WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Friday, December 24, 2021

ಪಾಪಿನಾಯಕನಹಳ್ಳಿ ವ್ಯಕ್ತಿ ಒಬ್ಬ ಕಾಣೆಯಾಗಿದ್ದಾರೆ

 

*ಕಾಣೆಯಾಗಿದ್ದಾರೆ*

*ಈ ಫೋಟೋದಲ್ಲಿರುವ ವ್ಯಕ್ತಿಯ ಹೆಸರು ಕುಂಬಾರ ಬಸವರಾಜ್ ಇವರು ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದವರು  ಮೂಲತಹ  ಅಂಗವಿಕಲರಾಗಿರುವ ಇವರಿಗೆ* *ಎರಡು ಕಾಲುಗಳು ನಡೆಯಲು ಬರುವುದಿಲ್ಲ. ಇವರು ದಿನಾಂಕ 20.12.2021 ರಂದು ಸೋಮವಾರ ಸಂಜೆ 5:00 ಗಂಟೆಗೆ ಹೊರಗಡೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋದವರು ಇಲ್ಲಿಯವರೆಗೂ ಬಂದಿರುವುದಿಲ್ಲ* *ಇವರು ಬಳಸುತ್ತಿದ್ದ 3 ಗಾಲಿ ಮೋಟಾರ್ ವಾಹನವು ಹೊಸಪೇಟೆ ರೈಲ್ವೆ ಸ್ಟೇಷನ್ ಬಳಿ ಸಿಕ್ಕಿರುತ್ತದೆ ಆದರೆ ಇವರ ಸುಳಿವು ಮಾತ್ರ ಸಿಕ್ಕಿಲ್ಲ ಆದಕಾರಣ ಇವರ ಸುಳಿವು* *ಸಿಕ್ಕಲ್ಲಿ ದಯಮಾಡಿ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ*

+919449789816🙏🙏🙏

ನಿಮ್ಮ ಮನೆಯಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿದ್ದಾರಾ? ಹಾಗಾದ್ರೆ, ಮಿಸ್‌ ಮಾಡ್ದೇ ಈ ಸ್ಟೋರಿ ಓದಿ..!

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಅಂಚೆ ಇಲಾಖೆಯು ವಿವಿಧ ರೀತಿಯ ಯೋಜನೆ(Post office scheme‌)ಗಳನ್ನ ನಡೆಸುತ್ತಿದೆ. ಅದ್ರಲ್ಲಿ ನಿಮ್ಮ ಅಗತ್ಯತೆಗಳು ಮತ್ತು ಹಣಕಾಸಿನ ಗುರಿಗಳಿಗೆ ಸೂಕ್ತವಾದ ಯೋಜನೆಯನ್ನ ಆರಿಸಿ. ನಂತ್ರ ನೀವು ಯೋಜನೆಗೆ ಸೇರುವುದರಿಂದ ಪ್ರಯೋಜನ ಪಡೆಯುತ್ತೀರಿ.

ಹಾಗಾಗಿ ಯೋಜನೆಯ ಆಯ್ಕೆಯಲ್ಲಿ ನೀವು ಎಚ್ಚರಿಕೆ ವಹಿಸಬೇಕು. ಎರಡು ಬಾರಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಅಂದ್ಹಾಗೆ, ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಮಾಸಿಕ ಆದಾಯ ಯೋಜನೆ(Monthly Income Plan) ಕೂಡ ಒಂದು. ಇದ್ರಲ್ಲಿ ಸೇರುವುದರಿಂದ ಪ್ರತಿ ತಿಂಗಳು(Every month) ಕೈಗೆ ಹಣ ಬರುತ್ತೆ. ಮನೆಯಲ್ಲಿ ಹತ್ತು ವರ್ಷಕ್ಕಿಂತ ಮೇಲ್ಪಟ್ಟ(Over ten years of age) ಮಕ್ಕಳಿರುವವರು ಈ ಯೋಜನೆಯಡಿ ಹೂಡಿಕೆ ಮಾಡಬೋದು.

ಈ ಯೋಜನೆಯಡಿ ನಿಮ್ಮ ಮಗುವಿನ ಹೆಸರಿನಲ್ಲಿ ಖಾತೆ ತೆರೆದ್ರೆ, ಪ್ರತಿ ತಿಂಗಳು ಹಣ ಬರುತ್ತದೆ. ಅವರ ಬೋಧನಾ ಶುಲ್ಕ ಸೇರಿದಂತೆ ಇತರ ವೆಚ್ಚಗಳನ್ನ ಸರಿದೂಗಿಸಲು ಇವು ಸಾಕಾಗ್ಬೋದು. ಹಾಗಾದ್ರೆ, ನಾವು ಈಗ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯನ್ನ ತಿಳಿದುಕೊಳ್ಳೋಣಾ ಬನ್ನಿ.

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಗೆ ಸೇರುವವರು ಒಂದು ವಿಷಯವನ್ನ ಗಮನದಲ್ಲಿಟ್ಟುಕೊಳ್ಳಬೇಕು. ನೀವು ಈ ಯೋಜನೆಗೆ ಸೇರಿದ್ರೆ, ನೀವು ಒಮ್ಮೆಗೆ ನಿರ್ದಿಷ್ಟ ಮೊತ್ತವನ್ನ ಹೂಡಿಕೆ ಮಾಡಬೇಕಾಗುತ್ತದೆ. ನಂತ್ರ ಪ್ರತಿ ತಿಂಗಳು ಹಣ ಬರುತ್ತದೆ. ಇದ್ರಲ್ಲಿ ಏಕ ಖಾತೆ ಮತ್ತು ಜಂಟಿ ಖಾತೆ ಎಂಬ ಎರಡು ವಿಧದ ಆಯ್ಕೆಗಳಿವೆ. ನೀವು ಇಷ್ಟಪಡುವ ಆಯ್ಕೆಯನ್ನ ಆಯ್ಕೆ ಮಾಡಬಹುದು.

ನೀವು ಒಂದೇ ಖಾತೆಯನ್ನ ಆಯ್ಕೆ ಮಾಡಿದ್ರೆ, ನೀವು 4.5 ಲಕ್ಷದವರೆಗೆ ಹೂಡಿಕೆ ಮಾಡಬಹುದು. ಅದೇ ಜಂಟಿ ಖಾತೆಯಲ್ಲಿ 9 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ನೀವು ಯಾವ ಆಯ್ಕೆಯನ್ನ ಆರಿಸಿದ್ದೀರಿ ಎಂಬುದರ ಮೇಲೆ ಠೇವಣಿ ಮಾಡಬೇಕಾಗುತ್ತದೆ. ಕನಿಷ್ಠ ರೂ.1000 ಠೇವಣಿ ಇಡಬಹುದು. ಹತ್ತು ವರ್ಷ ಮೇಲ್ಪಟ್ಟವರು ಈ ಯೋಜನೆಗೆ ಸೇರಬಹುದು. ಇದರರ್ಥ ನೀವು ನಿಮ್ಮ ಮಗುವಿನ ಹೆಸರಿನಲ್ಲಿ ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ಖಾತೆಯನ್ನ ತೆರೆಯಬಹುದು.

ಈ ಯೋಜನೆಯು ಪ್ರಸ್ತುತ 6.6 ಶೇಕಡಾ ಬಡ್ಡಿಯನ್ನ ಪಡೆಯುತ್ತದೆ. ಕೇಂದ್ರ ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿದರವನ್ನ ಪರಿಶೀಲಿಸುತ್ತದೆ. ಅಂದ್ರೆ, ಬಡ್ಡಿದರಗಳು ಹೆಚ್ಚಾಗಬಹುದು. ಇಲ್ಲದಿದ್ದರೆ ಕಡಿಮೆಯಾಗಬಹುದು. ಕೆಲವು ಸಂದರ್ಭಗಳಲ್ಲಿ ಇದು ನಿರಂತರವಾಗಿ ಹಾಗೆಯೇ ಮುಂದುವರೆಯಬಹುದು. ಈ ಯೋಜನೆಯ ಮುಕ್ತಾಯ ಅವಧಿಯು ಐದು ವರ್ಷಗಳು. ಇನ್ನು ವಿಳಾಸದ ಪುರಾವೆ, ಗುರುತಿನ ಪುರಾವೆ, ಎರಡು ಫೋಟೋಗಳನ್ನ ತೆಗೆದುಕೊಂಡು ಯೋಜನೆಗೆ ಸೇರಿಕೊಳ್ಳಬೋದು.

ಉದಾಹರಣೆಗೆ, ನೀವು ನಿಮ್ಮ ಮಗುವಿನ ಹೆಸರಿನಲ್ಲಿ 2 ಲಕ್ಷ ರೂಪಾಯಿಗಳನ್ನ ಠೇವಣಿ ಮಾಡಿ ಮತ್ತು ಮಾಸಿಕ ಆದಾಯ ಯೋಜನೆಯಡಿ ಖಾತೆಯನ್ನ ತೆರೆದ್ರೆ, ನೀವು ಪ್ರತಿ ತಿಂಗಳು 1100 ರೂ. ವರ್ಷಕ್ಕೆ 13,200. ಐದು ವರ್ಷದ ಅವಧಿಯ ಪ್ರಕಾರ 66 ಸಾವಿರ ರೂ. ಪಡೆಯಬೋದು. ಇನ್ನು ನೀವು ಅದೇ ಜಂಟಿ ಖಾತೆಯನ್ನ ತೆರೆದು 3.5 ಲಕ್ಷ ರೂ.ಗಳನ್ನ ಠೇವಣಿ ಮಾಡಿದ್ರೆ, ನಿಮಗೆ ತಿಂಗಳಿಗೆ 1925 ರೂ. ಬರುತ್ತೆ. 4.5 ಲಕ್ಷ ಠೇವಣಿ ಇಟ್ಟರೆ ತಿಂಗಳಿಗೆ 2,500 ರೂ. ಬರುತ್ತೆ. ಇನ್ನು ಮುಕ್ತಾಯದ ನಂತರ ನಿಮ್ಮ ಹಣವು ನಿಮಗೆ ಬರುತ್ತದೆ. ಇನ್ನು ಯೋಜನೆಗೆ ಸೇರುವ ವ್ಯಕ್ತಿ ಮೃತಪಟ್ಟರೆ, ಆ ಹಣವನ್ನ ನಾಮಿನಿಗೆ ನೀಡಲಾಗುತ್ತದೆ.

(ಮಾಹಿತಿ ಕೃಪೆ Kannada News Now)


 

Thursday, December 23, 2021

PM Kisan Yojana : ರೈತ ಸಮುದಾಯಕ್ಕೆ ಸಿಹಿಸುದ್ದಿ : ಜನವರಿ 1 ಕ್ಕೆ ಪಿಎಂ ಕಿಸಾನ್ ಯೋಜನೆಯ 10 ನೇ ಕಂತು ಬಿಡುಗಡೆ


ನವದೆಹಲಿ : ಕೇಂದ್ರ ಸರ್ಕಾರವು ಹೊಸ ವರ್ಷಕ್ಕೆ ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (Pradhan Mantri Kisan Samman Nidhi) 10 ನೇ 2022 ರ ಜನವರಿ 1 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೂ 2,000 ಹಣವನ್ನು ಜನವರಿ 1 ರಂದು ರೈತರ ಖಾತೆಗೆ ವರ್ಗಾಯಿಸಲಾಗುವುದು ಎಂದು ವರದಿಯಾಗಿದ್ದು, 2022 ರ ಜನವರಿ 1 ರಂದು PM ಕಿಸಾನ್ ಯೋಜನೆಯಡಿಯಲ್ಲಿ 2,000 ರೂಪಾಯಿಗಳನ್ನು ಅವರ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ತೋಮರ್ ಅವರು ಹೇಳಿದ್ದಾರೆ ಎನ್ನಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 1, 2022 ರಂದು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಮುಂದಿನ ಕಂತನ್ನು ಬಿಡುಗಡೆ ಮಾಡುತ್ತಾರೆ ಮತ್ತು ರೈತ ಉತ್ಪಾದಕ ಸಂಸ್ಥೆಗಳಿಗೆ ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡುತ್ತಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ, ಡಿಸೆಂಬರ್ 25 ರಂದು, ಪ್ರಧಾನಿ ಮೋದಿ ಅವರು 7 ನೇ ಕಂತು PM-KISAN ಅನ್ನು ಬಿಡುಗಡೆ ಮಾಡಿದ್ದರು . ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ 9 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 18,000 ಕೋಟಿ ರೂಪಾಯಿಗಳನ್ನು ಪ್ರಧಾನಿ ಮೋದಿ ವರ್ಗಾಯಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2019 ರಲ್ಲಿ ಪ್ರಧಾನಿ ಮೋದಿಯವರು ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿ ಇರುವ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ನೇರ ಲಿಂಕ್ ಬಳಸಿ ಪಿಎಂ ಕಿಸಾನ್ ವೆಬ್ ಸೈಟ್ ಮೂಲಕ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎಂಬುದು ಇಲ್ಲಿದೆ
pmkisan.gov.in ವೆಬ್ ಸೈಟ್ ಗೆ ಲಾಗ್ ಆನ್ ಮಾಡಿ
ಬಲಭಾಗದಲ್ಲಿ, ನೀವು ರೈತರ ಕಾರ್ನರ್ ನೋಡುತ್ತೀರಿ
ರೈತರ ಕಾರ್ನರ್ ಮೇಲೆ
ಈಗ ಆಯ್ಕೆಯಿಂದ, ಫಲಾನುಭವಿ ಸ್ಥಿತಿ
ನಿಮ್ಮ ಸ್ಥಿತಿಯನ್ನು ನೋಡಲು ನೀವು ನಿಮ್ಮ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯಂತಹ ಕೆಲವು ವಿವರಗಳನ್ನು ಒದಗಿಸಬೇಕಾಗುತ್ತದೆ
ನೀವು ಮೇಲಿನ ಕಾರ್ಯವಿಧಾನವನ್ನು ಪೂರ್ಣಗೊಳಿಸಿದ ನಂತರ, ಪಟ್ಟಿಯಲ್ಲಿ ದ್ದರೆ ನಿಮ್ಮ ಹೆಸರನ್ನು ನೀವು ಕಂಡುಕೊಳ್ಳುತ್ತೀರಿ

