WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Friday, October 2, 2020

ಹೊಸಪೇಟೆಯಲ್ಲಿ ಗಾಜಿನ ಮನೆ ನಿರ್ಮಾಣ

 

 

ಹೊಸಪೇಟೆ: 'ನಗರದಲ್ಲಿ ಗಾಜಿನ ಮನೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಬೇಕು' ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಗುರುವಾರ ಇಲ್ಲಿ ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ನಗರದಲ್ಲಿನ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣ ಪ್ರಾಧಿಕಾರದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಖನಿಜ ನಿಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
'ಗಾಜಿನ ಮನೆ ನಿರ್ಮಿಸಿದರೆ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ. ಅದರ ಜೊತೆಗೆ ಉದ್ಯಾನ ನಿರ್ಮಾಣಕ್ಕೂ ಯೋಜನೆ ಸಿದ್ಧಪಡಿಸಬೇಕು' ಎಂದು ತಿಳಿಸಿದರು.

'ತಾಲ್ಲೂಕಿನಾದ್ಯಂತ ಕೈಗೆತ್ತಿಕೊಂಡಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡಬೇಕು' ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶಗೆ ಸೂಚಿಸಿದರು.

ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಭಾಸ್ಕರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿಶೋರ್ ಕುಮಾರ್ ಇದ್ದರು. ಸಭೆಗೂ ಮುನ್ನ ಸಚಿವರು ನಗರ ಹೊರವಲಯದ ಜೋಳದರಾಶಿ ಗುಡ್ಡಕ್ಕೆ ಭೇಟಿ ನೀಡಿ ಅದರ ಅಭಿವೃದ್ಧಿ ಕುರಿತು ವಲಯ ಅರಣ್ಯ ಅಧಿಕಾರಿ ವಿನಯ್‌ ಅವರೊಂದಿಗೆ ಚರ್ಚಿಸಿದರು.

(ಮಾಹಿತಿ ಕೃಪೆಪ್ರಜಾವಾಣಿ)

 

 

Wednesday, September 30, 2020

ಇದು ಎಲ್ಲಾ ಮೇಲ್ಜಾತಿ ಜನರೂ ಪ್ರತಿಕ್ರಿಯಿಸಲೇಬೇಕಾದ ಸಮಯ, ಮಾಧ್ಯಮಗಳಲ್ಲಿರುವ ಮೇಲ್ಜಾತಿಯವರನ್ನೂ ಒಳಗೊಂಡು

 ನಮ್ಮ ಮಾಧ್ಯಮಗಳು ನಾಗರಿಕ ಸಮಾಜದ ಭಾಗವಾಗಿವೆಯೇ? ಅವರ ಕಣ್ಣಿಗೆ ಇದೊಂದು ದೊಡ್ಡ ಪ್ರಕರಣವಾಗಿ ಕಾಣುತ್ತಿಲ್ಲ, ಇದಕ್ಕೆ ಕಾರಣ ಮಾಧ್ಯಮಗಳಲ್ಲಿ ಮೇಲ್ಜಾತಿ ಹಿನ್ನೆಲೆಯ ಮತ್ತು ಮೇಲ್ಜಾತಿ ಮನಸ್ಥಿತಿಯ ಜನರೇ ಹೆಚ್ಚಿರುವುದು ಆಗಿರಬಹುದು.

 ಮೇಲ್ಜಾತಿ 

ಮನುಷ್ಯರು, ಮನುಷ್ಯತ್ವದ ಅಂಶವೇನಾದರೂ ಇದ್ದರೆ, ಪ್ರತಿಕ್ರಿಯಿಸಬೇಕಾದ ಘಟನೆಯಿದು ಎಂದೇ ಬರೆಯಬೇಕಿತ್ತು. ಆದರೆ ನಿರ್ದಿಷ್ಟವಾದ ಕಾರಣಕ್ಕಾಗಿ ಮೇಲ್ಜಾತಿ ಜನರು ಪ್ರತಿಕ್ರಿಯಿಸಬೇಕು ಎಂದು ಬರೆದಿದ್ದೇನೆ. ಹೈದ್ರಾಬಾದ್‌ನ ಅತ್ಯಾಚಾರ ಮತ್ತು ಕೊಲೆಯ ಘಟನೆಯಂತಹವು ಸಂಭವಿಸಿದಾಗ ಮೇಲ್ಜಾತಿಯ ಕುಟುಂಬಗಳಿಗೆ ಸೇರಿದ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆದಾಗ ಮಾತ್ರ ಮಾಧ್ಯಮಗಳು ಮತ್ತು ಸಮಾಜದ ಕೆಲವು ವಲಯಗಳು ಪ್ರತಿಕ್ರಿಯಿಸುತ್ತವೆ. ಆದರೆ ದಮನಿತ ಸಮುದಾಯಗಳಿಗೆ ಸೇರಿದ ಹೆಣ್ಣುಮಕ್ಕಳ ಮೇಲೆ ಈ ರೀತಿಯ ಅಥವಾ ಇದಕ್ಕಿಂತ ಭೀಕರವಾದ ಘಟನೆಗಳು ನಡೆದಾಗ ಅವರೆಲ್ಲರೂ ಮೌನವಾಗಿರುತ್ತಾರೇಕೆ? ಎಂಬ ಪ್ರಶ್ನೆಯನ್ನು ಹಲವರು ಕೇಳುತ್ತಾರೆ.

