WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, December 17, 2020

8 ವಾರಗಳ ಮಗುವಿಗೆ ಬರೋಬ್ಬರಿ ₹16 ಕೋಟಿ ಇಂಜೆಕ್ಷನ್; ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕಾಯಿಲೆ

 

ಬ್ರಿಟನ್​​ನಲ್ಲಿ ಪುಟ್ಟ ಮಗುವೊಂದು ಜಗತ್ತಿಗೆ ಕಾಲಿಟ್ಟ ಬೆನ್ನಲ್ಲೇ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಕಂದನನ್ನು ಉಳಿಸಿಕೊಳ್ಳಲು ಪೋಷಕರು ಹರಸಾಹಸ ಪಡ್ತಿದ್ದಾರೆ. 8 ವಾರಗಳ ಗಂಡು ಮಗುವಿಗೆ ವಿಶ್ವದಲ್ಲೇ ಅತೀ ದುಬಾರಿಯಾದ ಕೋಟ್ಯಾಂತರ ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡಲು ವೈದ್ಯರು ಮುಂದಾಗಿದ್ದಾರೆ. ಅಷ್ಟು ಪುಟ್ಟ ಮಗುವಿಗೆ ಇಷ್ಟೊಂದು ದುಬಾರಿ ಇಂಜೆಕ್ಷನ್ ನೀಡಬೇಕಾದ್ರೆ, ಇದೆಂಥಾ ಕಾಯಿಲೆ ಅಂತ ನಿಮಗೆ ಪ್ರಶ್ನೆ ಮೂಡಬಹುದು. ಅದಕ್ಕೆ ಉತ್ತರ ಜೆನೆಟಿಕ್ ಸ್ಪೈನಲ್ ಮಸ್ಕುಲರ್​​ ಆಟ್ರೋಫಿ(SMA). ಇಂಗ್ಲೆಂಡ್​ನ ಎಸೆಕ್ಸ್​​ ನಿವಾಸಿ ಮೇಘನ್ ಹಾಗೂ ಜಾನ್ ದಂಪತಿಯ ಒಂದೂವರೆ ತಿಂಗಳ ಮಗು ಎಡ್ವರ್ಡ್​ಗೆ ಈ ಕಾಯಿಲೆ ಕಾಣಿಸಿಕೊಂಡಿದೆ.

ಏನಿದು ಸ್ಪೈನಲ್ ಮಸ್ಕುಲರ್​​ ಆಟ್ರೋಫಿ..?
ಸ್ಪೈನಲ್ ಮಸ್ಕುಲರ್​​ ಆಟ್ರೋಫಿ ಒಂದು ಅನುವಂಶಿಕ ಕಾಯಿಲೆ.

ದೇಹದಲ್ಲಿ SMN-1 ಜೀನ್​​​ ಕೊರತೆಯಿಂದ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. SMN ಪ್ರೋಟೀನ್​ ದೇಹದಲ್ಲಿ ಸ್ನಾಯುಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸ್ಪೈನಲ್ ಮಸ್ಕುಲರ್​​ ಆಟ್ರೋಫಿ ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಈ ಪ್ರೋಟೀನ್​​ನ ಕೊರತೆಯಿಂದಾಗಿ ಎದೆಯ ಭಾಗದ ಸ್ನಾಯುಗಳು ದುರ್ಬಲಗೊಂಡು, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಸಾಮಾನ್ಯವಾಗಿ ಇದು ಪುಟ್ಟ ಮಕ್ಕಳಲ್ಲಿ ಕಾಣಿಸುಕೊಳ್ಳುತ್ತದೆ. ಟೈಪ್​​-1 SMA ಕಾಣಿಸಿಕೊಂಡ ಮಗುವಿಗೆ ಕ್ರಮೇಣವಾಗಿ ಸಮಸ್ಯೆ ಉಲ್ಭಣವಾಗಿ ಸ್ನಾಯುಗಳು ಕೆಲಸ ಮಾಡುವುದು ನಿಲ್ಲಿಸುತ್ತವೆ. ಜೊತೆಗೆ ಉಸಿರಾಟದ ಸಮಸ್ಯೆಯಿಂದ ಎರಡು ವರ್ಷ ತುಂಬುವುದರೊಳಗೆ ಮಗು ಸಾವನ್ನಪ್ಪಬಹುದು. ಇಂಗ್ಲೆಂಡ್​​ನಲ್ಲಿ ಈ ಕಾಯಿಲೆಯ ಪ್ರಮಾಣ ಹೆಚ್ಚಿದ್ದು, ಪ್ರತಿ ವರ್ಷ ಸುಮಾರು 60 ಮಕ್ಕಳು ಈ ಕಾಯಿಲೆಯೊಂದಿಗೆ ಜನಿಸುತ್ತಾರೆ ಅಂತ ವರದಿಯಾಗಿದೆ.