(ಮಾಹಿತಿ ಕೃಪೆ kannadanewsnow)


 

Good News : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದು ಬೆಳಗಾವಿಯಲ್ಲಿ 'ಉದ್ಯೋಗ ಮೇಳ' ಆಯೋಜನೆ


ಬೆಳಗಾವಿ : ನಿರುದ್ಯೋಗಿ ಯುವಕ ಯುವತಿಯರಿಗೆ ಬೆಳಗಾವಿಯ ಉದ್ಯಮ್ ಬಾಗ್‍ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರ ಇಂದು ಉದ್ಯೋಗ ಮೇಳ ನಡೆಯಲಿದೆ . ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
5,600 ಯುವಕರು ನೋಂದಣಿ ಮಾಡಿಕೊಂಡಿದ್ದಾರೆ. 78 ಕಂಪನಿ ಈ ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ ಎಂದು ಐಟಿ-ಬಿಟಿ ಖಾತೆ ಸಚಿವ ಡಾ.ಅಶ್ವತ್ಥ್​ ನಾರಾಯಣ ಮಾಹಿತಿ ನೀಡಿದ್ದಾರೆ,. ಟಿಸಿಎಸ್, ವಿಪ್ರೋ, ಎಚ್ ಸಿಎಲ್, ಬೈಜಸ್ ಮತ್ತು ಟೊಯೋಟಾ ಸೇರಿದಂತೆ ಪ್ರಮುಖ ಕಂಪನಿಗಳು ಬೆಳಗಾವಿ ಜಿಲ್ಲೆಯ ಕಾಲೇಜಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗಿಯಾಗಲಿದೆ. ಈ ಉದ್ಯೋಗ ಮೇಳವು ಡಿಸೆಂಬರ್ 23 ರಂದು ಕಾಲೇಜಿನಲ್ಲಿ ನಡೆಯಲಿದೆ. ಬಿಇ, ಬಿಟೆಕ್, ಎಂ ಟೆಕ್, ಡಿಪ್ಲೊಮಾ ಮತ್ತು ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಅವರು ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರ, ಮಾರ್ಕ್ಸ್ ಕಾರ್ಡ್ (ಮೂಲ ಮತ್ತು ಫೋಟೋಕಾಪಿ ಎರಡೂ), ಎರಡು ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರಗಳು ಜೊತೆಗೆ ಕನಿಷ್ಠ ಐದು ರೆಸ್ಯೂಮ್ ಗಳನ್ನು ಹೊಂದಿರಬೇಕು. ಯಾವುದೇ ಪ್ರವೇಶ ಶುಲ್ಕಇರುವುದಿಲ್ಲ. ಎಚ್ ಪಿ, ನಾರಾಯಣ ಗ್ರೂಪ್, ಯುಟಿಎಲ್, ಓಲಾ, ಟಾಟಾ ಕಮ್ಯುನಿಕೇಷನ್ಸ್, ಟಾಟಾ ಬಿಸಿನೆಸ್ ಹಬ್ ಲಿಮಿಟೆಡ್, ಜಾಸ್ಮಿನ್ ಇನ್ಫೋಟೆಕ್, ಮೇಳದಲ್ಲಿ ಭಾಗವಹಿಸಲಿದ್ದು, . ಡಿಸೆಂಬರ್ 23 ರಂದು ಆಯ್ಕೆಯಾದವರಿಗೆ, ಎರಡನೇ ಸುತ್ತಿನ ಸಂದರ್ಶನಗಳನ್ನು ಡಿಸೆಂಬರ್ 24 ರಂದು ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

(ಮಾಹಿತಿ ಕೃಪೆ kannadanewsnow)


 

Sunday, December 19, 2021

ಉಚಿತ ಹೊಲಿಗೆ ಯಂತ್ರ ವಿತರಣೆ'ಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಉಪಕರಣಗಳ ಯೋಜನೆಗಳಡಿ ಗ್ರಾಮೀಣ ಭಾಗದ ಅರ್ಹ ಕುಶಲಕರ್ಮಿಗಳಿಗೆ ಪುರುಷ, ಮಹಿಳೆಯರಿಗೆ ಹೊಲಿಗೆ ಯಂತ್ರ ( tailoring machine ) ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಈ ಹಿಂದೆ ಹೊಲಿಗೆ ಯಂತ್ರ ಪಡೆದ ಕುಟುಂಬಸ್ಥರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇತರಿಗೆ 18 ರಿಂದ 35 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 38 ವರ್ಷ ಮೀರಿರದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ, ಕೈಗಾರಿಕಾ ವಿಭಾಗ ಕೊಠಡಿ ಸಂ.239, ಜಿಲ್ಲಾಡಳಿತ ಭವನ, ಬಾಗಲಕೋಟೆ ಇವರಿಂದ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ವಿಸ್ತರಣಾಧಿಕಾರಿ ಬಾಗಲಕೋಟೆ, ಹುನಗುಂದ (8317437475), ಜಮಖಂಡಿ, ಬಾದಾಮಿ (7795045313) ಬೀಳಗಿ ಮತ್ತು ಮುಧೋಳ (9620721729) ಇವರನ್ನು ಸಂಪರ್ಕಿಸುವಂತೆ ತಿಳಿಸಿದೆ.

(ಮಾಹಿತಿ ಕೃಪೆ kannada news now)

Thursday, December 9, 2021

ಕಂಪ್ಲಿ'ಯನ್ನು ವಿಜಯನಗರ ಜಿಲ್ಲೆ ಸೇರ್ಪಡೆ ವಿಚಾರಣೆ ಫೆಬ್ರವರಿ 15 ಕ್ಕೆ

 ಬೆಂಗಳೂರು, 9 ಡಿಸೆಂಬರ್(ಹಿ.ಸ):

ಬಳ್ಳಾರಿ ಜಿಲ್ಲೆಯಲ್ಲಿ ಇರುವ `ಕಂಪ್ಲಿ' ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸಲು ಆಗ್ರಹಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿಸಲಾಗಿತ್ತು.

ಪಿಐಎಲ್ ನ ಪ್ರಕರಣವು ಮುಖ್ಯ ನ್ಯಾಯಾಧೀಶರಾದ ರಿತುರಾಜು ಅವಸ್ಥಿ ಮತ್ತು ಸಚಿನ್ ಶಂಕರ್ ಮಗದುಮ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.ಈ ಪ್ರಕರಣದ ವಿಚಾರಣೆಯನ್ನ ನ್ಯಾಯಾಧೀಶರ ಪೀಠವು ಫೆಬ್ರವರಿ 15 ಕ್ಕೆ ಮುಂದೂಡಿದೆ.

(ಮಾಹಿತಿ ಕೃಪೆ Hindusthan Samachar)

Arogya Karnataka Scheme : ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಬಿಟ್ಟು ಮತ್ತೇನು ಕೇಳುವಂತಿಲ್ಲ


  ಬೆಂಗಳೂರು (ಡಿ.09): ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ (Arogya karnataka) ಯೋಜನೆಯಡಿ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ (Hospital) ಚಿಕಿತ್ಸೆ (Treatment) ಪಡೆಯಲು ಆಗಮಿಸುವ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ (Ayushman Arogya Card) ಬಿಟ್ಟು ಇತರೆ ಯಾವುದೇ ದಾಖಲೆ ಕೇಳಬಾರದೆಂದು ಆರೋಗ್ಯ ಇಲಾಖೆ (Health Department) ಎಚ್ಚರಿಕೆ ನೀಡಿದೆ.

ಬಿಪಿಎಲ್ (BPL) ಮತ್ತು ಎಪಿಎಲ್(APL) ಕುಟುಂಬದ ಸದಸ್ಯರಿಗೆ ಶೀಘ್ರ ಹಾಗೂ ಶುಲ್ಕ ರಹಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಆಯುಷ್ಮಾನ್ ಆರೋಗ್ಯ ಯೋಜನೆ ಪ್ರಾರಂಭಿಸಲಾಗಿದೆ. ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಅವಶ್ಯಕತೆ ಆಧರಿಸಿ ಚಿಕಿತ್ಸೆ ಒದಗಿಸಲಾಗುತ್ತದೆ. ರಾಜ್ಯದಲ್ಲಿ 1.5 ಕೋಟಿ ಆರೋಗ್ಯ ಕಾರ್ಡ್ ವಿತರಿಸಲಾಗಿದೆ.

ಫಲಾನು ಭವಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಬಂದಾಗ ಹಾಗೂ ಒಳರೋಗಿಯಾಗಿ ದಾಖಲಾದಾಗ ಆರೋಗ್ಯ ಕಾರ್ಡ್ ತೋರಿಸಿದರೂ ಪಡಿತರ ಚೀಟಿ (Ration Card), ಇತರೆ ಕೆಲ ಪೂರಕ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗುತ್ತಿದೆ. ಆಸ್ಪತ್ರೆಗಳ ಆರೋಗ್ಯ ಮಿತ್ರ ಸಹಾಯಕರು ಚಿಕಿತ್ಸೆಗೆ ಅವಕಾಶ ನೀಡದಿರುವ ಬಗ್ಗೆ ಇಲಾಖೆಗೆ ದೂರುಗಳು (Complaints) ಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಡ್ ಇರುವವರು ಬೇರೆ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸುವ ಅಗತ್ಯವಿಲ್ಲ. ಪೂರಕ ದಾಖಲೆಗಳಗೆ ಒತ್ತಾಯಿಸುವುದನ್ನು ನಿಷೇಧಿಸಲಾಗಿದೆ.

ಆರೋಗ್ಯ ಕಾರ್ಡ್ ಹೊಂದಿರುವವರಿಗೆ ಚಿಕಿತ್ಸೆ ನೀಡದಿದ್ದಲ್ಲಿ ನಿಯಮಾನುಸಾರ ದುರ್ನಡತೆಯೆಂದು ಪರಿಗಣಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ (Health Department) ಆಯುಕ್ತ ಡಿ.ರಂದೀಪ್ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕಿ ಎನ್.ಟಿ.ಆಬ್ರು ಜಂಟಿ ಸುತ್ತೋಲೆ ಹೊರಡಿಸಿದ್ದಾರೆ.

ನಿಮ್ಮ ಆರೋಗ್ಯ ಐಡಿ ಕಾರ್ಡ್ ಹೀಗೆ ಪಡೆಯಿರಿ:

ದೇಶದ ಪ್ರತಿ ಪ್ರಜೆಗೂ ಅವರ ಆರೋಗ್ಯದ(health) ಸಂಪೂರ್ಣ ಮಾಹಿತಿ ಒಳಗೊಂಡ ಡಿಜಿಟಲ್‌ ಕಾರ್ಡ್‌(Digital Card) ವಿತರಿಸುವ 'ಪ್ರಧಾನಿ ಮಂತ್ರಿ ಡಿಜಿಟಲ್‌ ಹೆಲ್ತ್‌ ಮಿಷನ್‌'(Pradhan Mantri Jan Arogya Yojana) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದಾರೆ. ಇದರೊಂದಿಗೆ ಪ್ರಾಯೋಗಿಕವಾಗಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದ ಯೋಜನೆ ಇದೀಗ ದೇಶವ್ಯಾಪಿ ವಿಸ್ತರಣೆಯಾಗಿದೆ. ದೇಶದ ಪ್ರತಿ ಪ್ರಜೆಗೂ ಗುಣಮಟ್ಟದ, ಸುಲಲಿತ, ಸಮಗ್ರ, ಅಗ್ಗದ ಮತ್ತು ಸುರಕ್ಷಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಏನಿದು ಯೋಜನೆ?