ಚಿತ್ರಕೃಪೆ: ಎನ್‌ಡಿಟಿವಿ 

ಆ ಸಂದರ್ಭ ನಿಜಕ್ಕೂ ತಳಮಳವನ್ನುಂಟು ಮಾಡುತ್ತದೆ. ಏಕೆಂದರೆ, ಆಗಲೂ ಒಬ್ಬ ಶೋಷಿತ ವ್ಯಕ್ತಿ (ಮಹಿಳೆಯಾಗಿರುವ ಕಾರಣದಿಂದ ಯಾವ ಜಾತಿ, ವರ್ಗಕ್ಕೆ ಸೇರಿದ್ದರೂ ಶೋಷಿತಳೇ) ತೀವ್ರ ಸ್ವರೂಪದ ದೌರ್ಜನ್ಯಕ್ಕೊಳಗಾಗಿರುತ್ತಾರೆ. ಕೆಲವೊಮ್ಮೆ ಕೊಲ್ಲಲ್ಪಟ್ಟಿರುತ್ತಾರೆ. ಅಂತಹ ಸಂದರ್ಭದಲ್ಲಿ ನೀವು ಇದಕ್ಕೇಕೆ ಇಷ್ಟೊಂದು ಪ್ರತಿಕ್ರಿಯಿಸುತ್ತೀರಿ ಎಂದು ಕೇಳುವುದು ಸತ್ತ ವ್ಯಕ್ತಿಗೆ ಅಪಮಾನ ಮಾಡಿದಂತೆ ಅನಿಸುತ್ತಿರುತ್ತದೆ. ಆದರೆ, ಈಗ ನಮ್ಮ ಒಬ್ಬ ಸೋದರಿ ಕೊಲ್ಲಲ್ಪಟ್ಟಿದ್ದಾಳೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಭೀಕರವಾಗಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾಗಿದ್ದಾಳೆ. ಆಕೆ ಅತ್ಯಂತ ಶೋಷಿತ ದಲಿತ ಸಮುದಾಯಕ್ಕೆ ಸೇರಿದ್ದರಿಂದಲೂ ಈ ಅತ್ಯಾಚಾರ ಮತ್ತು ಕೊಲೆ ನಡೆದಿದೆ. ಇದಾದ ನಂತರ ಎನ್‌ಕೌಂಟರ್‌ಗಳ ಮಾತಿರಲಿ (ಈ ಪ್ರಕರಣದ ಆರೋಪಿಗಳನ್ನೂ ಎನ್‌ಕೌಂಟರ್ ಮಾಡಬಾರದು, ಅವರಿಗೂ ಸಹಜ ನ್ಯಾಯಪ್ರಕ್ರಿಯೆಯೇ ನಡೆಯಬೇಕು, ಆ ಮಾತು ಬೇರೆ) ಪ್ರಕರಣದ ಬಲಿಪಶುವಿನ ಕುಟುಂಬದ ಮೇಲೆ ವ್ಯವಸ್ಥೆಯ ದೌರ್ಜನ್ಯ ಮುಂದುವರೆದಿದೆ. ಆ ಕುಟುಂಬದ ಕುಡಿಯ ಅಂತ್ಯಸಂಸ್ಕಾರವೂ ಗೌರವಯುತವಾಗಿ ನಡೆದಿಲ್ಲ. ಇವೆಲ್ಲಕ್ಕೂ ಕಾರಣ ಆಕೆ ದಲಿತ ಸಮುದಾಯಕ್ಕೆ ಸೇರಿದವಳು ಎಂಬುದಲ್ಲದೇ ಬೇರಿನ್ಯಾವ ಕಾರಣವಿದೆ? ಕುಟುಂಬಸ್ಥರು ಮತ್ತು ಗ್ರಾಮಸ್ಥರು ಗೋಗರೆಯುತ್ತಿರುವುದು. ಚಿತ್ರಕೃಪೆ: ಎನ್‌ಡಿಟಿವಿ

 ಅಂದ ಮೇಲೆ ಮನುಷ್ಯತ್ವ ಇರುವವರು, ಮಹಿಳೆಯರ ಮೇಲಿನ ಅತ್ಯಾಚಾರಗಳ ವಿರುದ್ಧ ಆಕ್ರೋಶಗೊಳ್ಳುವವರು ಈ ಸಂದರ್ಭದಲ್ಲಿ ಇನ್ನೂ ಗಟ್ಟಿಯಾಗಿ ದನಿಯೆತ್ತಬೇಕಿದೆ. ಈ ವಿಚಾರದಲ್ಲಿ ದೇಶಾದ್ಯಂತ ಇತರ ಪ್ರಕರಣಗಳಲ್ಲಿ ನಡೆದಂತಹದ್ದೇ ಅಥವಾ ಇನ್ನೂ ತೀವ್ರವಾದ – ಪ್ರತಿಭಟನೆಗಳು ನಡೆಯಬೇಕು. ಹಿಂದೆ ಆದಂತೆಯೇ ಮಹಿಳೆಯರ ಮೇಲಿನ, ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳ ಕಾರಣಗಳ ಮೂಲದ ಶೋಧನೆ ನಡೆಯಬೇಕು ಹಾಗೂ ಎಲ್ಲಾ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ತಡೆಗೆ ಕ್ರಮಗಳ ಕುರಿತ ಚರ್ಚೆ ಇನ್ನೊಮ್ಮೆ ಮುನ್ನೆಲೆಗೆ ಬರಬೇಕು. ವಿಶೇಷವಾಗಿ ದಲಿತ, ಆದಿವಾಸಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು, ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ತಡೆಗೂ ಪ್ರಯತ್ನ ಆಗಬೇಕು.

ಈ ವಿಚಾರದಲ್ಲಿ ಮೇಲ್ಜಾತಿ ಹಿನ್ನೆಲೆಯವರು ಪ್ರಬಲವಾದ ದನಿಯನ್ನು ಹೊರಡಿಸದಿದ್ದರೆ ಅವರೂ ತಪ್ಪಿನಲ್ಲಿ ಭಾಗಿಯಾದಂತೆಯೇ ಆಗುತ್ತದೆ. ಇನ್ನೊಮ್ಮೆ ಮೇಲ್ಜಾತಿ ಅಥವಾ ಸ್ಥಿತಿವಂತ ಕುಟುಂಬಗಳ ಹೆಣ್ಣುಮಕ್ಕಳ ವಿಚಾರದಲ್ಲಿ ಮಾತ್ರ ದನಿಯೆತ್ತಿದರೆ ಅದಕ್ಕೂ ಒಂದು ಕಳಂಕ ಇದ್ದೇ ಇರುತ್ತದೆ. ಹಾಗೂ ನೀವು ಇಂತಹ ಸಂದರ್ಭದಲ್ಲಿ ಮಾತ್ರ ಏಕೆ ಗಟ್ಟಿದನಿ ಎತ್ತುತ್ತಿದ್ದೀರಿ? ಎಂಬ ಪ್ರಶ್ನೆ ಎದುರಾದರೆ ಆ ಪ್ರಶ್ನೆಗೆ ನೈತಿಕಬಲವೂ ಇರುತ್ತದೆ.