ವಿಶ್ವದಲ್ಲೇ ಅತ್ಯಂತ ದುಬಾರಿ ಇಂಜೆಕ್ಷನ್- ಒಂದು ಡೋಸ್​ಗೆ 16 ಕೋಟಿ
ಈ ಅನುವಂಶಿಕ ಕಾಯಿಲೆಯನ್ನ ಗುಣಪಡಿಸಲು ಝೋಲಾಗೆನೆಸ್ಮಾ(zolagenesma) ಅನ್ನೋ ಇಂಜೆಕ್ಷನ್ ನೀಡಬೇಕು. ಈ ಇಂಜೆಕ್ಷನ್​​ ಪ್ರಪಂಚದಲ್ಲೇ ಅತ್ಯಂತ ದುಬಾರಿ. ಒಂದು ಇಂಜೆಕ್ಷನ್​​ನ ಬೆಲೆ 1.7 ಮಿಲಿಯನ್ ಪೌಂಡ್ಸ್​. ಅಂದ್ರೆ ಭಾರತೀಯ ಕರೆನ್ಸಿಯಲ್ಲಿ ಬರೋಬ್ಬರಿ 16 ಕೋಟಿ ರೂಪಾಯಿ. ಬ್ರಿಟನ್​ನ ಬಹುತೇಕ ಮಕ್ಕಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದ್ರೆ ಈ ಹಿಂದೆ ಇದಕ್ಕೆ ಸೂಕ್ತ ಔಷಧಿ ಇರಲಿಲ್ಲ. ಈಗ ಮೂರು ವರ್ಷಗಳಿಂದ ಈ ಕಾಯಿಲೆಯ ಚಿಕಿತ್ಸೆಗಾಗಿ ಅಮೆರಿಕಾ, ಜರ್ಮನಿ ಹಾಗೂ ಜಪಾನ್​ನಿಂದ ಝೋಲಾಗೆನೆಸ್ಮಾ ಇಂಜೆಕ್ಷನ್​​ ತರಿಸಿಕೊಳ್ಳಲಾಗ್ತಿದೆ. SMA ಕಾಯಿಲೆಯಿಂದ ಬಳಲುತ್ತಿರುವವರಿಗೆ ಒಂದು ಬಾರಿ ಮಾತ್ರ ಈ ಇಂಜೆಕ್ಷನ್ ನೀಡಲಾಗುತ್ತದೆ. ಹೀಗಾಗಿ ಇದರ ಬೆಲೆ ಬಹಳ ದುಬಾರಿ.

ಮಗುವಿನ ಪೋಷಕರು ಚಿಕಿತ್ಸೆಯ ಹಣಕ್ಕಾಗಿ ಕ್ರೌಡ್​ ಫಂಡಿಂಗ್ ಮೂಲಕ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದಾರೆ. ಈವರೆಗೆ 1.7 ಕೋಟಿ ರೂಪಾಯಿ ಸಂಗ್ರಹವಾಗಿದೆ. ನಮ್ಮ ಮಗುವಿನ ಪ್ರಾಣ ನಮಗೆ ಅಮೂಲ್ಯ, ಕಂದನ್ನು ಉಳಿಸಲು ಸರ್ವ ಪ್ರಯತ್ನ ಮಾಡ್ತೀವಿ ಎಂದು ಪೋಷಕರು ಹೇಳಿದ್ದಾರೆ.

