WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, December 16, 2020

ರಾಜ್ಯ ಸರ್ಕಾರದಿಂದ ವೃದ್ಧರು, ವಿಕಲಚೇತರಿಗೆ ಸಿಹಿಸುದ್ದಿ : ಮನೆ ಬಾಗಿಲಿಗೇ ಬರಲಿದೆ ಪಿಂಚಣಿ

 

ಬೆಂಗಳೂರು : ರಾಜ್ಯದ ಬಡಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮನೆಬಾಗಿಲಿಗೆ ಪಿಂಚಣಿದಾರರಿಗೆ ಪಿಂಚಣಿ ನೀಡುವ ಸೇವೆಯನ್ನು ಆರಂಭಿಸಿದೆ.

ವೃದ್ಧರು, ವಿಧವೆಯರು, ವಿಕಲಚೇತನರೂ ಸೇರಿದಂತೆ ಅರ್ಹರಿಗೆ ತೊಂದರೆಯಾಗದಂತೆ ರಾಜ್ಯ ಸರ್ಕಾರದಿಂದ ಪಿಂಚಣಿ ಒದಗಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಪಿಂಚಣಿ ಸೇವೆಯನ್ನು ಆರಂಭಿಸಿದೆ. ಪ್ರಾಯೋಗಿಕವಾಗಿ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸೇವೆ ಪರಿಚಯಿಸಲಾಗಿದೆ. 2021 ರ ಜನವರಿ ಅಥವಾ ಫೆಬ್ರವರಿಯಲ್ಲಿ ಈ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಳ್ಳಲಿದೆ.

ಇದುವರೆಗೂ ಅರ್ಜಿ ಸಲ್ಲಿಸದೇ ಇದ್ದರೂ ಕೂಡ ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ. ಅಂತಹ ಪಿಂಚಣಿದಾರರಿಗೆ ಮನೆಬಾಗಿಲಿಗೆ ಸಿಬ್ಬಂದಿ ಆಗಮಿಸಿ ದಾಖಲೆ ಪಡೆಯಲಿದ್ದಾರೆ. ಆಧಾರ್ ಕಾರ್ಡ್ ಹಾಗೂ ಓವರ್ ದಿ ಕೌಂಟರ್ ಸರ್ವೀಸ್ ನಡಿ 60 ವರ್ಷ ತುಂಬಿದವರ ವಿವರ, ಪಿಂಚಣಿ ಪಡೆಯಲು ಮಾನದಂಡವಾಗಿರುವ ವಾರ್ಷಿಕ ವರಮಾನ, ಆಸ್ತಿಯ ವಿವರಗಳು ಲಭ್ಯವಾಗಿದ್ದು, ಅರ್ಹ ಕುಟುಂಬಗಳನ್ನು ಗುರುತಿಸಲಾಗುತ್ತದೆ.ಈ ಮಾಹಿತಿ ಆಧಾರದ ಮೇಲೆ ಗ್ರಾಮ ಲೆಕ್ಕಾಧಿಕಾರಿಗಳು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಪಿಂಚಣಿ ಮಂಜೂರಾತಿಗೆ ಕ್ರಮ ಕೈಗೊಳ್ಳಲಿದ್ದಾರೆ.

(ಮಾಹಿತಿ ಕೃಪೆ Kannada News Now) 
 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