 ಇದನ್ನು ದಲಿತ ಹೆಣ್ಣುಮಗಳ ಅತ್ಯಾಚಾರ ಮತ್ತು ಕೊಲೆಯೆಂಬ ಹಿನ್ನೆಲೆಯಲ್ಲಿ ನೋಡಬಾರದು, ಇದನ್ನೂ ಒಂದು ಮಹಿಳೆಯ ಮೇಲಾದ ದೌರ್ಜನ್ಯವೆಂಬಷ್ಟೇ ನೋಡಬೇಕು ಎಂಬ ವಾದ ಸಾಮಾನ್ಯವಾಗಿ ಬರುತ್ತದೆ. ಅವರು ಈ ಘಟನೆಯ ವಿಚಾರದಲ್ಲಿ ಒಂದು ಮೂಲಭೂತ ಸಂಗತಿಯನ್ನು ಮರೆಯುತ್ತಾರೆ. ಮಹಿಳೆಯಾದ ಕಾರಣಕ್ಕೆ ಅತ್ಯಾಚಾರ ಮತ್ತು ಕೊಲೆ ಆಗುತ್ತದೆಂಬುದು ನಿಜವೇ. ಆದರೆ ಅದನ್ನು ಹೊರತುಪಡಿಸಿದರೆ ಸ್ಥಿತಿವಂತ ಕುಟುಂಬದವರಿಗೆ ಆಗುವ ನೋವುಗಳಿಗೆ ಸಮಾಜದ ಆಯಕಟ್ಟಿನ ಜಾಗದಲ್ಲಿರುವವರು ಪ್ರತಿಕ್ರಿಯಿಸುವ ಬಗೆಯೇ ಬೇರೆ.

ಕುಟುಂಬದವರನ್ನು ಬಂಧನದಲ್ಲಿಟ್ಟಿರುವುದು. ಚಿತ್ರ ಕೃಪೆ: ಎನ್‌ಡಿಟಿವಿ

ಈ ಪ್ರಕರಣವನ್ನೇ ನೋಡಿ: ಸಾಮಾನ್ಯವಾಗಿ ಯಾರಾದರೂ ಬಲಿಪಶುವಾಗಿದ್ದರೆ ಅವರ ಕುಟುಂಬದ ಸದಸ್ಯರ ಜೊತೆ ಪೊಲೀಸರು ಹೇಗೆ ವರ್ತಿಸುತ್ತಾರೆ? ಅದರಲ್ಲೂ ಸಾಕಷ್ಟು ಸುದ್ದಿಯಾದ ಪ್ರಕರಣವಾಗಿದ್ದರೆ ಪೊಲೀಸರೇ ಎಲ್ಲಾ ವ್ಯವಸ್ಥೆಯನ್ನು ಆ ಕುಟುಂಬದವರು ಹೇಗೆ ಹೇಳುತ್ತಾರೋ ಹಾಗೆ ಮಾಡುತ್ತಾರೆ. ಇಲ್ಲಿ, ಕುಟುಂಬದ ಜನರಿಗೆ ಗೊತ್ತೇ ಇಲ್ಲದಂತೆ ತಾವೇ ಎತ್ತಿಕೊಂಡು ಹೋಗಿ ಶವವನ್ನು ಸುಟ್ಟು ಹಾಕಿದ್ದಾರೆ.

ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆ ಆಗುತ್ತದೆಂಬ ಕಾರಣಕ್ಕೆ ಹೀಗೆ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಸಮರ್ಥಿಸಿಕೊಳ್ಳಬಹುದು. ಅಂದರೆ ದಲಿತ ಸಮುದಾಯಕ್ಕೆ ಸೇರಿದ ಕುಟುಂಬವೊಂದು ತನ್ನ ಮಗಳ ಹತ್ಯೆಗೆ ಸಿಟ್ಟು ತೋರ್ಪಡಿಸಿ ಶೋಕ ವ್ಯಕ್ತಪಡಿಸಲೂ ಅವಕಾಶವಿರುವುದಿಲ್ಲ. ಅದನ್ನು ಕಾನೂನು ಸುವ್ಯವಸ್ಥೆಯ ಸಮಸ್ಯೆ ಎಂದು ಭಾವಿಸಲಾಗುತ್ತದೆ. ಮೇಲ್ಜಾತಿಯವರಾಗಿದ್ದರೆ, ಅವರ ಪರವಾಗಿ ಕಾನೂನುಬಾಹಿರವಾಗಿ ಪ್ರತೀಕಾರ ತೆಗೆದುಕೊಳ್ಳಲು ಸ್ವತಃ ಪೊಲೀಸ್ ಅಧಿಕಾರಿಗಳೇ ಸಿದ್ಧವಾಗಿರುತ್ತಾರೆ. ಇದು ದೇಶದ ವಾಸ್ತವ ಪರಿಸ್ಥಿತಿ. ಹೀಗಿರುವಾಗ ನಮ್ಮೆಲ್ಲರ ಪ್ರತಿಭಟನೆಯ ಅಗತ್ಯ ಹೆಚ್ಚಿರುವುದು ದುರ್ಬಲ ಸಮುದಾಯದವರಿಗೆ ಅಲ್ಲವೇ? ಅದರಲ್ಲಿ ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಬರುತ್ತಾರೆ. ಹೆಚ್ಚು ದುರ್ಬಲರಾದವರ ಪರವಾಗಿ ಹೆಚ್ಚು ಪ್ರಬಲವಾದ ದನಿಯೆತ್ತುವುದು ನಾಗರಿಕ ಸಮಾಜದ ಲಕ್ಷಣವಾಗಿರುತ್ತದೆ.