(ಮಾಹಿತಿ ಕೃಪೆ News first live)

Wednesday, December 16, 2020

ರಾಜ್ಯ ಸರ್ಕಾರದಿಂದ ವೃದ್ಧರು, ವಿಕಲಚೇತರಿಗೆ ಸಿಹಿಸುದ್ದಿ : ಮನೆ ಬಾಗಿಲಿಗೇ ಬರಲಿದೆ ಪಿಂಚಣಿ

 

ಬೆಂಗಳೂರು : ರಾಜ್ಯದ ಬಡಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮನೆಬಾಗಿಲಿಗೆ ಪಿಂಚಣಿದಾರರಿಗೆ ಪಿಂಚಣಿ ನೀಡುವ ಸೇವೆಯನ್ನು ಆರಂಭಿಸಿದೆ.

ವೃದ್ಧರು, ವಿಧವೆಯರು, ವಿಕಲಚೇತನರೂ ಸೇರಿದಂತೆ ಅರ್ಹರಿಗೆ ತೊಂದರೆಯಾಗದಂತೆ ರಾಜ್ಯ ಸರ್ಕಾರದಿಂದ ಪಿಂಚಣಿ ಒದಗಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಪಿಂಚಣಿ ಸೇವೆಯನ್ನು ಆರಂಭಿಸಿದೆ. ಪ್ರಾಯೋಗಿಕವಾಗಿ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸೇವೆ ಪರಿಚಯಿಸಲಾಗಿದೆ. 2021 ರ ಜನವರಿ ಅಥವಾ ಫೆಬ್ರವರಿಯಲ್ಲಿ ಈ ಯೋಜನೆ ರಾಜ್ಯಾದ್ಯಂತ ಅನುಷ್ಠಾನಗೊಳ್ಳಲಿದೆ.

ಇದುವರೆಗೂ ಅರ್ಜಿ ಸಲ್ಲಿಸದೇ ಇದ್ದರೂ ಕೂಡ ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ. ಅಂತಹ ಪಿಂಚಣಿದಾರರಿಗೆ ಮನೆಬಾಗಿಲಿಗೆ ಸಿಬ್ಬಂದಿ ಆಗಮಿಸಿ ದಾಖಲೆ ಪಡೆಯಲಿದ್ದಾರೆ. ಆಧಾರ್ ಕಾರ್ಡ್ ಹಾಗೂ ಓವರ್ ದಿ ಕೌಂಟರ್ ಸರ್ವೀಸ್ ನಡಿ 60 ವರ್ಷ ತುಂಬಿದವರ ವಿವರ, ಪಿಂಚಣಿ ಪಡೆಯಲು ಮಾನದಂಡವಾಗಿರುವ ವಾರ್ಷಿಕ ವರಮಾನ, ಆಸ್ತಿಯ ವಿವರಗಳು ಲಭ್ಯವಾಗಿದ್ದು, ಅರ್ಹ ಕುಟುಂಬಗಳನ್ನು ಗುರುತಿಸಲಾಗುತ್ತದೆ.ಈ ಮಾಹಿತಿ ಆಧಾರದ ಮೇಲೆ ಗ್ರಾಮ ಲೆಕ್ಕಾಧಿಕಾರಿಗಳು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಪಿಂಚಣಿ ಮಂಜೂರಾತಿಗೆ ಕ್ರಮ ಕೈಗೊಳ್ಳಲಿದ್ದಾರೆ.

