WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, November 19, 2020

5ರಿಂದ 7ನೇ ತರಗತಿ: ನ.23ರಿಂದ ಸಂವೇದಾ ಪಾಠ

 

 

ಬೆಂಗಳೂರು: ಚಂದನ ವಾಹಿನಿಯಲ್ಲಿ ಇದೇ 23ರಿಂದ 5, 6 ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳಿಗೆ 'ಸಂವೇದಾ ಇ-ಕ್ಲಾಸ್' ಕಲಿಕಾ ಕಾರ್ಯಕ್ರಮ ಪ್ರಸಾರವಾಗಲಿದೆ.

'ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಾಗಲೇ 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ಪಾಠಗಳನ್ನು ಕೇಳುತ್ತಿದ್ದು, ಈಗ, 5,6 ಮತ್ತು 7ನೇ ತರಗತಿಗಳಿಗೂ ಇದನ್ನು ವಿಸ್ತರಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದ್ದಾರೆ.

ಈ ತರಗತಿಗಳ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಹಾಗೂ ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವಿಡಿಯೊ ಪಾಠಗಳನ್ನು ಪ್ರಸಾರ ಮಾಡಲಾಗುತ್ತದೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 8ರಿಂದ 9.30 ಮತ್ತು ಸಂಜೆ 5.30ರಿಂದ 6ರವರೆಗೆ ಪಾಠಗಳು ಪ್ರಸಾರವಾಗಲಿವೆ.

ಪ್ರತಿ ದಿನ 4 ಪಾಠಗಳನ್ನು, ಪ್ರತಿ ಪಾಠ 30 ನಿಮಿಷಗಳ ಅವಧಿಯಂತೆ 2 ತಾಸು ನಡೆಸಲಾಗುತ್ತದೆ. ಈ ವೇಳಾಪಟ್ಟಿಯಂತೆ ಡಿ.25ರವರೆಗೆ ಪ್ರಸಾರ ಮಾಡಲಾಗುತ್ತದೆ.

(ಮಾಹಿತಿ ಕೃಪೆ  ಪ್ರಜಾವಾಣಿ)   

 

ಹೊಸ ಜಿಲ್ಲೆ ವಿಜಯನಗರ

 

 

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚಿಸಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.'ಇದು ರಾಜ್ಯದ 31ನೇ ಜಿಲ್ಲೆಯಾಗಲಿದ್ದು, ಇದಕ್ಕೆ ಯಾವ ಯಾವ ತಾಲ್ಲೂಕುಗಳನ್ನು ಸೇರಿಸಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು' ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟದಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹಲವು ದಶಕಗಳಿಂದ ಪಕ್ಷಾತೀತ ಹೋರಾಟ ನಡೆದಿತ್ತು. ಇದು ಜಿಲ್ಲಾ ಕೇಂದ್ರವಾಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿತ್ತು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಜಿಲ್ಲೆಯ ವಿಭಜನೆಗೆ ಕೆಲವರ ವಿರೋಧವಿತ್ತು. ಅಂತಿಮವಾಗಿ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡೇ ಈ ನಿರ್ಣಯ ತೆಗೆದುಕೊಳ್ಳಲಾಯಿತು' ಎಂದು ಆನಂದ್‌ ಸಿಂಗ್‌ ತಿಳಿಸಿದರು.

'ಉತ್ತಮ ನಿರ್ಧಾರ': ವಿಜಯನಗರ ಜಿಲ್ಲೆ ರಚಿಸಲು ಕೈಗೊಂಡ ತೀರ್ಮಾನವು ಆಡಳಿತಾತ್ಮಕವಾಗಿ ಉತ್ತಮ ನಿರ್ಧಾರ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

'ವಿಜಯನಗರ ಜಿಲ್ಲೆಯ ರಚನೆ ಬೇಡಿಕೆ ಮುಂದಿಟ್ಟು ಹೋರಾಟ ನಡೆದಿತ್ತು. ಈ ವಿಚಾರದಲ್ಲಿ ಕೆಲವು ಸಂದರ್ಭಗಳಲ್ಲಿ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅಂತಿಮವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿದೆ' ಎಂದು ಶ್ರೀರಾಮುಲು ಹೇಳಿದರು.

(ಮಾಹಿತಿ ಕೃಪೆ  ಪ್ರಜಾವಾಣಿ)