ಆದರೆ ನಮ್ಮ ಮಾಧ್ಯಮಗಳು ನಾಗರಿಕ ಸಮಾಜದ ಭಾಗವಾಗಿವೆಯೇ ಎಂಬ ಪ್ರಶ್ನೆ ಬರುತ್ತದೆ. ಅವರ ಕಣ್ಣಿಗೆ ಇದೊಂದು ದೊಡ್ಡ ಪ್ರಕರಣವಾಗಿ ಕಾಣುತ್ತಿಲ್ಲ. ಈ ಮಾಧ್ಯಮಗಳಲ್ಲಿ ಮೇಲ್ಜಾತಿ ಹಿನ್ನೆಲೆಯ ಮತ್ತು ಮೇಲ್ಜಾತಿ ಮನಸ್ಥಿತಿಯ ಜನರೇ ಹೆಚ್ಚಿರುವುದು ಇದಕ್ಕೆ ಕಾರಣವಿರಬಹುದು. ಈ ಘಟನೆಯು ಅವರಿಗೆ ನೋವುಂಟು ಮಾಡದಿರುವುದಕ್ಕೆ, ಘಟನೆಯಲ್ಲಿ ಬಲಿಯಾದವರೊಂದಿಗೆ ತಮ್ಮನ್ನು ಸಮೀಕರಿಸಿಕೊಂಡು ನೋಡಲಾಗದಿರುವುದಕ್ಕೆ ಅದೇ ಕಾರಣವಿರಬಹುದು. ಆದರೆ ಕನಿಷ್ಠ ಒಂದು ಪ್ರಜಾತಾಂತ್ರಿಕ ಪ್ರಜ್ಞೆಯಾದರೂ ಕೆಲಸ ಮಾಡಬೇಕಲ್ಲವೇ? ಅದೂ ಇಲ್ಲದಿದ್ದರೆ ಅದನ್ನು ಜರ್ನಲಿಸಂ ಎಂದು ಏಕೆ ಕರೆಯಲಾಗದು. ಈ ಸಂದರ್ಭದಲ್ಲಿ ದೇಶದ ಎಲ್ಲಾ ಮಾಧ್ಯಮ ಸಂಸ್ಥೆಗಳು ಈ ಘಟನೆಯನ್ನು ಹೆಚ್ಚೆಚ್ಚು ಪ್ರಚಾರಕ್ಕೆ ತರಲು ಶ್ರಮಿಸಿದಲ್ಲಿ ಅವರ ಪಾಪದಲ್ಲಿ ಸ್ವಲ್ಪವಾದರೂ ಕಡಿಮೆಯಾಗಬಹುದೇನೋ. 

 ಕೊನೆಯದಾಗಿ, ಈ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಬೇಕಾದ್ದು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವಿದೆಯೆಂಬ ಕಾರಣಕ್ಕಾಗಿರಬಾರದು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇನೆ, ಗೂಂಡಾರಾಜ್‌ಗೆ ಅಂತ್ಯ ಹಾಡಿದ್ದೇನೆಂಬುದು ಬೊಗಳೆಯೆಂಬುದು ನಿಜ; ಅದಕ್ಕಾಗಿ ಖಂಡಿಸಬೇಕು. ಆದರೆ ಅದು ಬಿಜೆಪಿ ಮತ್ತು ಆರೆಸ್ಸೆಸ್ ಸರ್ಕಾರ ಎಂಬ ಏಕೈಕ ಕಾರಣಕ್ಕೆ ತೀವ್ರವಾಗಿ ವಿರೋಧಿಸಿದರೆ ಅದೂ ತಪ್ಪೇ. ಯಾವುದೇ ಸರ್ಕಾರವಿದ್ದರೂ ಇದರ ಹೊಣೆಗಾರಿಕೆಯನ್ನು ಅದು ಹೊರಬೇಕಾಗುತ್ತದೆ. ಆ ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ವೈಫಲ್ಯವನ್ನು ಖಂಡಿಸಬೇಕು.

ಎಲ್ಲಾ ಹೆಣ್ಣುಮಕ್ಕಳ ಮತ್ತು ಎಲ್ಲಾ ಶೋಷಿತ ಸಮುದಾಯಗಳ ಪರವಾಗಿ ದೇಶದ ಎಲ್ಲಾ ಜನರೂ ದನಿಯೆತ್ತಲಿ. ಮೇಲ್ಜಾತಿಗಳಿಗೆ ಸೇರಿದ ಜನರು ಇನ್ನೂ ಗಟ್ಟಿಯಾದ ದನಿಯಲ್ಲಿ ಮಾತಾಡಲಿ. ಹತ್ರಾಸ್‌ನ ಈ ಘಟನೆಯು ದೇಶದ ಕಣ್ಣು, ಹೃದಯವನ್ನು ತೆರೆಸಲಿ.

– ವಾಸು.ಎಚ್.ವಿ

(ಮಾಹಿತಿ ಕೃಪೆNaanu Gouri.com)

 

ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆಶವ ಹೆತ್ತವರಿಗೆ ನೀಡದೇ ರಾತ್ರೋರಾತ್ರಿ ದಹನ ಮಡಲಾಗಿದೆ

 

 
 ಸಹೋದರಿ ಮನೀಷಾಳ ಅತ್ಯಾಚಾರವಾಯ್ತು,
ಆ ನೋವ್ವು ತಡೆಯಲಾರದೆ ಉಸಿರು ನಿಲ್ಲಿಸಿದಳು,
ಸತ್ಯವನ್ನು  ಸತ್ಯವನ್ನು ಮರೆಮಾಚಲು ಪೊಲೀಸರು
ರಾತ್ರೋರಾತ್ರಿ  ಸಾಕ್ಷನಾಶ ಮಾಡಲು ಸಹೋದರಿಯ ಮೃತದೇಹವನ್ನು ಪೋಷಕರನ್ನು ತೀರಿಸದೇ ಸುಟ್ಟುಹಾಕಿದರು,
ಇನ್ನು ಮುಂದಿನ ಕೆಲಸ ಹೆಣ್ಣು ಮಕ್ಕಳನ್ನ ಹೆತ್ತಿದ್ದೆ ತಪ್ಪು ಎಂದು ಪೋಷಕರನ್ನು ಜೈಲಿಗೆ ಅಟ್ಟಿ....ಇತ್ತಾ ಅತ್ಯಾಚಾರ ಸಂತ್ರಸ್ತೆಯ ಪರ ದ್ವನಿ ಮಾಡಿದ ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್ ಅಜಾದ ರವರನ್ನು ಬಂದಿಸಿದ್ದಾರೆ ಯೋಗಿ ಆಡಳಿತ ದೇಶಕ್ಕೆ ಮಾದರಿ ಆಗಬೇಕು ಎಂದು ದೇಶಾದ್ಯಂತ ಪ್ರಚಾರ...