(ಮಾಹಿತಿ ಕೃಪೆ Kannada News Now) 
 

ರೈಲ್ವೆ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ : 1 ಲಕ್ಷ 40 ಸಾವಿರ ಹುದ್ದೆಗಳ ಭರ್ತಿಗೆ ರೈಲ್ವೆ ಇಲಾಖೆ ಸಿದ್ಧತೆ

 

ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿ (ಆರ್ ಆರ್ ಬಿ) 1.4 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ತ್ರಿಫೇಸ್ ಮೆಗಾ ನೇಮಕಾತಿ ಅಭಿಯಾನ ಇಂದಿನಿಂದ ಆರಂಭವಾಲಿದ್ದು, ಸಾಮಾಜಿಕ ಅಂತರ, ಮಾಸ್ಕ್, ನೈರ್ಮಲ್ಯಕಗಳನ್ನು ಕಡ್ಡಾಯಗೊಳಿಸುವಿಕೆ, ದಿನಕ್ಕೆ ಕೇವಲ ಎರಡು ಪಾಳಿಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸಲು ಇಲಾಖೆ ಸಿದ್ಧತೆ ಕೈಗೊಂಡಿದೆ.

ಇಂದಿನಿಂದ ಮೊದಲ ಹಂತದ ಪರೀಕ್ಷೆ ಆರಂಭ . ಡಿಸೆಂಬರ್ 28ರಿಂದ 2021ರ ಮಾರ್ಚ್ ವರೆಗೆ ಎನ್ ಟಿಪಿಸಿ ವರ್ಗಗಳನ್ನು ಮತ್ತು 2020ರ ಏಪ್ರಿಲ್ ನಿಂದ 2021ರ ಜೂನ್ ಅಂತ್ಯದವರೆಗೆ ಮೂರನೇ ನೇಮಕಾತಿ ನಡೆಯಲಿದೆ.

ದೇಶದ ವಿವಿಧ ನಗರಗಳಲ್ಲಿ 2.44 ಕೋಟಿ ಅಭ್ಯರ್ಥಿಗಳು ಈ ನೇಮಕಾತಿ ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

RRB ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಮಾರ್ಗದರ್ಶಿ ಸೂತ್ರಗಳು

ಅಭ್ಯರ್ಥಿಗಳು ಥರ್ಮೋ ಗನ್ ಗಳನ್ನು ಬಳಸಿ ಪ್ರವೇಶದ ತಾಪಮಾನವನ್ನು ಪರೀಕ್ಷಿಸಲಾಗುವುದು.

ನಿಗದಿತ ಮಿತಿಗಿಂತ ಹೆಚ್ಚು ತಾಪಮಾನ ಹೊಂದಿರುವ ಅಭ್ಯರ್ಥಿಗಳಿಗೆ ಪರೀಕ್ಷಾ ಸ್ಥಳದ ಒಳಗೆ ಅವಕಾಶ ವಿರುವುದಿಲ್ಲ.

ಅಂತಹ ಅಭ್ಯರ್ಥಿಗಳ ಮರು-ನಿಗದಿಯಾದ ಪರೀಕ್ಷೆಯ ನಿಖರ ದಿನಾಂಕವನ್ನು ನಂತರ ತಿಳಿಸಲಾಗುವುದು.

ಅಭ್ಯರ್ಥಿಯು ತನ್ನ ಫೇಸ್ ಮಾಸ್ಕ್ ಅನ್ನು ಬಳಸಬೇಕು.

ಅಭ್ಯರ್ಥಿಯು ಪ್ರವೇಶದ ಸಮಯದಲ್ಲಿ ನಿಗದಿತ ನಮೂನೆಯಲ್ಲಿ COVID-19 ಸ್ವಯಂ-ಘೋಷಣೆಯನ್ನು ಹಾಜರುಪಡಿಸಬೇಕಾಗುತ್ತದೆ ಮತ್ತು ಅದೇ ಅನುಪಸ್ಥಿತಿಯಲ್ಲಿ ಪರೀಕ್ಷಾ ಸ್ಥಳದಲ್ಲಿ ಅವರಿಗೆ ಅವಕಾಶ ವಿರುವುದಿಲ್ಲ.