ಪ್ರಧಾನಮಂತ್ರಿ ಡಿಜಿಟಲ್‌ ಆರೋಗ್ಯ ಮಿಷನ್‌ ಯೋಜನೆಯಡಿ (ಎನ್‌ಡಿಎಚ್‌ಎಂ) ದೇಶದ ಪ್ರತಿಯೊಬ್ಬರಿಗೂ ಆಧಾರ್‌(Aadhar) ಮತ್ತು ಮೊಬೈಲ್‌ ಸಂಖ್ಯೆ ರೀತಿ ವಿಶೇಷ ಗುರುತಿನ ಸಂಖ್ಯೆ ಮತ್ತು ಕಾರ್ಡ್‌ ವಿತರಿಸಲಾಗುತ್ತದೆ. ಈ ಗುರುತಿನ ಚೀಟಿಯು ವ್ಯಕ್ತಿಯೊಬ್ಬರ ಆರೋಗ್ಯ ಕುರಿತಾದ ಎಲ್ಲಾ ಮಾಹಿತಿಯನ್ನು ಒಳಗೊಂಡಿರಲಿದೆ. ಅಂದರೆ ಕಾರ್ಡ್‌ ವಿತರಿಸಿದ ಬಳಿಕ ಆ ವ್ಯಕ್ತಿ ದೇಶದ ಯಾವುದೇ ವೈದ್ಯರನ್ನು ಭೇಟಿ ಮಾಡಿದ ವಿಷಯ, ಅವರು ಆತನಿಗೆ ನೀಡಿದ ಚಿಕಿತ್ಸೆ, ವೈದ್ಯಕೀಯ ವರದಿಗಳು, ಕಾಯಿಲೆಗಳು ಸೇರಿದಂತೆ ಆತನ ಎಲ್ಲಾ ಆರೋಗ್ಯದ ಮಾಹಿತಿ ಒಳಗೊಂಡಿರುತ್ತದೆ.

ಏನಿದರ ಉಪಯೋಗ?

ಡಿಜಿಟಲ್‌ ಆರೋಗ್ಯ ಕಾರ್ಡಲ್ಲಿ(Digital Health card) ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ದಾಖಲಿಸಲಾಗುತ್ತದೆ. ಹೀಗಾಗಿ ವ್ಯಕ್ತಿಯೊಬ್ಬ ಭವಿಷ್ಯದಲ್ಲಿ ಯಾವುದೇ ವೈದ್ಯರ ಭೇಟಿ ವೇಳೆ ಈ ಕಾರ್ಡ್‌ ತೋರಿಸಿದರೆ ಅವರಿಗೆ ರೋಗಿಯ ಎಲ್ಲಾ ಪೂರ್ವಾಪರ ತಿಳಿಯುತ್ತದೆ. ಇದರಿಂದ ತಮ್ಮ ಹಳೆಯ ಚಿಕಿತ್ಸೆಯ ಮಾಹಿತಿಯ ಕಡತಗಳನ್ನು ರೋಗಿ ಎಲ್ಲೆಡೆ ತೆಗೆದುಕೊಂಡು ಹೋಗಬೇಕಿಲ್ಲ. ರೋಗಿಯ ಈ ಆರೋಗ್ಯ ಗುರುತಿನ ಚೀಟಿಯನ್ನು ನೋಡಿದರೆ, ವೈದ್ಯರು ಆರೋಗ್ಯ ಪರಿಸ್ಥಿತಿಯನ್ನು ತಿಳಿದುಕೊಳ್ಳಬಹುದು. ಜೊತೆಗೆ ಹೆಚ್ಚಿನ ಚಿಕಿತ್ಸೆಯನ್ನು ಮುಂದುವರಿಸಲು ಸಾಧ್ಯವಾಗುತ್ತದೆ. ಈ ಕಾರ್ಡ್‌ ಮೂಲಕ ರೋಗಿಗಳು ಆಯುಷ್ಮಾನ್‌ ಭಾರತ್‌ ಯೋಜನೆಯಂತಹ ಸರ್ಕಾರಿ ಯೋಜನೆಗಳಿಂದ ಪ್ರಯೋಜನಗಳನ್ನು ಪಡೆಯಲೂ ಸಾಧ್ಯವಾಗಲಿದೆ. ಸರ್ಕಾರಕ್ಕೆ ನಿರ್ದಿಷ್ಟಯೋಜನೆ ರೂಪಿಸಲು ಸಾಧ್ಯವಾಗುತ್ತದೆ.

ವೈದ್ಯರಿಗೂ ಸಹಾಯಕ

ಸರ್ಕಾರ ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯಕ್ಕೆ ಸಂಬಂಧಿಸಿದ ಡೇಟಾಬೇಸ್‌ ಅನ್ನು ಈ ಕಾರ್ಡ್‌ ಮೂಲಕ ಸಿದ್ಧಪಡಿಸುತ್ತದೆ. ಎಲ್ಲಾ ವಿವರಗಳನ್ನು ಆ ವ್ಯಕ್ತಿಯ ವೈದ್ಯಕೀಯ ದಾಖಲೆಯಲ್ಲಿ ಇರಿಸಲಾಗುವುದು. ಈ ಐಡಿಯ ಸಹಾಯದಿಂದ, ಒಬ್ಬ ವ್ಯಕ್ತಿಯ ಸಂಪೂರ್ಣ ವೈದ್ಯಕೀಯ ದಾಖಲೆಯನ್ನು ನೋಡಬಹುದು. ಇದರಿಂದ ವೈದ್ಯರಿಗೂ ನೆರವಾಗಲಿದೆ. ವ್ಯಕ್ತಿಯ ಹಿಂದಿನ ಆರೋಗ್ಯ ಸ್ಥಿತಿ, ಆತನ ವೈದ್ಯಕೀಯ ಚಿಕಿತ್ಸೆ ಬಗ್ಗೆ ಸುಲಭವಾಗಿ ಎಲ್ಲಾ ಮಾಹಿತಿ ಸಿಗಲಿದೆ. ಈ ಸೌಲಭ್ಯದ ಮೂಲಕ ಹೆಚ್ಚು ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ.

ಐಡಿ ಪಡೆಯುವುದು ಹೇಗೆ?

ಈ ಆರೋಗ್ಯಕಾರ್ಡ್‌ ಐಡಿಯನ್ನು ವ್ಯಕ್ತಿಯೊಬ್ಬರ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಸಂಖ್ಯೆಯನ್ನು ಬಳಸಿ ರಚಿಸಲಾಗುತ್ತದೆ. ಇದಕ್ಕಾಗಿ, ಸರ್ಕಾರವು ಆರೋಗ್ಯ ಪ್ರಾಧಿ​ಕಾರವನ್ನು ರಚಿಸಲಿದ್ದು, ಈ ಮೂಲಕ ವ್ಯಕ್ತಿಯ ಎಲ್ಲಾ ದಾಖಲೆಯನ್ನು ಸಂಗ್ರಹಿಸುತ್ತದೆ. ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ನೋಂದಾವಣೆಗೆ ಸಂಪರ್ಕಿಸಬಹುದು. ನಿಮ್ಮ ದಾಖಲೆಗಳನ್ನು https://healthid.ndhm.gov.in/ ನಲ್ಲಿ ನೋಂದಾಯಿಸುವ ಮೂಲಕ, ನಿಮ್ಮ ಆರೋಗ್ಯ ಐಡಿಯನ್ನು ನೀವೂ ರಚಿಸಬಹುದು. ಅಥವಾ ಗೂಗಲ್‌ ಪ್ಲೇಸ್ಟೋರ್‌ನಲ್ಲಿ ಎಬಿಡಿಎಂ ಹೆಲ್ತ್‌ ರೆಕಾರ್ಡ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡುವ ಮೂಲಕ ಆರೋಗ್ಯ ಐಡಿಯನ್ನು ಪಡೆಯಬಹುದು. ಮೂಲ ವಿವರಗಳನ್ನು ಪಡೆಯಲು ಮೊಬೈಲ್‌ ಸಂಖ್ಯೆ ಅಥವಾ ಆಧಾರ್‌ ಸಂಖ್ಯೆ ದೃಢೀಕರಿಸಲು ಮಾತ್ರ ಸಮಯ ಹಿಡಿಯುತ್ತದೆ. ಇದರ ಹೊರತಾಗಿ 10 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಮುಗಿಯಲಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಕೆ ಹೇಗೆ?

https://healthid.ndhm.gov.in/ ವೆಬ್‌ಸೈಟ್‌ಗೆ ಲಾಗಿನ್‌ ಆಗಿ

(

-ಎನ್‌ಡಿಎಚ್‌ಎಂ ಐಡಿ ಆಯಪ್‌ ತೆರೆಯಿರಿ. ನೋಂದಣಿ ಪುಟ ತೆರೆಯುತ್ತದೆ.

-ರಿಜಿಸ್ಟರ್‌ ಬಟನ್‌ ಮೇಲೆ ಕ್ಲಿಕ್‌ ಮಾಡಿ

-ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನಮೂದಿಸಿ

-ನೀವು ನಮೂದಿಸಿದ ಮೊಬೈಲ್‌ ಸಂಖ್ಯೆಗೆ ಬಂದ ಒಟಿಪಿಯನ್ನು ಟೈಪ್‌ ಮಾಡಿ.

-ಅರ್ಜಿಯ ಅಂತಿಮ ಸಲ್ಲಿಕೆಗೆ 'ಸಬ್ಮಿಟ್‌' ಬಟನ್‌ ಮೇಲೆ ಕ್ಲಿಕ್‌ ಮಾಡಿ.

(ಮಾಹಿತಿ ಕೃಪೆ ಸುವರ್ಣ ನ್ಯೂಸ್)

ಕಾಪ್ಟರ್ ಪತನ: ಘಟನಾ ಸ್ಥಳದಲ್ಲಿ CRPF ಕೋಬ್ರಾ ಪಡೆಯಿಂದ ಶಂಕಿತ ವ್ಯಕ್ತಿ ಅರೆಸ್ಟ್

 

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು ಸಿಆರ್‌ಪಿಎಫ್‌ನ ಕೋಬ್ರಾ ಪಡೆ ಬಂಧಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ನೀಲಗೀರಿ ಅರಣ್ಯದ ಪರ್ವತ ಪ್ರದೇಶಗಳ ವೆಲ್ಲಿಂಗ್‌ಟನ್ ಬಳಿ ಈ ದುರ್ಘಟನೆ ನಡೆದಿದೆ.

ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು ಎಂದು ಹಲವರು ಪ್ರಶ್ನಿಸುತ್ತಿದ್ದು ನೀಲಗೀರಿ ಕಾಡಿನಲ್ಲಿ ಪತನವಾಗಿದ್ದರ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಘಟನೆ ನಡೆದ ಸ್ಥಳ ವೆಲ್ಲಿಂಗ್‌ಟನ್‌ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ತೀವ್ರ ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದು ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ಐಎಎಫ್ ತಿಳಿಸಿತ್ತು.

(ಮಾಹಿತಿ ಕೃಪೆ ಪ್ರಜಾವಾಣಿ)

ಉದ್ಯೋಗ ವಾರ್ತೆಗಳು: ಐಐಎಸ್‌ಸಿಯಲ್ಲಿ ಹುದ್ದೆಗಳು

 

ಐಐಎಸ್‌ಸಿಯಲ್ಲಿ ಹುದ್ದೆಗಳು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಎಲೆಕ್ಟ್ರಾನಿಕ್‌ ಸಂಪನ್ಮೂಲ ನಿರ್ವಹಣೆ, ಪ್ರಾಜೆಕ್ಟ್‌ ಟ್ರೈನಿ, ಲೈಬ್ರರಿ ಇನ್ಫರ್ಮೇಷನ್‌ ಮ್ಯಾನೇಜ್‌ಮೆಂಟ್ ಟ್ರೈನಿ

ಹುದ್ದೆಗಳ ಸಂಖ್ಯೆ: 14

ಸ್ಥಳ: ಬೆಂಗಳೂರು

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿಟೆಕ್‌, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. 

ವಯೋಮಿತಿ: ಗರಿಷ್ಠ 30 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 14, 2021

ಹೆಚ್ಚಿನ ಮಾಹಿತಿಗೆ: https://iisc.ac.in/opportunities/

***

ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ಹುದ್ದೆಗಳು

ಕರೂರ್ ವೈಶ್ಯ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮ್ಯಾನತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50 ಅಂಕಗಳೊಂದಿಗೆ ಪದವಿ ಮುಗಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ನವೆಂಬರ್‌ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ಆಗಿರಬೇಕು. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 31, 2021

ಹೆಚ್ಚಿನ ಮಾಹಿತಿಗೆ: https://www.kvb.co.in/

***

ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಹುದ್ದೆಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2021-22 ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 115

ಸ್ಥಳ: ಭಾರತದೆಲ್ಲೆಡೆ

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಬಿಟೆಕ್‌, ಎಂಎಸ್‌ಸಿ, ಸಿಎ ಹಾಗೂ ಇತ್ಯಾದಿ.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷಗಳಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ₹ 850, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ₹ 175

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 17, 2021

ಹೆಚ್ಚಿನ ಮಾಹಿತಿಗೆ: https://www.centralbankofindia.co.in/en/recruitments

***

ಎಐಐಎಂಎಸ್‌ನಲ್ಲಿ ಹುದ್ದೆಗಳು

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್‌), ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು.