 

ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ.
ಮೊದಲು ಇವರನ್ನು ವಜಾ ಮಾಡಿ.  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದರು
 


ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

 

 

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7 ರಷ್ಟು ಹೆಚ್ಚಾಗಿದೆ.

ಕ್ರೈಮ್ಸ್ ಇನ್ ಇಂಡಿಯಾ -2019ರ ವರದಿಯ ಪ್ರಕಾರ, ಹಿಂದಿನ (2018) ವರ್ಷಕ್ಕಿಂತ 2019ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಶೇಕಡಾ 7.3 ರಷ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಪ್ರಮಾಣವು 2019 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ, ಶೇಕಡಾ 62.4 ರಷ್ಟಿದ್ದು, ಇದು 2018 ರ ಶೇಕಡಾ 58.8ಕ್ಕಿಂತ ಹೆಚ್ಚಾಗಿದೆ. 2018 ರಲ್ಲಿ ದೇಶದಲ್ಲಿ 3,78,236 ಅಪರಾಧ ಪ್ರಕರಣಗಳು ದಾಖಲಾಗಿವೆ.

ಆದರೆ, 2018 ರಲ್ಲಿ ದೇಶಾದ್ಯಂತ 33,356 ಅತ್ಯಾಚಾರಗಳು ದಾಖಲಾಗಿದ್ದು, 2017 ರಲ್ಲಿ 32,559 ರಷ್ಟಿತ್ತು ಎಂಬುದಾಗಿ ಅಂಕಿಅಂಶಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಈ ಪ್ರಕರಣಗಳಲ್ಲಿ ಹೆಚ್ಚಿನವು (ಶೇಕಡಾ 30.9) ಭಾರತೀಯ ದಂಡ ಸಂಹಿತೆಯಡಿ ‘ಪತಿ ಅಥವಾ ಅವರ ಸಂಬಂಧಿಕರಿಂದ ಕ್ರೌರ್ಯ’ದ ಸೆಕ್ಷನ್ ಅಡಿಯಲ್ಲಿ ದಾಖಲಾಗಿದ್ದು, ನಂತರದ ಸ್ಥಾನದಲ್ಲಿ, ‘ಮಹಿಳೆಯರ ಮೇಲಿನ ಹಲ್ಲೆ’ (ಶೇಕಡಾ 21.8), ‘ಮಹಿಳೆಯರ ಅಪಹರಣ (ಶೇ 17.9) ಎಂದು 2019 ರ NCRB ಅಂಕಿಅಂಶಗಳು ತಿಳಿಸಿವೆ.

NCRB ಸಂಗ್ರಹಿಸಿದ ಅಂಕಿ ಅಂಶಗಳ ಪ್ರಕಾರ, ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಹೆಚ್ಚಳವಾಗಿವೆ. 2018 ಕ್ಕಿಂತ 2019 ರಲ್ಲಿ ಶೇಕಡಾ 4.5 ರಷ್ಟು ಹೆಚ್ಚಾಗಿದೆ.

2019 ರಲ್ಲಿ ಒಟ್ಟು 1.48 ಲಕ್ಷ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 46.6 ರಷ್ಟು ಅಪಹರಣ ಪ್ರಕರಣಗಳು ಮತ್ತು 35.3 ರಷ್ಟು ಪ್ರಕರಣಗಳು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿವೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ NCRB, ದೇಶಾದ್ಯಂತದ ಅಪರಾಧ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. 36 ರಾಜ್ಯಗಳು ಮತ್ತು 53 ಮೆಟ್ರೋಪಾಲಿಟನ್ ನಗರಗಳಿಂದ ಅಂಕಿಅಂಶಗಳನ್ನು ಒಟ್ಟುಗೂಡಿಸಿದ ನಂತರ ಸಂಸ್ಥೆ ಮೂರು ಸಂಪುಟಗಳ ವರದಿಯನ್ನು ಸಂಗ್ರಹಿಸಿ, ಬಿಡುಗಡೆ ಮಾಡಿದೆ.


(ಮಾಹಿತಿ ಕೃಪೆNaanu Gouri.com)

 

 

 

Tuesday, September 29, 2020

ಜಾಗತಿಕವಾಗಿ ಕೊರೊನಾಗೆ ಬಲಿಯಾದವರ ಸಂಖ್ಯೆ 10 ಲಕ್ಷ ದಾಟಿದೆ!

 

 

ನವದೆಹಲಿ, ಸೆಪ್ಟೆಂಬರ್ 29: ಜಾಗತಿಕವಾಗಿ ಮಹಾಮಾರಿ ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರ ಸಂಖ್ಯೆಯು ವಿಶ್ವದಾದ್ಯಂತ 1 ಮಿಲಿಯನ್‌ಗಿಂತಲೂ (10 ಲಕ್ಷ) ಹೆಚ್ಚಾಗಿದೆ.