ಪ್ರತಿ ಶಿಫ್ಟ್ ನಂತರ ಮತ್ತೊಂದು ಶಿಫ್ಟ್ ಪ್ರಾರಂಭಿಸುವ ಮೊದಲು ಪರೀಕ್ಷಾ ಕೇಂದ್ರವನ್ನು ನೈರ್ಮಲ್ಯಗೊಳಿಸಲಾಗುತ್ತದೆ

(ಮಾಹಿತಿ ಕೃಪೆ Kannada News Now) 
 

8-9-10 ನೇ ತರಗತಿ ಓದುವ ಮಕ್ಕಳಿಗಾಗಿ ಸರಕಾರದ ಮಾರ್ಗ ಸೂಚಿ.!

 

ಬೆಂಗಳೂರು: ಕೊರೋನಾ ಹಿನ್ನೆಲೆ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮ ಯೋಜನೆಯನ್ನು ಪುನಾರಂಭಿಸಲು ಸರ್ಕಾರ ಸೂಚಿಸಿದೆ.

ಎಸ್‌ಎಸ್‌ಎಲ್ಸಿ ಮಕ್ಕಳಿಗೆ ಸೋಮವಾರದಿಂದ ಶುಕ್ರವಾರದವರೆಗೆ ಬೆ.10ರಿಂದ ಮ.12.30ರವರೆಗೆ ಎಲ್ಲಾ ಭಾಷಾ ವಿಷಯಗಳು ಸೇರಿ ಬೇರೆ ವಿಷಯಗಳ ಬೋಧನೆ. 8-9 ನೇ ತರಗತಿ: ಮ.2 ರಿಂದ 4.30ರವರೆಗೆ. 1-3 ನೇ ತರಗತಿ: ಸೋಮವಾರ, ಬುಧವಾರ & ಶುಕ್ರವಾರ ಹಾಗೂ 4 & 5 ನೇ ತರಗತಿ ಮಕ್ಕಳಿಗೆ ಮಂಗಳವಾರ, ಗುರುವಾರ ಮತ್ತು ಶನಿವಾರದವರೆಗೆ ಬೆ.10 ರಿಂದ ಮ.12.30ರವರೆಗೆ ವಿದ್ಯಾಗಮ ನಡೆಸುವಂತೆ ಹೇಳಗಾಗಿದೆ.

 (ಮಾಹಿತಿ ಕೃಪೆ ಬಿಸಿ ಸುದ್ದಿ) 
 

ಡಿ.18-19 ರಂದು ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ

 

ಬೆಂಗಳೂರು : ಡಿಸೆಂಬರ್ 18 ಹಾಗೂ 19 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಬಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ರಾಮನಗರದಲ್ಲಿ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 (ಮಾಹಿತಿ ಕೃಪೆ ಬಿಸಿ ಸುದ್ದಿ) 
 

ಸಚಿವರಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

 

ಹೊಸಪೇಟೆ: ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಇಲ್ಲಿನ ಕ್ರೀಡಾ ಸಂಕೀರ್ಣದಲ್ಲಿ ಕೈಗೆತ್ತಿಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮಂಗಳವಾರ ಪರಿಶೀಲಿಸಿದರು.

₹1.44 ಕೋಟಿಯಲ್ಲಿ ಸ್ಕೇಟಿಂಗ್‌ ಅಂಕಣ, ಒಳಾಂಗಣ ಬ್ಯಾಡ್ಮಿಂಟನ್‌ ಕ್ರೀಡಾಂಗಣ ನವೀಕರಣ, ಈಜುಕೊಳ ದುರಸ್ತಿ, ಸಭಾಂಗಣದ ನವೀಕರಣ ಕಾಮಗಾರಿ ವೀಕ್ಷಿಸಿದರು.

'ಗುಣಮಟ್ಟದ ಕಾಮಗಾರಿಗೆ ಒತ್ತು ಕೊಡಬೇಕು. ಕ್ರೀಡಾಂಗಣಕ್ಕೆ ಬರುವ ಜನರಿಗೆ ಕೂರಲು ಆಸನಗಳ ವ್ಯವಸ್ಥೆ ಮಾಡಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಅಧಿಕಾರಿ ಗನಿ ಸಾಬ್ ಇದ್ದರು.