ಹುದ್ದೆ: ಜ್ಯೂನಿಯರ್ ರೆಸಿಡೆಂಟ್‌

ಹುದ್ದೆಗಳ ಸಂಖ್ಯೆ: 24

ಸ್ಥಳ: ಆಂಧ್ರಪ್ರದೇಶದ ಗುಂಟೂರು

ವಿದ್ಯಾರ್ಹತೆ: ಈ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗೆ ಗರಿಷ್ಠ 33 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 1000, ಎಸ್‌ಸಿ, ಎಸ್‌ಸಿ ಅಭ್ಯರ್ಥಿಗಳಿಗೆ ₹ 500 ಹಾಗೂ ಅಂಗವಿಕಲರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ

ಸಂದರ್ಶನ ದಿನಾಂಕ: ಜನವರಿ 5, 2022

ಸಂದರ್ಶನ ನಡೆಯುವ ಸ್ಥಳ: ಧರ್ಮಶಾಲಾ ಕಟ್ಟಡ, ಏಮ್ಸ್ ಮಂಗಳಗಿರಿ ಮೇನ್ ಕ್ಯಾಂಪಸ್.

ಹೆಚ್ಚಿನ ಮಾಹಿತಿಗೆ: https://www.aiimsexams.ac.in/info/Recruitments_new.html

(ಮಾಹಿತಿ ಕೃಪೆ ಪ್ರಜಾವಾಣಿ)

Friday, November 19, 2021

Karnataka Weather Today : ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

 
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ (Rain) ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು,ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ರಾಮನಗರ ಜಿಲ್ಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಇಂದು ( ನ.19) ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆ ಸಿಎಂ ಬೊಮ್ಮಾಯಿ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮಳೆ ಹಾನಿ, ಪರಿಹಾರ ಕ್ರಮಗಳ ಬಗ್ಗೆ ಡಿಸಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

(ಮಾಹಿತಿ ಕೃಪೆ Kannada news Now)

Monday, November 1, 2021

Puneet Rajkumar: 'ರಾಜಕುಮಾರ'ನ ಎರಡು ಕಣ್ಣುಗಳನ್ನು ನಾಲ್ವರಿಗೆ ಬೆಳಕಾಗಿದ್ದು ಹೇಗೆ.? ಇಲ್ಲಿದೆ ವೈದ್ಯರು ತೆರೆದಿಟ್ಟ ಮಾಹಿತಿ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ನಂತ್ರ, ನಟ ಪುನೀತ್ ರಾಜ್ ಕುಮಾರ್ ( Puneet Rajkumar ) ಅವರು ನೇತ್ರದಾನ ಮಾಡಿದ್ದಾರೆ. ಅವರ ಕಣ್ಣುಗಳನ್ನು ಇಬ್ಬರಿಗಲ್ಲ, ನಾಲ್ವರು ಕಣ್ಣಿನ ತೊಂದರೆ ( Eye Problem ) ಎದುರಿಸುತ್ತಿರುವಂತ ಜನರಿಗೆ ಅಳವಡಿಸಲಾಗಿದೆ.

ಇದು ಹೊಸ ತಂತ್ರಜ್ಞಾನದ ಮೂಲಕ ಅಳವಡಿಸುವಂತೆ ಆಯ್ತು. ಈ ಮೂಲಕ ನಟ ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದರು ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ ಎಂದು ನಾರಾಯಣ ನೇತ್ರಾಲಯದ ( Narayana Netralaya ) ಮುಖ್ಯಸ್ಥ ಡಾ.ಭುಜಂಗಶೆಟ್ಟಿ ( Dr.Bhujangashetty ) ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಾಲ್ಕು ಮಂದಿಗೆ ಕಣ್ಣುಗಳನ್ನು ಅಳವಡಿಸಲಾಗಿದೆ. ಇದು ಹೇಗೆ ಆಗುತ್ತದೆ ಅಂತ ಯೋಚಿಸಿದ್ರೇ, ಹೊಸ ರೀತಿಯ ತಂತ್ರಜ್ಞಾನದ ಮೂಲಕ ನಾಲ್ವರಿಗೆ ಅಳವಡಿಸಲಾಗಿದೆ. ಮುಂದಿನ ಭಾಗ ಒಬ್ಬರಿಗೆ, ಅದರ ಹಿಂದಿನ ಭಾಗವನ್ನು ಮತ್ತೊಬ್ಬರಿಗೆ ಜೋಡಿಸಲಾಗಿದೆ. ಹೀಗೆ ಒಂದು ಕಣ್ಣನ್ನು ಇಬ್ಬರಿಗೆ, ಮತ್ತೊಂದು ಕಣ್ಣನ್ನು ಇಬ್ಬರಿಗೆ ಸೇರಿಸಿದಂತೆ ನಾಲ್ವರಿಗೆ ಪುನೀತ್ ರಾಜ್ ಕುಮಾರ್ ಕಣ್ಣನ್ನು ಅಳವಡಿಸಲಾಗಿದೆ ಎಂದರು.

ಇದು ರಾಜ್ಯದಲ್ಲೇ ಹೊಸ ಪ್ರಯೋಗವಾಗಿದೆ. ಒಂದೇ ದಿನದಲ್ಲಿ ನಾಲ್ವರಿಗೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ಅಳವಡಿಸಲಾಗಿದೆ. ನಾಲ್ವರು ಕಣ್ಣಿನ ತೊಂದರೆ ಅನುಭವಿಸುತ್ತಿದ್ದಂತವರಿಗೆ ಪುನೀತ್ ರಾಜ್ ಕುಮಾರ್ ಕಣ್ಣು ಅಳವಡಿಸಿದ ನಂತ್ರ ತುಂಬಾ ಚೆನ್ನಾಗಿದ್ದಾರೆ. ಹೀಗೆ ಶಸ್ತ್ರ ಚಿಕಿತ್ಸೆಯ ಮೂಲಕ ನಾಲ್ವರು ಅಂದರ ಭಾಳಿಗೆ ನಟ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ ಎಂದು ತಿಳಿಸಿದರು.

ಕನ್ನಡ ಮೇರು ನಟ ಡಾ.ರಾಜ್ ಕುಮಾರ್ ಅವರಂತೆ, ನಟ ಪುನೀತ್ ರಾಜ್ ಕುಮಾರ್ ತಮ್ಮ ಅಮೂಲ್ಯ ಕಣ್ಣುಗಳನ್ನು ನೇತ್ರದಾನ ಮಾಡಿದ್ದಾರೆ. ಇದರಿಂದ ನಾಲ್ವರು ಅಂದರ ಬಾಳಿನಲ್ಲಿ ಬೆಳಕಾಗಿದ್ದಾರೆ. ಅವರ ಕುಟುಂಬಕ್ಕೆ ಧನ್ಯವಾದಗಳು. ಇಂತಹ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂಬುದಾಗಿ ಡಾ.ಭುಜಂಗಶೆಟ್ಟಿಯವರು ಮನವಿ ಮಾಡಿದರು.

ಅಂದಹಾಗೇ ಬಹುತೇಕರ ಪ್ರಶ್ನೆ ಪುನೀತ್ ರಾಜ್ ಕುಮಾರ್ ಎರಡು ಕಣ್ಣುಗಳನ್ನು ನಾಲ್ವರಿಗೆ ಹೇಗೆ ಹಾಕೋಕೆ ಸಾಧ್ಯ ಎಂಬುದಾಗಿದೆ. ಆದ್ರೇ.. ಒಂದೊಂದು ಕಣ್ಣಿನ ಮೇಲಿನ ಹಾಗೂ ಅದರ ಕೆಳಗಿನ ಎರಡು ಲೇಯರ್ ಗಳು ಹಾನಿಕೊಂಡಿರುವಂತ ರೋಗಿಗಳಿಗೆ ಒಂದೊಂದು ಭಾಗವನ್ನು ಶಸ್ತ್ರ ಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದೆ. ಈ ಹೆ ಒಂದೊಂದು ಕಣ್ಣಿನಿಂದ ಎರಡು ಭಾಗಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ನಾಲ್ವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಂತ ರೋಗಿಗಳಿಗೆ ಅಳವಡಿಸೋ ಮೂಲಕ ನಾಲ್ವರು ಅಂದರ ಭಾಳಿನಲ್ಲಿ ನಟ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ.

(ಮಾಹಿತಿ ಕೃಪೆ Kannada News Now)


Saturday, October 30, 2021

BIG BREAKING NEWS: ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದಲ್ಲ, ನಾಳೆ ಮಾಡಲಾಗುತ್ತದೆ - ಸಿಎಂ ಬಸವರಾಜ ಬೊಮ್ಮಾಯಿ


 ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರಕ್ಕೆ ಅವಸರ ಮಾಡುವುದಿಲ್ಲ. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಎಲ್ಲರೊಂದಿಗೂ ಮಾತನಾಡಿದ್ದೇವೆ. ಅಭಿಮಾನಿಗಳು ಬಹಳಷ್ಟು ಜನರು ಅವರ ಅಂತಿಮ ದರ್ಶನ ಮಾಡಬೇಕಿದೆ.ಹೀಗಾಗಿ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನಾಳೆ ನೆರವೇರಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಹಳಷ್ಟು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು, ಗಣ್ಯರು ನಟ ಪುನೀತ್ ರಾಜ್ ಕುಮಾರ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಸಮಯವಾಗಿದೆ. ರಾತ್ರಿಯ ವೇಳೆಗೆ ಅಂತ್ಯಕ್ರಿಯೆ ಮಾಡುವುದು ಸವಾಲಿನ ವಿಚಾರವಾಗಿದೆ. ಈ ಎಲ್ಲಾ ನಿಟ್ಟಿನಲ್ಲಿ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜೊತೆಗೆ ಮಾತುಕತೆ ನಡೆಸಿ, ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

(ಮಾಹಿತಿ ಕೃಪೆ Kannada News Now)

BIG BREAKING NEWS: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ


 ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಇಂದು ಸಂಜೆಯೇ ನೆರವೇರಿಸಲಾಗುವುದು. ಮಧ್ಯಾಹ್ನದ ವೇಳೆಗೆ ಪುನೀತ್ ರಾಜಕುಮಾರ್ ಅವರ ಪುತ್ರಿ ದೃತಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ. ಸಂಜೆ 6 ರಿಂದ 7 ಗಂಟೆಯ ಒಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಾ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ವಿದೇಶದಿಂದ ದೆಹಲಿಗೆ ಆಗಮಿಸಲಿರುವ ಪುನೀತ್ ಪುತ್ರಿ ದೃತಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬರಲಿದ್ದಾರೆ. ಅವರು ಮಧ್ಯಾಹ್ನದೊಳಗೆ ಬೆಂಗಳೂರಿಗೆ ಬಂದರೆ ದರ್ಶನ ಪಡೆದ ನಂತರ ಸಂಜೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

(ಮಾಹಿತಿ ಕೃಪೆ ಕನ್ನಡದುನಿಯಾ)

Friday, October 29, 2021

BIG BREAKING NEWS: 'ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್' ಇನ್ನಿಲ್ಲ


 *ವಸಂತ ಲೀಲಾ ಬಿ ಈಶ್ವರಗೆರೆ

ಬೆಂಗಳೂರು: ಜಿಮ್ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಇಂದು, ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಚಿಕಿತ್ಸೆ ಫಲಕಾರಿಯಾಗದೇ ಇನ್ನಿಲ್ಲವಾಗಿದ್ದಾರೆ.

ಇಂದು ಬೆಳಿಗ್ಗೆ 11.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ, ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಬಂದು, ವಿಕ್ರಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಿದ್ದಂತ ವೈದ್ಯರು, ಅವರ ಸ್ಥಿತಿ ಗಂಭೀರಗೊಂಡಿದೆ. ಅಂತಿಮ ಹಂತದ ಎಲ್ಲಾ ಚಿಕಿತ್ಸೆ ನಡೆಸುತ್ತಿರೋದಾಗಿ ತಿಳಿಸಿದ್ದರು.

ಈ ಎಲ್ಲಾ ಬೆಳವಣಿಗೆಯ ನಂತ್ರ, ಹೃದಯಾಘಾತಕ್ಕೆ ಒಳಗಾದಂತ ಅವರಿಗೆ ಕಡೆಯ ಕ್ಷಣದ ಎಲ್ಲಾ ರೀತಿಯ ಪ್ರಯತ್ನವನ್ನು ನಡೆಸಿದರೂ, ಚಿಕಿತ್ಸೆಗೆ ಪ್ರತಿಸ್ಪಂದಿಸದ ಕಾರಣ, ಇಂದು ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ( Power Star Puneet Rajkumar No More ) ಅವರು ಇನ್ನಿಲ್ಲವಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ಜೀವನ ಯಾತ್ರೆ

ಪುನೀತ್ ರಾಜ್‍ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು, ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ.

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು.

ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ಚಿತ್ರದಲ್ಲಿ ಅಭಿನಯಿಸಿದರು. ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.

ವೈಯಕ್ತಿಕ ಜೀವನ

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್ 1975ರಂದು ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ. ದ್ರಿತಿ ಮತ್ತು ವಂದಿತಾ. ಇವರ ಮೊದಲ ಹೆಸರು ಮಾ.ಲೋಹಿತ್ ಆಗಿತ್ತು.