ರಾಯಿಟರ್ಸ್ ಲೆಕ್ಕಾಚಾರದ ಪ್ರಕಾರ ಜಾಗತಿಕವಾಗಿ ಕೋವಿಡ್ ಸಾಂಕ್ರಾಮಿಕಕ್ಕೆ 10 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದು, ಹಲವಾರು ದೇಶಗಳಲ್ಲಿ ಸೋಂಕುಗಳು ಮತ್ತೆ ಹೆಚ್ಚಾಗುವುದರಿಂದ ಸಾವು-ನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ. ಕೊರೊನವೈರಸ್-ಸಂಬಂಧಿತ ಕಾಯಿಲೆಗಳ ಸಾವು ಕೇವಲ ಮೂರು ತಿಂಗಳಲ್ಲಿ ಅರ್ಧ ಮಿಲಿಯನ್‌ನಿಂದ ದ್ವಿಗುಣಗೊಂಡಿದೆ. ಇದು ಅಮೆರಿಕಾ, ಬ್ರೆಜಿಲ್ ಮತ್ತು ಭಾರತದಲ್ಲಿ ಸಂಭವಿಸಿದ ಸಾವುಗಳು ಹೆಚ್ಚಾದ ಪರಿಣಾಮ ಒಟ್ಟು ಪ್ರಮಾಣದಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

 

(ಮಾಹಿತಿ ಕೃಪೆOneindia)


 

ಶಾಲಾ ಕಾಲೇಜು ಆರಂಭ ಕುರಿತ ಚರ್ಚೆ; ಸಚಿವ ಆನಂದ ಸಿಂಗ್ ಸಲಹೆ

 

 

ಬಳ್ಳಾರಿ, ಸೆಪ್ಟೆಂಬರ್ 29: ಶಾಲೆಗಳನ್ನು ಪ್ರಾರಂಭ ಮಾಡುವ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಸದ್ಯಕ್ಕೆ ಶಾಲೆ ಆರಂಭ ಮಾಡುವುದು ಬೇಡ ಎನ್ನುವುದು ನನ್ನ ಅನಿಸಿಕೆ ಎಂದು ಅರಣ್ಯ ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಇಂದು ಡಿಎಂಎಫ್ ಸಭೆ ಬಳಿಕ ಮಾತನಾಡಿದ ಅವರು, ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಎಲ್ ಕೆಜಿ, ಯುಕೆಜಿಯಿಂದ ಶಾಲೆ ಆರಂಭ ಮಾಡುವುದು ಸೂಕ್ತ ಅಲ್ಲ. ಚಿಕ್ಕ- ಚಿಕ್ಕ ಮಕ್ಕಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ. ರಾಜಕಾರಣಿಗಳಾದ ನಾವೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆಗುತ್ತಿಲ್ಲ, ಇನ್ನು ಮಕ್ಕಳ ಪಾಡೇನು? ಒಂದು ವೇಳೆ ಶಾಲೆ ಆರಂಭ ಮಾಡುವುದಾದರೆ ಮೊದಲು ಕಾಲೇಜುಗಳನ್ನು ಆರಂಭ ಮಾಡಿ ಎಂದು ಸಲಹೆ ನೀಡಿದ್ದಾರೆ.

ಸಚಿವ ಸುರೇಶ ಕುಮಾರ್ ಅವರು ಈ ವಿಷಯದಲ್ಲಿ ತುಂಬಾ ಜಾಗ್ರತರಾಗಿದ್ದಾರೆ. ಅವರೊಬ್ಬ ಹಿರಿಯ ಮೇಧಾವಿ ರಾಜಕಾರಣಿ, ಹೀಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ಇದೆ ಎಂದಿದ್ದಾರೆ.

ಇದೇ ಸಂದರ್ಭ, ಬೆಂಗಳೂರು ಉಗ್ರರ ಹಬ್ ಆಗಿದೆ ಎಂಬ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬೆಂಗಳೂರು ಉಗ್ರರ ಹಬ್ ಅನ್ನುವ ಅರ್ಥದಲ್ಲಿ ಅವರು ಹೇಳಿಲ್ಲ. ಈ ಹಿಂದೆ ನಡೆದ ಘಟನೆಗಳನ್ನಾಧರಿಸಿ, ಎನ್ ಐಎ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿ, ಇದರಿಂದ ಈ ಭಾಗದಲ್ಲಿ ಉಗ್ರರ ಚಟುವಟಿಕೆ ನಿಯಂತ್ರಿಸಲು ಸಾಧ್ಯವಾಗುತ್ತದೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಹೀಗಾಗಿ ಅವರ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.

(ಮಾಹಿತಿ ಕೃಪೆOneindia)

 

 

 

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಶರಣಾದ ಬಳ್ಳಾರಿಯ ದಂಪತಿ

 

 

ಬಳ್ಳಾರಿ, ಸೆಪ್ಟೆಂಬರ್ 29: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದಲ್ಲಿ ನಿನ್ನೆ ಸೆ.28ರ ರಾತ್ರಿ ನಡೆದಿದೆ.

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಶಿಂಗ್ರಿಹಳ್ಳಿ ಸುಧಾ (30) ಎಂಬುವವರು ಕ್ರಿಮಿನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವನ್ನು ಕಂಡು, ಎಲ್ಲಿ ತನ್ನ ಮೇಲೆ ಆರೋಪ ಬರುತ್ತದೋ ಎಂದು ಹೆದರಿ ಪತಿ ತೆಲಿಗರ ಹನುಮಂತಪ್ಪ (33) ಕೂಡ ತನ್ನ ಜಮೀನಿಗೆ ತೆರಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. 

ಘಟನೆಯ ವಿವರ: ಮದುವೆಯಾಗಿ ಮೂರು ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ವಿಷಯವಾಗಿ ಆಗಾಗ್ಗೆ ಜಗಳವೂ ನಡೆಯುತ್ತಿತ್ತು. ಇದರಿಂದ ಮನನೊಂದ ಪತ್ನಿ ಸುಧಾ, ಗಂಡನ‌ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಸಾವಿನ ಆರೋಪ ತನ್ನ ಮೇಲೆ ಬರುತ್ತದೆ ಎಂಬ ಕಾರಣಕ್ಕೆ ಪತಿ ಹನುಮಂತಪ್ಪ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಸುಧಾ ಅವರ ತಂದೆ ಹಾಗೂ ಮೃತ ಹನುಮಂತಪ್ಪನ ಸಹೋದರ ಇಬ್ಬರು ಪ್ರತ್ಯೇಕವಾಗಿ ದೂರು ನೀಡಿದ್ದು. ಈ ಕುರಿತು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ ಅನಿಲ್ಕುಮಾರ ಹಾಗೂ ವೃತ್ತ ನಿರೀಕ್ಷಕ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.  