 (ಮಾಹಿತಿ ಕೃಪೆ ಪ್ರಜಾವಾಣಿ) 
 

ಹೊಸಪೇಟೆ: 41 ಸದಸ್ಯರ ಅವಿರೋಧ ಆಯ್ಕೆ

 

ಹೊಸಪೇಟೆ: ತಾಲ್ಲೂಕಿನ 13 ಗ್ರಾಮ ಪಂಚಾಯಿತಿಗಳಿಗೆ ಡಿ. 22ರಂದು ಚುನಾವಣೆ ನಡೆಯಲಿದೆ. ಆದರೆ, ಅದಕ್ಕೂ ಮುನ್ನವೇ 41 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

13 ಪಂಚಾಯಿತಿಗಳ ಒಟ್ಟು 274 ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ಒಟ್ಟು ನಾಮಪತ್ರಗಳ ಪೈಕಿ 227 ಜನ ನಾಮಪತ್ರ ಹಿಂಪಡೆದಿರುವುದರಿಂದ ಒಟ್ಟು 653 ಜನ ಅಂತಿಮ ಕಣದಲ್ಲಿದ್ದಾರೆ. ಈ ನಡುವೆ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಅಲ್ಲಿ ಚುನಾವಣೆ ನಡೆಯುವುದಿಲ್ಲ. ಅವರ ಅಧಿಕೃತ ಆಯ್ಕೆ ಘೋಷಣೆ ಹೊರಬೀಳಬೇಕಿದೆ.

ತಾಲ್ಲೂಕಿನ ಪಾಪಿನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚು 10 ಜನರು ಅವಿರೋಧವಾಗಿ ಆಯ್ಕೆಯಾದರೆ, ಡಣಾಯಕನಕೆರೆಯಲ್ಲಿ 9, ಮಲಪನಗುಡಿ, ಬೈಲುವದ್ದಿಗೇರಿಯಲ್ಲಿ ತಲಾ 6, ಜಿ. ನಾಗಲಾಪುರ, ಚಿಲಕನಹಟ್ಟಿಗೆ ತಲಾ 3, ನಾಗೇನಹಳ್ಳಿ, 114 ಡಣಾಪುರ, ಬುಕ್ಕಸಾಗರ ಹಾಗೂ ಕಲ್ಲಹಳ್ಳಿಗೆ ತಲಾ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

 (ಮಾಹಿತಿ ಕೃಪೆ ಪ್ರಜಾವಾಣಿ) 
 

ತಪ್ಪು ತಿಳಿವಳಿಕೆ; ಬಿಗುವಿನ ವಾತಾವರಣ

 

 

ಹೊಸಪೇಟೆ: ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ ಎಂದು ತಪ್ಪು ಭಾವಿಸಿ ನಗರಸಭೆ ಸಿಬ್ಬಂದಿಗೆ ಸ್ಥಳೀಯ ಯುವಕರು ಪ್ರತಿರೋಧ ತೋರಿಸಿ ಅವರ ಕೆಲಸಕ್ಕೆ ಅಡ್ಡಿಪಡಿಸಿದ್ದರಿಂದ ಮಂಗಳವಾರ ಸಂಜೆ ಇಲ್ಲಿನ ಹಜರತ್‌ ಷಾ ವಲಿ ಮಸೀದಿ ಬಳಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ಯುವಕರಿಗೆ ಮನವರಿಕೆ ಮಾಡಿಕೊಟ್ಟ ನಂತರ ವಾತಾವರಣ ತಿಳಿಗೊಂಡಿತು.