ಅಭಿನಯಿಸಿದ ಚಲನಚಿತ್ರಗಳು

ಬಾಲ ನಟನಾಗಿ ಅಭಿನಯಿಸಿದಂತ ಚಿತ್ರಗಳು

  1. ಪ್ರೇಮದ ಕಾಣಿಕೆ
  2. ಭಾಗ್ಯವಂತ
  3. ಎರಡು ನಕ್ಷತ್ರಗಳು
  4. ಬೆಟ್ಟದ ಹೂವು
  5. ಚಲಿಸುವ ಮೋಡಗಳು
  6. ಶಿವ ಮೆಚ್ಚಿದ ಕಣ್ಣಪ್ಪ
  7. ಪರಶುರಾಮ್
  8. ಯಾರಿವನು
  9. ಭಕ್ತ ಪ್ರಹ್ಲಾದ
  10. ವಸಂತ ಗೀತ

ನಟರಾಗಿ ಅಭಿನಯಿಸಿದಂತ ಚಿತ್ರಗಳು

  • ಅಪ್ಪು
  • ಅಭಿ
  • ವೀರ ಕನ್ನಡಿಗ
  • ಮೌರ್ಯ
  • ಆಕಾಶ್
  • ನಮ್ಮ ಬಸವ
  • ಅಜಯ್
  • ಅರಸು
  • ಮಿಲನ
  • ಬಿಂದಾಸ್
  • ವಂಶಿ
  • ರಾಜ್ ದ ಶೋಮ್ಯಾನ್
  • ಪೃಥ್ವಿ
  • ರಾಮ್
  • ಜಾಕಿ
  • ಹುಡುಗರು
  • ಪರಮಾತ್ಮ
  • ಅಣ್ಣ ಬಾಂಡ್
  • ಯಾರೇ ಕೂಗಾಡಲಿ
  • ನಿನ್ನಿಂದಲೇ
  • ಮೈತ್ರಿ
  • ಪವರ್ ಸ್ಟಾರ್
  • ಧೀರ ರಣಧೀರ
  • ಚಕ್ರವ್ಯೂಹ
  • ದೊ‍ಡ್ಮನೆ ಹುಡುಗ
  • ರಾಜಕುಮಾರ
  • ಅಂಜನಿ ಪುತ್ರ
  • ನಟಸಾರ್ವಭೌಮ
  • ಯುವರತ್ನ

ಸೇರಿದಂತೆ ಇನ್ನೂ ಅನೇಕ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಹೀಗೆ ಬಹುಮುಖ ಪ್ರತಿಭೆಯ ಮೂಲಕ, ಬಾಲನಟನಾಗಿ, ನಟನಾಗಿ, ನಿರ್ಮಾಪಕನಾಗಿ ತೊಡಗಿಸಿಕೊಂಡಿದ್ದಂತ ಕನ್ನಡದ ದೊಡ್ಮನೆಯ ಕೊಂಡಿಯೊಂದು, ಇಂದು ಇನ್ನಿಲ್ಲವಾಗಿದೆ. ಈ ಮೂಲಕ ನಟ ಪುನೀತ್ ರಾಜ್ ಕುಮಾರ್ ಬಾರದ ಲೋಕಕ್ಕೆ ತೆರಳಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಬಗ್ಗೆ ಮಾಹಿತಿ ಕೃಪೆ : ವೀಕಿಪೀಡಿಯಾ

Kannada News Now


Thursday, October 14, 2021

2 ತಲೆ, 3 ಕಣ್ಣುಗಳೊಂದಿಗೆ ವಿಚಿತ್ರ ಕರು ಜನನ..!


ಭುವನೇಶ್ವರ, ಅ. 13- ನವರಾತ್ರಿಯ ಸಮಯದಲ್ಲಿ 2 ತಲೆ ಹಾಗೂ 3 ಕಣ್ಣುಗಳುಳ್ಳ ಕರು ಜನಿಸಿರುವುದರಿಂದ ಇದು ದೇವರ ವರ ಪ್ರಸಾದ ಎಂದು ತಿಳಿದು ಜನರು ಕರುವನ್ನು ಪೂಜಿಸುತ್ತಿರುವ ಘಟನೆಯು ಒರಿಸ್ಸಾದ ನಬ್ರಂಗ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ನಬ್ರಂಗ್‍ಪುರ್ ಜಿಲ್ಲೆಯ ಬಿಜಾಪುರ ಗ್ರಾಮದಲ್ಲಿರುವ ಧನಿರಾಂ ಎಂಬ ರೈತನ ಮನೆಯಲ್ಲಿ ಈ ವಿಚಿತ್ರ ಕರು ಜನನವಾಗಿದ್ದು ಈ ಕರುವನ್ನು ನೋಡಲು ಸುತ್ತಮುತ್ತಲಿನ ಜನರು ತಂಡೋಪತಂಡವಾಗಿ ಬಂದು ಪೂಜೆಯನ್ನು ಸಲ್ಲಿಸಿದ್ದಾರೆ. ಧನಿರಾಂ ಅವರು ಎರಡು ವರ್ಷಗಳ ಹಿಂದೆ ಹಸುವೊಂದನ್ನು ಮನೆಗೆ ತಂದಿದ್ದು ಅದೇ ಈಗ ವಿಚಿತ್ರ ಕರುವಿಗೆ ಜನ್ಮ ನೀಡಿದೆ.

ಹಸುವು ಗರ್ಭ ಧರಿಸಿದ್ದಾಗ ಅದು ಅನಾರೋಗ್ಯದಿಂದ ಬಳಲುತ್ತಿದೆ ಎಂದು ನೆರೆಮನೆಯಾತ ಧನಿರಾಂಗೆ ತಿಳಿಸಿದ್ದರು, ಕರು ಜನಿಸಲಿ ಆಮೇಲೆ ನೋಡೋಣ ಎಂದು ಅವರು ಹೇಳಿದ್ದರು. ಆದರೆ ಈಗ ಹಸುವು 2 ತಲೆ ಹಾಗೂ 3 ಕಣ್ಣಿರುವ ಕರುವಿಗೆ ಜನ್ಮ ನೀಡಿದೆ.
ಕರುವು 2 ತಲೆ ಹೊಂದಿರುವುದರಿಂದ ಹಾಲು ಕುಡಿಯಲು ಪರದಾಡುವಂತಾಗಿದೆ.

(ಮಾಹಿತಿ ಕೃಪೆ ಈ ಸಂಜೆ)

Wednesday, October 13, 2021

ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ ಹಾಡಿನ ಸಾಹಿತ್ಯ

 


👉 

ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
ಗಂಡು ಅಂದ್ರೆ ಹಿಂಗೇನೆ ಪ್ರೀತಿ ಅಂದ್ರೆ ತಂತಾನೆ
ಬಂಡೇಯಾದ್ರೂ ಬೆಣ್ಣೆಯಂತೆ ಕರಗೋಗ್ತಾನೆ
ಗಂಡು:-ನನಗೆ ಇದೇನಾಯ್ತೋ ಕಾಣೇ
ಮನಸೇ ಕಳೆದ್ಹೋಗಿದೆ..
ಹೊರಗೇ ನನ್ನೊಳಗೆಲ್ಲ ನೀನೇ
ನಿನದೇ ಜಪವಾಗಿದೇ..
ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
************************
ಹೆಣ್ಣು:-ಪ್ರಿತಿಯಿಂದ್ಲೆ ತಾನೇ

ಆ ಮೋಡಾ ಕರಗಿ ಮಳೆಯು ಸುರಿಯೋದೂ..
ಗಂಡು:-ಹೌದಾ..
ಹೆಣ್ಣು:-ಪ್ರೇಮಾ ಇದ್ರೇ ತಾನೇ
ಆ ಕಡಲಾ ಕಡೆಗೆ ಹೊಳೆಯು ಹರಿಯೋದೂ..
ಗಂಡು:-ಹಂಗಾ..
ಹೆಣ್ಣು:-ದುಂಬಿ ದಂಡು ಹೂವ ಕಂಡು ಶರಾಣಾಗೋದು..
ಈ ಜಿಂಕೆ ದಂಡು ಹಸಿರ ಕಂಡು ಮರುಳಾಗೋದು
ಗಂಡು:-ಬೀಸೋ ಗಾಳಿಗೆ ಭಾರೀ ಮರವೇ ತಲೆಬಾಗೋದು
ಈ ಕಡಲಾ ನೀರು ಕುಣಿದುಕುಣಿದು ಅಲೆಯಾಗೋದು..ಆಆಆ.
ಹೆಣ್ಣು:-ಒಂದೊಂದ್ಸಾರಿ ಹಿಂಗೇನೆ ನೋಡ್ ನೋಡ್ತಾಇದ್ದಂಗೇನೆ
ಆಕಾಶಾನೆ ಅಂಗೈಮೇಲೆ ತಂದಿಡ್ತಾನೆ
************************
ಹೆಣ್ಣು:-ಸೂರ್ಯ ಚಂದ್ರ ಸಾಕ್ಷಿ

ಒಂದ್ ಸಾವಿರ ವರ್ಷ ಹಾಯಾಗಿರ್ತೀನಿ..
ಗಂಡು:-ಹೌದಾ..
ಹೆಣ್ಣು:-ನಾ ಮುದ್ದಿನ ಮಡದಿಯಾಗಿ
ನಿನ್ ನೂರು ಮಕ್ಕಳ ತಾಯಾಗಿರ್ತೀನಿ..
ಗಂಡು:-ಹಂಗಾ..
ಹೆಣ್ಣು:-ಜೋಡಿ ಹಕ್ಕಿಯಾಗಿ ನಾವು ಹಾರೋಣ ಬಾ..
ಈ ಕಾಮನಬಿಲ್ಲೇ ಜಾರೋ ಗುಂಪೆ ಜಾರೋಣ ಬಾ..
ಗಂಡು:-ಕಾಡು ಕಣಿವೆ ಬೆಟ್ಟ ಗುಡ್ಡ ಓಡಾಡುವಾ..
ಈಪ್ರೀತಿ ಎಲ್ಲಾ ಮುಳುಗಿ ಎದ್ದು ಈಜಾಡುವಾ..ಆಆಆ.
ಹೆಣ್ಣು ಅಂದ್ರೆ ಹಿಂಗೇನೆ
ವಯಸಿಗ್ ಬರ್ತಿದ್ ಹಂಗೇನೆ
ಆಕಾಶಕ್ಕೆ ಏಣಿ ಹಾಕೋದ್ ಸಹಜಾ ತಾನೇ.
ಪ್ರೀತಿ ಅಂದ್ರೆ ಹಿಂಗೇನೆ ಎರಡು ಜೀವ ಒಂದೇನೆ
ಭೂಮಿ ತುಂಬಾ ಇನ್ನು ಮುಂದೆ ನಾನು ನೀನೇ..
ಹೆಣ್ಣು:-ನನಗೆ ಇದೇನಾಯ್ತೋ ಕಾಣೇ.
ಮನಸೇ ಕಳೆದ್ಹೋಗಿದೆ..
ಹೊರಗೇ ನನ್ನೊಳಗೆಲ್ಲ ನೀನೇ
ನಿನದೇ ಜಪವಾಗಿದೇ..

ಕನ್ನಡದಲ್ಲಿ ಗೀತಾಂಜಲಿ ಹಾಡಿನ ಸಾಹಿತ್ಯ

 

 
👉
ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ
ಪುಷ್ಪಾಂಜಲಿ
ತೊಂಡೆ ಹಣ್ಣಿಗೆ
ಬಾಳೆ ದಿಂಡಿಗೆ
ದಾಳಿಂಬೆ ಹಣ್ಣಿಗೆ

ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ

ನೀರಾಗಲೇನೆ ನಾ?
ಮೈಯ ಮೇಲೆ ಜಾರಿ ಹೋಗಲು
ಗಾಜಾಗಲೇನೇ ನಾ?
ನಿನ್ನ ಅಂದ ಚಂದ ತೋರಲು

ಮಂಜಾಗಲೇನೆ ನಾ?
ನಿನ್ನ ಕೋಪ ತಂಪು ಮಾಡಲು
ತೇರಾಗಲೇನೆ ನಾ?
ನಿನ್ನ ಹೊತ್ತು ಕೊಂಡು ಹೋಗಲು

ಕೇಳದೆ ದೇವಿ ವರವ ಕೊಡಳು
ಹೊಗಳದೆ ನಾರಿ ಮನಸು ಕೊಡಳು
ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಲಾಲಾಲಲಾ
ಲಾಲಲಾಲಲ ಲಾಲಲಾಲಲ
ಲಲಾಲಲಾಲಲ

ಕೈಲಾಸ ಕೈಯ್ಯಲಿ
ನೀನು ನನ್ನ ತೋಳಲ್ಲಿದ್ದಾರೆ
ಆಕಾಶ ಜೇಬಲಿ
ನಿನ್ನ ನಗು ಹೀಗೆ ಇದ್ದರೆ

ಓ ಮಿಂಚು ಹೂಗಳೆ
ನಿನ್ನ ಮಾತು ಕೇಳುತಿದ್ದರೆ
ಸೀನೆರೆ ಸಾಗರ
ನಿನ್ನ ಭಾವ ಹೀಗೆ ಇದ್ದರೆ

ಓಡದೆ ನೀನು
ಜಿಂಕೆಯಾದೆ
ಹಾರದೆ ನಾನು
ಹಕ್ಕಿಯಾದೆ
ಓ ಕನಕಾಂಬರಿ ನೀನು ಬಾರದೆ
ಪೂಜೆಗೆ ಹೂವಿಲ್ಲ
ಓ ಶ್ವೇತಾಂಬರಿ ನೀನು ಬಾರದೆ
ಉತ್ಸವ ಸಾಗಲ್ಲ

ಗೀತಾಂಜಲಿ
ಹಾಲುಗೆನ್ನೆಗೆ ವಾರೆಗಣ್ಣಿಗೆ
ನಮ್ಮೂರ ಹೆಣ್ಣಿಗೆ

ಪುಷ್ಪಾಂಜಲಿ
ತೊಂಡೆ ಹಣ್ಣಿಗೆ
ಬಾಳೆ ದಿಂಡಿಗೆ
ದಾಳಿಂಬೆ ಹಣ್ಣಿಗೆ


ಕೋವಿಡ್-19: ಭಾರತದಲ್ಲಿಂದು 15,823 ಹೊಸ ಕೇಸ್ ಪತ್ತೆ, 226 ಮಂದಿ ಸಾವು

  

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 15,823 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 226 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,01,743ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,189ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,07,653ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 22,844 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,42,901ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 13,25,399 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,63,63,442 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 96,43,79,212 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ...