(ಮಾಹಿತಿ ಕೃಪೆOneindia)

Sunday, September 27, 2020

ಹೊಸಪೇಟೆಯಲ್ಲಿ ಸತತ ಮಳೆ: ಮೂರು ಮನೆ ಕುಸಿತ

 

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಕೆಲವೆಡೆ ಸತತ ಮೂರನೇ ದಿನವೂ ಮಳೆ ಮುಂದುವರೆದಿದೆ. ಮತ್ತೆ ಹಲವೆಡೆ ಬಿಡುವು ಕೊಟ್ಟಿದೆ.

ಜಿಲ್ಲೆಯ ಹೊಸಪೇಟೆ, ಕಂಪ್ಲಿ ನಗರ ಹಾಗೂ ತಾಲ್ಲೂಕಿನ ಸುತ್ತಮುತ್ತ ಭಾನುವಾರವೂ ಉತ್ತಮ ಮಳೆಯಾಗಿದೆ. ಬೆಳಿಗ್ಗೆ ದಟ್ಟ ಕಾರ್ಮೋಡ ಕವಿದಿತ್ತು. ವಾತಾವರಣ ತಂಪಾಗಿತ್ತು. ಮಧ್ಯಾಹ್ನ ಆರಂಭಗೊಂಡ ಮಳೆ ಸಂಜೆಯೂ ಮುಂದುವರೆದಿತ್ತು.

ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಎರಡು, ಅಯ್ಯನಹಳ್ಳಿ ಗ್ರಾಮದಲ್ಲಿ ಒಂದು ಮನೆ ಭಾನುವಾರ ಕುಸಿದು ಬಿದ್ದಿದೆ.

ಭಾನುವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಬಂದಿದ್ದರು. ಮಧ್ಯಾಹ್ನ ಮಳೆ ಬಂದರೂ ಜನ ಅದನ್ನು ಲೆಕ್ಕಿಸದೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ಇನ್ನೂ ಜಿಲ್ಲೆಯ ಬಳ್ಳಾರಿ, ಕೂಡ್ಲಿಗಿ, ಕುರುಗೋಡು, ಸಂಡೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಸಿರುಗುಪ್ಪದಲ್ಲಿ ಮಳೆ ಬಿಡುವು ಕೊಟ್ಟಿದೆ. ಆದರೆ, ದಟ್ಟ ಮೋಡ ಕವಿದಿತ್ತು.

(ಮಾಹಿತಿ ಕೃಪೆ ಪ್ರಜಾವಾಣಿ)

ಕೃಷಿ ಮಸೂದೆ ವಿರೋಧಿಸಿ ಬಂದ್: ನಾಳೆ ಏನಿರುತ್ತೆ..? ಏನಿರಲ್ಲ? ಇಲ್ಲಿದೆ ವಿವರ

 

 

ಬೆಂಗಳೂರು: ಸರ್ಕಾರ ಜಾರಿ ತರಲು ಇಚ್ಛಿಸಿರುವ ಕೃಷಿ ಮಸೂದೆ ವಿಚಾರವಾಗಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ರೈತಪರ ಸಂಘಟನೆಗಳು ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ನೀಡಿದ್ದು ನಾಳೆ ರಾಜ್ಯದಲ್ಲಿ ಜನಜೀವನ ಅಸ್ತವಸ್ಥವಾಗುವ ಸಾಧ್ಯತೆ ಇದೆ.

ನಾಳೆ ಬಂದ್ ಹಿನ್ನಲೆಯಲ್ಲಿ ಇಡೀ ಕರ್ನಾಟಕ ಸ್ಥಬ್ಧವಾಗಲಿದ್ದು, ಸ್ವಲ್ಪ ವ್ಯತ್ಯಯ ಆಗಲಿದೆ. ರೈತಪರ ಸಂಘಟನೆಗಳಿಗೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದು, ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ನೀಡಿವೆ. ರಾಜ್ಯದ 2 ರೈತ ಸಂಘಗಳಾದ ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ರೈತ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಆಶಾ ಜನಶಕ್ತಿ ಸಂಘ ಸೇರಿದಂತೆ 9 ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಬಂದ್ ಗೆ ಕನ್ನಡಪರ ‌ಸಂಘಟನೆಗಳು ಕರ್ನಾಟಕ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿವೆ. ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಓಲಾ-ಉಬರ್ ಚಾಲಕರ ಸಂಘಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ. ಇದರ ಜೊತೆಗೆ ಸಿಐಟಿಯು ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿದೆ. ರೈತರ ಹೋರಾಟಕ್ಕೆ ಬೀದಿ ಬದಿ ವ್ಯಾಪಾರಿಗಳು ಸಂಪೂರ್ಣ ಬೆಂಬಲ ನೀಡಿವೆ. ಹಾಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆವರೆಗೂ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ ಅಂತಾ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ನಾಳೆ ಕರ್ನಾಟಕ ಬಂದ್ ಏನಿರುತ್ತೆ?
ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ನಾಳೆಯೂ ಇರಲಿದೆ. ಆಸ್ಪತ್ರೆ, ಮೆಡಿಕಲ್ ಸೇವೆಗಳಿಗೆ ಯಾವುದೇ ಅಡಚಣೆಯಾಗಲ್ಲ. ಪೆಟ್ರೋಲ್ ಬಂಕ್‌ ಮಾಲೀಕರು ನೈತಿಕವಾಗಿ ಬಂದ್‌ಗೆ ಬೆಂಬಲ ನೀಡಿರೋದ್ರಿಂದ ಪೆಟ್ರೋಲ್ ಬಂಕ್ ಓಪನ್ ಇರುತ್ತೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗೋದಿಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ. . ಹೋಟೆಲ್ ಮಾಲೀಕರು ಸಹ ನೈತಿಕ ಬೆಂಬಲ ನೀಡಿದ್ದು, ಶುಕ್ರವಾರ ಹೋಟೆಲ್ ಸೇವೆ ಇರುತ್ತೆ ಅಂದಿದ್ದಾರೆ. ಮದ್ಯದ ಅಂಗಡಿ ಮಾಲೀಕರು ನೈತಿಕ ಬೆಂಬಲ ನೀಡಿದ್ದು, ಎಲ್ಲಾ ಮದ್ಯದ ಅಂಗಡಿಗಳು ಓಪನ್ ಇರುತ್ತೆ.