'ನಗರಸಭೆಯು ಈ ಹಿಂದೆ ಮಸೀದಿಗೆ ಹೊಂದಿಕೊಂಡಂತೆ ನಿರ್ಮಿಸಿದ್ದ ಕೆಲ ಮಳಿಗೆಗಳನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತ್ತು. ಬಳಿಕ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಕಾರ್ಯಾಚರಣೆ ಕೈಬಿಟ್ಟಿತು. ಕಟ್ಟಡಗಳ ಅವಶೇಷಗಳು ಅಲ್ಲಿಯೇ ಬಿದ್ದದ್ದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಮಂಗಳವಾರ ಸಂಜೆ ನಗರಸಭೆ ಸಿಬ್ಬಂದಿಯು ಜೆ.ಸಿ.ಬಿ., ಟ್ರ್ಯಾಕ್ಟರ್‌ನೊಂದಿಗೆ ಸ್ಥಳಕ್ಕೆ ತೆರಳಿ, ಅವಶೇಷ ತೆರವುಗೊಳಿಸಲು ಮುಂದಾಗಿದ್ದರು. ತಡೆಯಾಜ್ಞೆಯಿದ್ದರೂ ತೆರವು ಕಾರ್ಯಾಚರಣೆಗೆ ಬಂದಿದ್ದಾರೆ ಎಂದು ತಪ್ಪಾಗಿ ತಿಳಿದು ಅಲ್ಲಿದ್ದ ಯುವಕರು ನಗರಸಭೆಯ ಸಿಬ್ಬಂದಿಗೆ ತಡೆಯೊಡ್ಡಿದ್ದಾರೆ. ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಯುವಕರಿಗೆ ವಸ್ತುಸ್ಥಿತಿ ತಿಳಿಸಿದ ನಂತರ ಸುಮ್ಮನಾದರು' ಎಂದು ಪೊಲೀಸರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

'ಇದೊಂದು ಆಕಸ್ಮಿಕವಾಗಿ ನಡೆದ ಘಟನೆ. ತಪ್ಪು ತಿಳಿವಳಿಕೆಯಿಂದ ಯುವಕರು ಆವೇಶಭರಿತರಾಗಿ ಆ ರೀತಿ ವರ್ತಿಸಿದ್ದಾರೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ' ಎಂದು ತಿಳಿಸಿದ್ದಾರೆ.

'ತಪ್ಪಾಗಿ ಭಾವಿಸಿ ನಮ್ಮ ಸಿಬ್ಬಂದಿಯ ಜತೆ ಸ್ಥಳೀಯ ಯುವಕರು ವಾಗ್ವಾದ ನಡೆಸಿ, ನೂಕಾಟ, ತಳ್ಳಾಟ ನಡೆಸಿದ್ದಾರೆ. ಬೇರೇನೂ ಆಗಿಲ್ಲ. ಬಳಿಕ ವಿಷಯ ಗೊತ್ತಾಗಿ ಸುಮ್ಮನಾಗಿದ್ದಾರೆ' ಎಂದು ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ತಿಳಿಸಿದ್ದಾರೆ.

 (ಮಾಹಿತಿ ಕೃಪೆ ಪ್ರಜಾವಾಣಿ) 

Monday, December 14, 2020

'ಕರ್ನಾಟಕ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ - 2020' ರ ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದ್ದು,

 'ಕರ್ನಾಟಕ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ - 2020' ರ ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದ್ದು, ಎರಡನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿ‌ನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿ,‌ ಗ್ರಾಮಾಭಿವೃದ್ಧಿಗೆ ನೆರವಾಗಿ.

Image

Sunday, December 13, 2020

ನಿಮ್ಮೂರಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಯಾವಾಗ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್


 ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್‌ 22 ಮತ್ತು 27 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಮೊದಲ ಹಾಗೂ ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗಳು ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಿಮ್ಮೂರಿನಲ್ಲಿ ಯಾವ ಹಂತದಲ್ಲಿ ಮತದಾನ ನಡೆಯಲಿದೆ ಎಂಬುದರ ಬಗ್ಗೆ ಚುನಾವಣಾ ಆಯೋಗ ನೀಡಿರುವ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ.










(ಮಾಹಿತಿ ಕೃಪೆ kannada news)