(ಮಾಹಿತಿ ಕೃಪೆ ಕನ್ನಡ ಪ್ರಭ)

 

ರಾಜ್ಯದಲ್ಲಿ ವಿದ್ಯುತ್ ಕಡಿತ ಇಲ್ಲ; ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರಕ್ಕೆ ಬೇಡಿಕೆ: ಸಿಎಂ ಬೊಮ್ಮಾಯಿ

 


ಬೆಂಗಳೂರು, ಅಕ್ಟೋಬರ್ 13: ರಾಜ್ಯದ ವಿದ್ಯುತ್ ಉತ್ಪಾದನೆ, ಪೂರೈಕೆ ಪರಿಸ್ಥಿತಿ ಹಾಗೂ ರಾಜ್ಯದಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
"ವಿದ್ಯುತ್​ ಉತ್ಪಾದನೆ ಹಾಗೂ ಮಳೆಯಿಂದಾದ ಪರಿಣಾಮಗಳ ಕುರಿತು ಸಭೆ ನಡೆಸಿದ್ದೇನೆ. ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವರ ಭೇಟಿ ಬಳಿಕ ಹೆಚ್ಚುವರಿ 2 ರೇಕ್ ಕಲ್ಲಿದ್ದಲು ಬರುತ್ತಿದೆ. ಇನ್ನೂ ಎರಡು ರೇಕ್ ಕಲ್ಲಿದ್ದಲು​ ಕೊಡುವುದಾಗಿ ಹೇಳಿದ್ದಾರೆ. ನಾವು ಹಣ ಪಾವತಿಸಿದ ತಕ್ಷಣ ಪೂರೈಕೆ ಪ್ರಕ್ರಿಯೆ ನಡೆಯುತ್ತದೆ. ರಾಜ್ಯದಲ್ಲಿ ವಿದ್ಯುತ್​ ಸ್ಥಗಿತ ಆಗದಂತೆ ನೋಡಿಕೊಳ್ಳುತ್ತೇವೆ," ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
"ರಾಜ್ಯದಲ್ಲಿ ಪ್ರಸ್ತುತ 98,863 ಮೆಟ್ರಿಕ್ ಟನ್ ಕಲ್ಲಿದ್ದಲು ದಾಸ್ತಾನು ಇದೆ. ತೆಲಂಗಾಣದ ಸಿಂಗರೇಣಿಯಿಂದ ಕಲ್ಲಿದ್ದಲು ತರಿಸುವ ಬಗ್ಗೆ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು."
"ರಾಜ್ಯದಲ್ಲಿ ಯಾವುದೇ ರೀತಿಯ ಪವರ್​ ಕಟ್ ಇಲ್ಲ. ಮುಂದೆಯೂ ರಾಜ್ಯದಲ್ಲಿ ಪವರ್​ ಕಟ್​ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಜೊತೆಗೂ ಮಾತಾಡುತ್ತಿದ್ದೇನೆ. 10-12 ರೇಕ್ ಕಲ್ಲಿದ್ದಲು​ ನೀಡುವ ಕುರಿತು ಚರ್ಚಿಸಲಾಗುತ್ತಿದೆ. ಎಸ್ಕಾಂ ಆರ್ಥಿಕ ಸಫಲತೆ ಕಾಣಬೇಕು," ಎಂದು ಅವರು ಹೇಳಿದ್ದಾರೆ.
"ಸಿದ್ದರಾಮಯ್ಯ ಖಾಸಗೀಕರಣದ ಭ್ರಮೆಯಲ್ಲೇ ಇರ್ತಾರೆ. ಸರ್ಕಾರ ಫೇಲ್ ಆಗಿಲ್ಲ, ಕಲ್ಲಿದ್ದಲು ಕೊರತೆ ಆಗುವುದಕ್ಕೆ ಬಿಡಲ್ಲ. ಈ ಬಾರಿ ಮಳೆ ಹೆಚ್ಚು ಆಗಿದ್ದರಿಂದ ಕಲ್ಲಿದ್ದಲು ಸಮಸ್ಯೆ ಉಂಟಾಗಿದೆ. ಒಡಿಶಾದಲ್ಲಿ ಮಳೆ ಹೆಚ್ಚಾಗಿದ್ದರಿಂದ ಕಲ್ಲಿದ್ದಲು ಸಮಸ್ಯೆ ಉಂಟಾಗಿದೆ. ಒಡಿಶಾದಿಂದ ಕಲ್ಲಿದ್ದಲು ಬರಲು ನಿಧಾನವಾಗುತ್ತಿದೆ. ಸಿದ್ದರಾಮಯ್ಯರ ಆರೋಪ ಆಧಾರ ರಹಿತವಾದದ್ದು," ಎಂದು ಕೃತಕ ಅಭಾವ ಸೃಷ್ಟಿಸಿ ಖಾಸಗೀಕರಣ ಮಾಡಬಾರದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು.
"ಎಸ್ಕಾಂಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಿಂದೆ ಸರ್ಕಾರ ಕೊಟ್ಟಿರುವ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸುವ ಪ್ರಸ್ತಾವನೆ ನಮ್ಮ ಮುಂದಿದ್ದು, ಅದರ ಬಗ್ಗೆಯೂ ಕ್ರಮ ಜರುಗಿಸಲಾಗುವುದು. ಎಸ್ಕಾಂ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಆದಾಯ ಸಂಗ್ರಹಕ್ಕೆ ಆದ್ಯತೆ ನೀಡಿ, ಬಂಡವಾಳ ಹೂಡಿಕೆ ಪ್ರತ್ಯೇಕವಾಗಿ ಮಾಡಬೇಕು. ಹಣ ಪಾವತಿ ಬಾಕಿ ಉಳಿಸಿಕೊಳ್ಳಬಾರದು," ಎಂದು ಸೂಚಿಸಿರುವುದಾಗಿ ತಿಳಿಸಿದರು.

 

 
ಮಳೆಯಿಂದಾಗಿ 21 ಜನ ಸಾವನ್ನಪ್ಪಿದ್ದಾರೆ; ಪರಿಹಾರ ಭರವಸೆ
"ಅಕ್ಟೋಬರ್ 1ರಿಂದ ಈವರೆಗೂ ಮಳೆಯ ಕಾರಣದಿಂದ 21 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಗಳಿಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಮಳೆಯಿಂದ ಮನೆಗಳಿಗೆ ಹಾನಿಯಾದವರಿಗೂ ಪರಿಹಾರ ಕೊಡುತ್ತೇವೆ. ಬೆಳೆ ಹಾನಿಯಾದ ರೈತರಿಗೂ ಪರಿಹಾರ ನೀಡಲು ಸೂಚನೆ ಕೊಡಲಾಗಿದೆ," ಎಂದರು.
"ಅಕ್ಟೊಬರ್‌ನಲ್ಲಿ ನಿರಂತರವಾಗಿ ಮಳೆಯಾಗಿದ್ದು, 2- 3 ಜಿಲ್ಲೆಗಳನ್ನು ಬಿಟ್ಟರೆ ಶೇ.30ರಿಂದ 50ರಷ್ಟು ಹೆಚ್ಚುವರಿ ಮಳೆಯಾಗಿದೆ. ಜೂನ್‌ನಿಂದ ಇಲ್ಲಿಯವರೆಗೂ 4,71,000 ಹೆಕ್ಟೇರ್ ಬೆಲೆ ಹಾನಿಯಾಗಿದ್ದು, 105 ಕೋಟಿ ರೂ.ಗಳ ಪರಿಹಾರವನ್ನು 1.17 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 738 ಕೋಟಿ ರೂ.ಗಳು ಲಭ್ಯವಿದೆ," ಎಂದು ಸಿಎಂ ಮಾಹಿತಿ ನೀಡಿದರು.
"ಅಕ್ಟೊಬರ್ 1ರಿಂದ 12ರೊಳಗೆ ಮರಣ ಹೊಂದಿದ 21 ಜನರಿಗೆ ಕೂಡಲೇ ಪರಿಹಾರ ನೀಡಲು ಸೂಚನೆ ನೀಡಲಾಗಿದ್ದು, ಹಾಗೂ ಮಳೆಯಿಂದ ಹಾನಿಗೊಳಗಾದವರಿಗೆ 10,000 ರೂ.ಗಳ ಎಕ್ಸ್ ಗ್ರೇಶಿಯಾ ಮೊತ್ತವನ್ನು ನೀಡಲು ಸೂಚಿಸಲಾಗಿದೆ. ಭಾಗಶಃ ಹಾನಿಗೊಳಗಾದ 2,500 ಮನೆಗಳಿಗೆ ಹಾಗೂ ಬೆಳೆ ಹಾನಿಗೂ ಕಳೆದ ವರ್ಷದಂತೆ ಎನ್‌ಡಿಆರ್‌ಎಫ್ ನಿಯಮಾವಳಿಗಳಂತೆ ಪರಿಹಾರ ನೀಡಲು ಸೂಚಿಸಲಾಗಿದೆ," ಎಂದು ಹೇಳಿದರು.
"2300 ವಿದ್ಯುತ್ ಕಂಬಗಳು ಬಿದ್ದಿದ್ದು, ರಸ್ತೆ, ಸೇತುವೆ, ಶಾಲಾ ಕಟ್ಟಡಗಳ ಹಾನಿಯನ್ನು ಮೌಲ್ಯಮಾಪನ ಮಾಡಿ ಪರಿಹಾರ ನೀಡಲು ಹಣ ಬಿಡುಗಡೆ ಸೂಚಿಸಲಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ಬಳಿಕ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಎಸ್​ಡಿಆರ್​ಎಫ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮಳೆಯಿಂದಾದ ಹಾನಿ, ಬೆಳೆ ಹಾನಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ್, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪ್ರಸಾದ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಭಾಗಿಯಾಗಿದ್ದರು.

Sunday, October 10, 2021

ನವರಾತ್ರಿಯಂದು ಚಮತ್ಕಾರ ಮಾಡುತ್ತೆ ಈ ʼಹೂʼ

  

ನವರಾತ್ರಿ ಹಬ್ಬ. ಸಮೀಪಿಸುತ್ತಿದೆ. ಸುಖ-ಸಂಪತ್ತಿಗಾಗಿ ಭಕ್ತರು ತಾಯಿ ದುರ್ಗೆಯ ಆರಾಧನೆಯಲ್ಲಿ ನಿರತರಾಗಿದ್ದಾರೆ. ತಂತ್ರ ಶಾಸ್ತ್ರಗಳ ಪ್ರಕಾರ ನವರಾತ್ರಿಯಂದು ಮನೆಗೆ ತರುವ ಕೆಲವೊಂದು ವಸ್ತುಗಳು ಶುಭಕರವಾಗಿದ್ದು, ಮನೆಯಲ್ಲಿ ಸದಾ ಶ್ರೀಮಂತಿಕೆ, ಸುಖ, ಸಂತೋಷ ನೆಲೆಸಿರುತ್ತದೆ.
ಶಂಖಪುಷ್ಪ : ಇದು ಬಹಳ ಕಲ್ಯಾಣಕಾರಿ ಪುಷ್ಪವಾಗಿದೆ. ಇದು ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಕುಟುಂಬಸ್ಥರ ನಡುವೆ ಸಾಮರಸ್ಯ ಬೆಳೆಸುತ್ತದೆ. ನವರಾತ್ರಿಯಂದು ಶಂಖಪುಷ್ಪವನ್ನು ಮನೆಗೆ ತಂದು ಬೆಳ್ಳಿ ಪೆಟ್ಟಿಗೆಯಲ್ಲಿಟ್ಟು ಪೂಜಾ ಸ್ಥಳದಲ್ಲಿ ಸ್ಥಾಪನೆ ಮಾಡಿ ಪೂಜೆ ಮಾಡಿ. ಇದು ವ್ಯಾಪಾರಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ವೃದ್ಧಿಯಾಗಲಿದೆ.
ಬಾಳೆ ಗಿಡ : ಬಾಳೆ ಗಿಡ ಸುಖ-ಸಂತೋಷ, ಸಮೃದ್ಧಿಯ ಸಂಕೇತ. ನಿಮ್ಮ ಮನೆಯಲ್ಲಿ ಬಾಳೆ ಸಸಿಯಿಲ್ಲವಾದ್ರೆ ನವರಾತ್ರಿ ಸಂದರ್ಭದಲ್ಲಿ ಬಾಳೆ ಸಸಿ ತಂದು ಬೆಳೆಸಿ. ಧೂಮ-ದೀಪಗಳಿಂದ ಇದನ್ನು ಪೂಜೆ ಮಾಡಿ.
ಪಾರಿಜಾತ ಎಲೆ : ನವರಾತ್ರಿಯಂದು ಪಾರಿಜಾತ ಎಲೆಯನ್ನು ತಂದು ಕೆಂಪು ಬಟ್ಟೆಯಲ್ಲಿ ಸುತ್ತಿಡಿ. ಪೂಜೆ ಮಾಡುವ ಸ್ಥಳದಲ್ಲಿಟ್ಟು ಪೂಜೆ ಮಾಡಿ. ಇದು ಮನೆಯ ಶಾಂತಿ, ಸಂತೋಷವನ್ನು ವೃದ್ಧಿ ಮಾಡುತ್ತದೆ.
ಆಲದ ಎಲೆ : ನವರಾತ್ರಿ ದಿನ ಆಲದ ಮರದ ಎಲೆಯನ್ನು ತಂದು ಮನೆಯಲ್ಲಿಡಿ. ಇದ್ರ ಮೇಲೆ ಅರಿಶಿನ ಅಥವಾ ಕುಂಕುಮದಿಂದ ಸ್ವಸ್ಥಿಕವನ್ನು ರಚಿಸಿ. ನಂತ್ರ ಪೂಜೆ ಮಾಡಿ.