ನಾಳೆ ಬಂದ್‌ವೇಳೆ ಏನಿರಲ್ಲ?
ನಾಳೆ ಓಲಾ-ಉಬರ್ ಸೇವೆ ಸಿಗೋದು ಬಹುತೇಕ ಅನುಮಾನವಾಗಿದೆ. ಇದೇ ರೀತಿ ಆಟೋ-ಟ್ಯಾಕ್ಸಿಗಳು ಸಹ ರಸ್ತೆಗಿಳಿಯೋದು ಡೌಟ್. ಖಾಸಗಿ ಬಸ್​ ಸೇವೆ ನಾಳೆ ಬಂದ್ ಆಗುವ ಸಾಧ್ಯತೆ ಇದೆ.

ಇನ್ನು ಪೆಟ್ರೋಲ್- ಡಿಸೇಲ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘದಿಂದ, ಬಾರ್ ಮಾಲೀಕರ ಅಸೋಸಿಯೇಷನ್‌, ಖಾಸಗಿ ಬಸ್‌ಗಳ ಒಕ್ಕೂಟದಿಂದ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘ, ಮಾಲ್ ಅಸೋಸಿಯೇಷನ್‌ನ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ.

(ಮಾಹಿತಿ ಕೃಪೆ ಕನ್ನಡ ಪ್ರಭ)  

 

ತೇಜಸ್ವಿಗೆ ಯುವ ಮೋರ್ಚಾ ಹೊಣೆ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಿ.ಟಿ. ರವಿ

 

ಹೊಸದಿಲ್ಲಿ / ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಅನಂತರ ಇದೇ ಮೊದಲ ಬಾರಿಗೆ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗೆ ಕೈ ಹಾಕಿರುವ ಜೆ.ಪಿ.ನಡ್ಡಾ ಅವರು ಕರ್ನಾಟಕದ ಮೂವರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಸ್ಥಾನ, ಸಚಿವ ಸಿ.ಟಿ. ರವಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ಮತ್ತು ರಾಜ್ಯಸಭೆ ಸದಸ್ಯ ರಾಜೀವ್‌ ಚಂದ್ರ ಶೇಖರ್‌ ಅವರಿಗೆ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನ ನೀಡಲಾಗಿದೆ.

ರಾಜ್ಯದ ಮತ್ತೂಬ್ಬ ನಾಯಕ ಬಿ.ಎಲ್‌.ಸಂತೋಷ್‌ ಅವರು ಪಕ್ಷದ ಪ್ರಮುಖ ಸ್ಥಾನವಾದ ಪ್ರಧಾನ ಕಾರ್ಯದರ್ಶಿ (ಸಂಘಟನೆ)ಯಲ್ಲಿ ಮುಂದುವರಿಯಲಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ರಾಮ್‌ ಮಾಧವ್‌ ಮತ್ತು ಕರ್ನಾಟಕ ಉಸ್ತುವಾರಿ ಪಿ. ಮುರಳೀಧರ ರಾವ್‌ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆರವು ಮಾಡಲಾಗಿದೆ.

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಂಘಟನೆಯ ಹಿರಿಯರಿಗೆ ನನ್ನ ಪ್ರಣಾಮಗಳು.
-ತೇಜಸ್ವಿ ಸೂರ್ಯ

(ಮಾಹಿತಿ ಕೃಪೆ ಉದಯವಾಣಿ) 

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

 

 

ಬೆಂಗಳೂರು, ಸೆ.26- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು.

ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, ಆರೋಪದ ಬಗ್ಗೆ ಒಂದಂಶ ಸತ್ಯಾಂಶ ಇದ್ದರೂ ರಾಜೀನಾಮೆ ನೀಡುತ್ತೇನೆ. ಈ ಯೋಜನೆ ನನ್ನ ಪಾತ್ರ ಇಲ್ಲ.

ಸಾಬೀತಾದರೆ ನಾನು ರಾಜಕೀಯ ನಿವೃತ್ತನಾಗುವ ಮಾತಿನಂತೆ ನಡೆದುಕೊಳ್ಳುತ್ತೇನೆ ಎಂದರು. ನನ್ನ ಗುರಿಯೇನಿದ್ದರೂ ರಾಜ್ಯದ ಅಭಿವೃದ್ಧಿಯಷ್ಟೆ. ಈ ದೃಷ್ಟಿಯಿಂದ ದೆಹಲಿಗೆ ಹೋಗಿ ಪ್ರಧಾನಿ ಭೇಟಿ ಮಾಡಿ ಬಂದಿದ್ದೇನೆ.

10 ದಿನದಲ್ಲಿ ನಮ್ಮ ನಿರೀಕ್ಷೆಯಂತೆ ಕೇಂದ್ರದಿಂದ ಆರ್ಥಿಕ ನೆರವು ಬರಲಿದೆ. ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರದ ಮೇಲೆ ವಿಶ್ವಾಸ ಇಲ್ಲ ಎಂಬ ಆರೋಪದಲ್ಲಿ ಹುರಳಿಲ್ಲ ಎಂದು ಹೇಳಿದರು.

ಲೋಕಸಭೆಯಲ್ಲಿ ನೀವು ಗೆದ್ದಿರುವುದು ಎಷ್ಟು. ರಾಜ್ಯದಲ್ಲಿ 25ರಲ್ಲಿ ಬಿಜೆಪಿ ಗೆದ್ದಿದೆ. ವಿಧಾನಸಭೆಯಲ್ಲಿ 15ರಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜನರ ವಿಶ್ವಾಸ ಇಲ್ಲದೆ ಗೆದ್ದಿದ್ದೇವೆ. ಉತ್ತಮ ಮಳೆಯಾಗಿದೆ. ಒಳ್ಳೆಯ ಬೆಳೆಯ ನಿರೀಕ್ಷೆಯಲ್ಲಿದ್ದೇವೆ. ಎಲ್ಲಾ ವರ್ಗದ ಜನ ನಮ್ಮ ಜೊತೆಯಲ್ಲಿದ್ದಾರೆ ಎಂದರು.