
ಹೊಸಪೇಟೆ: ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಇಲ್ಲಿನ ಕ್ರೀಡಾ ಸಂಕೀರ್ಣದಲ್ಲಿ ಕೈಗೆತ್ತಿಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮಂಗಳವಾರ ಪರಿಶೀಲಿಸಿದರು.
₹1.44 ಕೋಟಿಯಲ್ಲಿ ಸ್ಕೇಟಿಂಗ್ ಅಂಕಣ, ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣ ನವೀಕರಣ, ಈಜುಕೊಳ ದುರಸ್ತಿ, ಸಭಾಂಗಣದ ನವೀಕರಣ ಕಾಮಗಾರಿ ವೀಕ್ಷಿಸಿದರು.
'ಗುಣಮಟ್ಟದ ಕಾಮಗಾರಿಗೆ ಒತ್ತು ಕೊಡಬೇಕು. ಕ್ರೀಡಾಂಗಣಕ್ಕೆ ಬರುವ ಜನರಿಗೆ ಕೂರಲು ಆಸನಗಳ ವ್ಯವಸ್ಥೆ ಮಾಡಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಅಧಿಕಾರಿ ಗನಿ ಸಾಬ್ ಇದ್ದರು.
(ಮಾಹಿತಿ ಕೃಪೆ ಪ್ರಜಾವಾಣಿ)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