(ಮಾಹಿತಿ ಕೃಪೆ ಕನ್ನಡದುನಿಯಾ)

 

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ವಿಧಿವಶ

  

 ಬೆಂಗಳೂರು: ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ (72) ಅವರು ತಡರಾತ್ರಿ 2 ಗಂಟೆ ಸಮಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸತ್ಯಜಿತ್ ಅವರ​ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. 

ಆಸ್ಪತ್ರೆಗೆ ಸತ್ಯಜಿತ್ ದಾಖಲಿಸಿದ ದಿನ ಮಾಧ್ಯಮದವರ ಜತೆ ಮಾತನಾಡಿದ್ದ​ ಪುತ್ರ ಆಕಾಶ್, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು. ಇನ್ನು ಮೂಲಗಳ ಪ್ರಕಾರ, ಹಲವು ದಿನಗಳಿಂದ ಆರೋಗ್ಯ ಕೈಕೊಟ್ಟಿದ್ದರಿಂದ ಸತ್ಯಜಿತ್​ ಕುಟುಂಬಕ್ಕೆ ಆರ್ಥಿಕ ಸಂಕಷ್ಟವೂ ಎದುರಾಗಿತ್ತು ಎಂದು ತಿಳಿದುಬಂದಿದೆ.

ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಬಳಿಕ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಾಲಿನಲ್ಲಿ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಸಿನಿಮಾ ರಂಗದಿಂದ ಅವರಿಗೆ ಬೇಡಿಕೆ ಕಡಿಮೆ ಆಯಿತು. ಬಳಿಕ ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿಲ್ಲ. ಅಲ್ಲದೆ, ಮಗಳ ಮೇಲೆಯೂ ಸತ್ಯಜಿತ್​ ಅಸಮಾಧಾನವಾಗಿತ್ತು. ಕುಟುಂಬ ಮತ್ತು ಆರೋಗ್ಯ ಸಮಸ್ಯೆಗಳಿಂದ ಸತ್ಯಜಿತ್​ ತುಂಬಾ ಕೊರಗಿ ಹೋಗಿದ್ದರು.
ಇನ್ನು 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್​ ಹಾಫ್​ ಚಿತ್ರದ ಸತ್ಯಜಿತ್‌ ಅಭಿನಯಿಸಿದ್ದರು. ಈ‌ ಸಿನಿಮಾ ಬಳಿಕ ಯಾವುದೇ ಸಿನಿಮಾಗಳಲ್ಲೂ ಅಭಿನಯಿಸಿಲ್ಲ. ಕನ್ನಡದಲ್ಲಿ ಸುಮಾರು 600 ಚಿತ್ರಗಳಲ್ಲಿ ಸತ್ಯಜಿತ್​ ನಟಿಸಿದ್ದಾರೆ. ವಿಲನ್​ ಮತ್ತು ಪೋಷಕ ಪಾತ್ರ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಕಾಮಿಡಿ ಟೈಮಿಂಗ್​ ಜನರನ್ನು ನಗಿಸಿದ್ದಾರೆ.
ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್ ಸೇರಿದಂತೆ ಸಾಕಷ್ಟು ಕಲಾವಿದರ ಸಿನಿಮಾಗಳಲ್ಲಿ ಸತ್ಯಜಿತ್‌ ಖಳನಟ ಹಾಗು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

(ಮಾಹಿತಿ ಕೃಪೆ ವಿಜಯವಾಣಿ)

 

Fact Check: ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ 5 ಲಕ್ಷ ರೂ. ಸಹಾಯಧನ ನೀಡುತ್ತಿದ್ಯಾ? ಇಲ್ಲಿದೆ ವೈರಲ್‌ ಸುದ್ದಿಯ ಅಸಲಿಯತ್ತು

  

ನವದೆಹಲಿ: ಪಿಎಂ ಕಿಸಾನ್ (pM Kisan ) ಟ್ರಾಕ್ಟರ್ ಯೋಜನೆ ಹೆಸರಿನಲ್ಲಿ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ (social media) ಹರಿದಾಡುತ್ತಿದ್ದು ಕೆಲವು ಮಾಧ್ಯಮಗಳು ಕೂಡ ಈ ಬಗ್ಗೆ ಸುದ್ದಿಯನ್ನು ಪ್ರಸಾರ ಮಾಡಿದೆ. ವೈರಲ್‌ ಸುದ್ದಿಯಲ್ಲಿ (Viral news) ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ (PM Kisan Tractor Project) ಮೂಲಕ ರೈತರಿಗೆ 5 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ವೈರಲ್‌ ಆಗಿರುವ ಸುದ್ದಿಗೆ ಪಿಐಬಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಹೇಳಿರುವಪ್ರಕಾರ, ಕೇಂದ್ರ ಸರ್ಕಾರವು ಇನ್ನು ಮುಂದೆ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸುವುದಿಲ್ಲ. , ಈ ಯೋಜನೆಯ ಹೆಸರಿನಲ್ಲಿ ಮಾಡಿದ ಯಾವುದೇ ಹೇಳಿಕೆಗಳು ಸುಳ್ಳು ಅಂಥ ತಿಳಿಸಿದೆ. ಪಿಎಂಬಿ ಕಿಸಾನ್ ಟ್ರಾಕ್ಟರ್ ಯೋಜನೆ ಕುರಿತು ಅಂತರ್ಜಾಲದ ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ ಪಿಐಬಿ ಟ್ವೀಟ್ ಮಾಡಿದೆ. ಪಿಐಬಿ ಪ್ರಕಾರ, ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಂತಹ ಯಾವುದೇ ಯೋಜನೆ ಇಲ್ಲ, ಮತ್ತು ಸರ್ಕಾರವು ಅದನ್ನು ಜಾರಿಗೊಳಿಸುತ್ತಿಲ್ಲ ಅಂಥ ತಿಳಿಸಿದೆ. 

(ಮಾಹಿತಿ ಕೃಪೆ Kannada News Now)

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

 

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 10 ರಿಂದ 13 ರವರೆಗೂ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

(ಮಾಹಿತಿ ಕೃಪೆ ಕನ್ನಡದುನಿಯಾ)

 

 

Thursday, October 7, 2021

ಹೊಸಪೇಟೆ: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ ಸಂಜೆ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಕೊಂಡನಾಯಕನಹಳ್ಳಿಯ ಉದಯ್ ಇಂಗಳಗಿ (25) ಮೃತರು.  'ಉದಯ್‌, ಪಾಪಿನಾಯಕನಹಳ್ಳಿಯಿಂದ ಇಂಗಳಗಿಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಅತಿ ವೇಗದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವವಾಗಿ ಉದಯ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಗಾದಿಗನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಪ್ರಜಾವಾಣಿ)

 

Tuesday, September 21, 2021

ದಸರಾ ಉದ್ಘಾಟನೆ: ಸಾಲುಮರದ ತಿಮ್ಮಕ್ಕನ ಆಯ್ಕೆಗೆ ಸಾಮಾಜಿಕ ಜಾಲತಾಣ ಅಭಿಯಾನ

 

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ಏತನ್ಮಧ್ಯೆ ಈ ಬಾರಿಯ ದಸರಾ ಉದ್ಘಾಟಕರಾಗಿ ಪರಿಸರವಾದಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರನ್ನು ಆಯ್ಕೆ ಮಾಡುವ ಕುರಿತ ಸಾಮಾಜಿಕ ಜಾಲತಾಣ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಳೆದ ವರ್ಷ ಮೈಸೂರು ದಸರಾವನ್ನು ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ.ಸಿ.ಎನ್.ಮಂಜುನಾಥ್ ಅವರು ನೆರವೇರಿಸಿದ್ದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಡಾ.ಮಂಜುನಾಥ್ ಅವರ ಆಯ್ಕೆ ನಡೆದಿತ್ತು. ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಉದ್ಘಾಟಕರ ನೇಮಕದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಲುಮರದ ತಿಮ್ಮಕ್ಕ ಅವರನ್ನು ಈ ಬಾರಿ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದರೆ ಹೇಗೆ ಎಂಬ ಅಭಿಯಾನಕ್ಕೆ ಸಾವಿರಾರು ಮಂದಿ ಬೆಂಬಲಿಸಿ ಕಮೆಂಟ್ ಮಾಡಿದ್ದು, ಅದರಲ್ಲಿ ಆಯ್ದ ಕೆಲವು ಕಮೆಂಟ್ ಗಳು ಇಲ್ಲಿವೆ.
"ಮರಗಳನ್ನು ಹೆತ್ತ ಮಕ್ಕಳಂತೆ ಕಂಡ ಮಹಾತಾಯಿ ನಮ್ಮ ಸಾಲುಮರದ ತಿಮ್ಮಕ್ಕನವ್ರು. ಇವರು ನಮ್ಮ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ರೆ. ಅದರ ಘಟತೆ ಇನ್ನೂ ಇಮ್ಮಡಿಯಾಗುತ್ತೆ. ಅರ್ಹ ವ್ಯಕ್ತಿ" ಎಂಬುದಾಗಿ ರಾಜಶ್ರೀ ಢವಳೆ ಎಂಬವರು ಫೇಸ್ ಬುಕ್ ಕಮೆಂಟ್ ನಲ್ಲಿ ತಿಳಿಸಿದ್ದಾರೆ.
'ಅರ್ಹ ಮತ್ತು ಸೂಕ್ತ ವ್ಯಕ್ತಿ. ದಸರಾ ಹಬ್ಬಕ್ಕೂ ಮೆರಗು" ಎಂದು ಮತ್ತೊಬ್ಬ ಓದುಗರಾದ ಶಿವಕುಮಾರ್ ದೊಡ್ಮನಿ ತಿಳಿಸಿದ್ದಾರೆ. ಪರಿಸರ ಬಗ್ಗೆ ಅಪಾರ ಗೌರವವಿದೆ. ಹಾಗೂ ಅವರ ಕೊಡುಗೆ ಕರ್ನಾಟಕಕ್ಕೆ ಅಪಾರ. ನಿಜವಾದ ದೇವರು ಅವರಿಂದ ಉದ್ಘಾಟನೆ ಮಾಡಿ.ನಾಡಪ್ರೇಮ, ದೇಶಪ್ರೇಮ"ಕ್ಕೆ ಇವರೇ ಸಾಟಿ" ಎಂದು ಆನಂದ್ ಎಚ್ ಆರ್ ಎಂಬ ಓದುಗ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವಕ್ಕೆ ಅಕ್ಟೋಬರ್ 7ರಂದು ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತವಾಗಿ ಚಾಲನೆ ಸಿಗಲಿದೆ. ಅಕ್ಟೋಬರ್ 15ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರವರೆಗೆ ನಂದಿಧ್ವಜ ಪೂಜೆ ನಡಯಲಿದೆ. 5ರಿಂದ 5.30ರೊಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.
(ಮಾಹಿತಿ ಕೃಪೆ ಉದಯವಾಣಿ)

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

 

