್ಪ ಬಾದಾಮಿ (28) ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಪ್ಪ ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 1 ಲಕ್ಷ, ಕುಳಗೇರಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ₹ 3 ಲಕ್ಷ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ಕಳೆದ ಆಗಸ್ಟ್‌ನಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಜಮೀನಿನಲ್ಲಿದ್ದ ಬೆಳೆ ಹಾನಿಗೀಡಾಗಿತ್ತು. ಆಗಿನಿಂದ ಶಂಕರಪ್ಪ ಖಿನ್ನತೆಗೆ ಒಳಗಾಗಿದ್ದರು. ಸಾಲ ತೀರಿಸುವುದು ಹೇಗೆಂದು ನೊಂದಿದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