ಸಿಂದಗಿ: ಶಾಲೆ ಮಂಜೂರಾಗಿ 11 ವಸಂತಗಳನ್ನು ಕಂಡಿದೆ. 2016ರಲ್ಲಿ ಸುಸಜ್ಜಿತವಾದ ಕಟ್ಟದಹೊಂದಿದೆ. ವಿಶಾಲವಾದ ಆಟದ ಮೈದಾನವಿದೆ ಆದರೆ ಈ ಶಾಲೆಗೆ ಹೋಗುವ ರಸ್ತೆ ಸುಧಾರಣೆಯಾಗದೇ ಕೆಸರು ಗದ್ದೆಯಾಗಿದೆ. ಮಾರ್ಗ ಮಧ್ಯ ಇರುವ ತಗ್ಗು ಪ್ರದೇಶದಲ್ಲಿ ರಾಡಿ ನೀರು ನಿಲ್ಲುತ್ತದೆ. ಮಳೆಗಾಲದಲ್ಲಂತೂ ಹೇಳ ತೀರದ ಪೇಚಾಟ ವಿದ್ಯಾರ್ಥಿಗಳದ್ದು.
ಪಟ್ಟಣದಲ್ಲಿನ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಹೋಗುವ ರಸ್ತೆಯ ದುಸ್ಥಿಯಾಗಿದೆ. ಮಳೆಗಾಲದಲ್ಲಿ ಆದರ್ಶ ವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳ ಪೇಚಾಟ ಕಂಡು ವಿದ್ಯಾಲಯದ ಹತ್ತಿರ ಇರುವ ಗೌಡರು ತಮ್ಮ ಸ್ವಂತ ಖರ್ಚಿನಿಂದ ಎರಡು ಸಲ ಮುರುಮು ಹಾಕಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ತಪ್ಪದ್ದರೂ ಮಳೆಗಾಲದಲ್ಲಿ ಪೇಚಾಟ ತಪ್ಪಿದ್ದಲ್ಲ.
ಪುರಸಭೆಯ ಕೆಲ ಸದಸ್ಯರಿಗೆ ಸಮಸ್ಯೆ ಕುರಿತು ಹೇಳಿದಾಗ ಪುರಸಭೆಯಲ್ಲಿ ಹಣವಿಲ್ಲ. ಯಾರಿದಂದಲಾದರು ಸಾಲ ಕೊಡಿಸಿ ನಾನು ಈ ವಾರ್ಡಿನ ಸದಸ್ಯನಲ್ಲದಿದ್ದರೂ ನಾನು ಈ ರಸ್ತೆ ಕೆಲಸ ಮಾಡುತ್ತೇನೆ. ಬಿಲ್ ಬಂದ ಮೇಲೆ ನಾನು ಅವರಿಗೆ ಹಣ ನೀಡುತ್ತೇನೆ ಎಂದು ಹೆಸರು ಹೇಳಲು ಇಚ್ಚಿಸದ ಪುರಸಭೆ ಹಾಲಿ ಸದಸ್ಯ ನೀಡುವ ಉತ್ತರವಾಗಿದೆ.

ಸರಕಾರಿ ಆದರ್ಶ ವಿದ್ಯಾಲಯದಲ್ಲಿ 6 ರಿಂದ 10ನೇ ವರ್ಗದವರೆಗೆ 400 ವಿದ್ಯಾರ್ಥಿಗಳು ಕಲಿಯುತ್ತಾರೆ. ಇವರೆಲ್ಲರೂ ಶಾಲೆಗೆ ಬರಲು ಒಂದೇ ಮಾರ್ಗವಿದೆ. ಅದು ಸಂಪೂರ್ಣ ತಗ್ಗುಗಳಿಂದ ಕೂಡಿ ಹಾಳಾಗಿದೆ.
ಸ್ಥಳಿಯ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಕಲಿಯುತ್ತಾರೆ. ಅವರು ವಿದ್ಯಾಲಯಕ್ಕೆ ಹೋಗಬೇಕಾಗದಲ್ಲಿ ಕೆಸರು ತುಂಬಿದ ರಸ್ತೆಯೊಂದೇ ಮಾರ್ಗವಾಗಿದೆ. ಮಳೆಗಾಳದಲ್ಲಿ ಕೆಸರು ರಸ್ತೆಯಲ್ಲಿ ಶಾಲೆಗೆ ಹೋಗುವುದರಿಂದ ನಿತ್ಯ ಸಮವಸ್ತ್ರಗಳು ಕೆಸರಾಗುತ್ತವೆ. ಇನ್ನಾದರು ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ದುರಸ್ಥಿಗೆ ಮುಂದಾಗಬೇಕು ಎಂದು ಪಾಲಕರ ಮನವಿಯಾಗಿದೆ.
ರಸ್ತೆ ದುರಸ್ತಿಗೆ ಅನೇಕ ಬಾರಿ ಸಂಬಂಧಿಸಿದವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಶಾಲೆಯವರು ಹೇಳುತ್ತಾರೆ. ಆದರೆ ನಿತ್ಯ ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ನಮಗೆ ಎದುರಾಗಿದೆ ಎಂದು ಸರಕಾರಿ ಆದರ್ಶ ವಿದ್ಯಾರ್ಥಿಗಳ ಅಳಲಾಗಿದೆ. ಸ್ವಲ್ಪ ಮಳೆ ಬಂದರಾಯಿತು ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ನರಕಯಾತೆ ಪಡೆಯುವಂತಾಗಿದೆ. ಅಲ್ಲದೇ ಪ್ರತಿ ದಿನ ಸಮವಸ್ತ್ರ ರಾಡಿಯಾಗುತ್ತವೆ ಅವುಗಳನ್ನು ತೊಳೆದು ಸಾಕಾಗಿದೆ ಎಂದು ವಿದ್ಯಾರ್ಥಿಗಳ ತಾಯಂದಿರ ಮನದಾಳದ ಮಾತಾಗಿದೆ.

ರಸ್ತೆ ಸಂಪೂರ್ಣ ತೆಗ್ಗುಗಳಿಂದ ಕೂಡಿದೆ. ಮಳೆ ಬಂತೆಂದರೆ ತಗ್ಗುಗಳಲ್ಲಿ ನೀರು ನಿಲ್ಲುತ್ತವೆ. ಆಗ ರಸ್ತೆಯಾವುದೋ ಗುಂಡಿ ಯಾವುದೋ ಗೊತ್ತಾಗುವುದಿಲ್ಲ. ಮಕ್ಕಳಿಗೆ ಬೈಕ್ ಮೇಲೆ ಶಾಲೆಗೆ ಬಿಡುವ ಸಂದರ್ಭದಲ್ಲಿ ಸಾಕಷ್ಟು ಅಪಘಾತಗಳಾಗಿವೆ. ನಮಗೂ, ಮಕ್ಕಳಿಗೂ ಗಾಯಗಳಾಗಿವೆ. ನಮ್ಮ ಕಷ್ಟ ಯಾರಿಗೆ ಹೇಳಬೇಕು.
ಸ್ಥಳಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಲ್ಲದೇ ರಸ್ತೆ ಮಳೆಗಾಲದಲ್ಲಿ ರಸ್ತೆಯ ಗುಂಡಿಗಳಲ್ಲಿ ನೀರು ನಿಲ್ಲುತ್ತದೆ. ಇದರಿಂದ ಅಲ್ಲಿ ಕೊಳಚೆ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ತಾಣವಾಗಿ ಪರಿವರ್ತನೆಯಾಗುತ್ತದೆ. ಶಾಲೆಯ ಸುತ್ತಮುತ್ತಲಿನ ವಾತಾವರಣ ಆರೋಗ್ಯಕರವಾಗಿರಬೇಕು. ಆದ್ದರಿಂದ ಸಂಬಂಧಿಸಿದ ಇಲಾಖೆ ಶಾಲೆಯ ರಸ್ತೆ ದುರಸ್ಥಿ ಮಾಡಬೇಕು.
-ಡಾ.ಮಹೇಶ ಹಿರೇಮಠ, ವೈಧ್ಯರು, ಸಿಂದಗಿ.

ಮಳೆಗಾಲದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರಬೇಕಾದರೆ ನರಕಯಾತನೆ ಪಡುತ್ತಾರೆ. ಈ ರಸ್ತೆ ದುರಸ್ಥಿ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಮತ್ತು ಶಾಲೆಯಿಂದ ಪುರಸಭೆಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರು ರಸ್ತೆ ದುರಸ್ಥಿಗೆ ಪುರಸಭೆ ಆಢಳಿತ ಮುಂದಾಗಬೇಕು.
-ರಮೇಶ ಚಟ್ಟರಕಿ, ಪ್ರಭಾರಿ ಮುಖ್ಯೋಧ್ಯಾಪಕ, ಸರಕಾರಿ ಆದರ್ಶ ವಿದ್ಯಾಲಯ, ಸಿಂದಗಿ.
ರಸ್ತೆ ದುರಸ್ತಿಗೆ ಅನೇಕ ಬಾರಿ ಸಂಬಂಧಿಸಿದವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಆದರೆ ನಿತ್ಯ ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ನಮ್ಮ ಶಾಳೆಯ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೆಸರಿನಿಂದ ಕೂಡಿದ ರಸ್ತೆಯಲ್ಲಿ ಶಾಲೆಗೆ ಹೋದರೆ ಸಾಕು ಸಮವಸ್ತ್ರಗಳು ರಾಡಿಮಯವಾಗುತ್ತವೆ. ಪಾಲಕರು ಸಾಕಷ್ಟು ಬಾರಿ ತಮ್ಮ ಸಂಕಷ್ಟ ತೊಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಂಕಷ್ಟ ಅರಿತು ಇನ್ನಾದರೂ ರಸ್ತೆ ದುರಸ್ಥಿ ಮಾಡಲು ಪುರಸಭೆ ಮುಂದಾಗಬೇಕು.
-ಎಸ್.ಎಸ್. ಕುಂಬಾರ, ಅಧ್ಯಕ್ಷರು, ಎಸ್‌ಡಿಎಂಸಿ, ಸರಕಾರಿ ಆದರ್ಶ ವಿದ್ಯಾಲಯ ಸಿಂದಗಿ.

– ರಮೇಶ ಪೂಜಾರ

(ಮಾಹಿತಿ ಕೃಪೆ)

(ಮಾಹಿತಿ ಕೃಪೆ ಉದಯವಾಣಿ)

Sunday, September 12, 2021

Sai Dharam Tej Health Update : ತೆಲುಗು ನಟ ಸಾಯಿಧರ್ಮ ತೇಜ್ ಆರೋಗ್ಯದಲ್ಲಿ ಚೇತರಿಕೆ

 

ಹೈದರಾಬಾದ್ : ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ನಟ ಸಾಯಿ ಧರ್ಮ ತೇಜ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸಾಯಿಧರ್ಮ ತೇಜ್ ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಅಪೊಲೊ ಆಸ್ಪತ್ರೆಯಿಂದ ಹೇಳಿಕೆ ನೀಡಲಾಗಿದೆ. ಈ ಸಮಯದಲ್ಲಿ, ಸಾಯಿ ಅವರ ಸ್ಥಿತಿ ಈಗಾಗಲೇ ಚೆನ್ನಾಗಿದೆ, ಆದರೆ ಅವರು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. ಸಾಯಿ ಧರ್ಮ ತೇಜ್ ನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಪ್ರಾಥಮಿಕ ತನಿಖೆಗಳ ಆಧಾರದ ಮೇಲೆ, ಮೆದುಳು, ಬೆನ್ನುಮೂಳೆ ಮತ್ತು ಪ್ರಮುಖ ಅಂಗಗಳಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಅವರ ಅಂಗಾಂಶಗಳು ಹಾನಿಗೊಳಗಾಗಿವೆ ಮತ್ತು ಕಾಲರ್ ಬೋನ್ ನಲ್ಲಿ ಮುರಿತಗಳಾಗಿವೆ. ಅವುಗಳನ್ನು ಈಗ ತಪಾಸಣೆಗಾಗಿ ಮಾತ್ರ ಐಸಿಯುನಲ್ಲಿ ಇಡಲಾಗುವುದು ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

(ಮಾಹಿತಿ ಕೃಪೆ Kannada News Now)


ಸೆ. 15ರ ತನಕ ಮಳೆ; ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

 

ಬೆಂಗಳೂರು, ಸೆಪ್ಟೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆಕಂಡು ಬಂದಿದೆ. ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈನಲ್ಲಿ ಶೇ 7ರಷ್ಟು, ಆಗಸ್ಟ್‌ನಲ್ಲಿ ಶೇ 24 ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
(ಮಾಹಿತಿ ಕೃಪೆ Oneindia)

ಬೆಳೆ ಸಂರಕ್ಷಣೆಗೆ ಹೊಸ ಉಪಕರಣ ಅಭಿವೃದ್ದಿ | ರೈತರಿಗೆ ನೆಮ್ಮದಿ

 



ಮಂಗನ ಚಿಕಿತ್ಸೆಗಾಗಿ ಯುವಕನ ಅಲೆದಾಟ

 

(ಮಾಹಿತಿ ಕೃಪೆ ವಿಜಯ ಕರ್ನಾಟಕ)

Saturday, September 11, 2021

ಇನ್ಮುಂದೆ ಈ ರಾಜ್ಯದ ಸರ್ಕಾರಿ ನೌಕರರು ಜೀನ್ಸ್-ಟೀ ಶರ್ಟ್ ಗಳನ್ನು ಧರಿಸುವಂತಿಲ್ಲ!

ನವದೆಹಲಿ : ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಉತ್ತರಾಖಂಡದ ಸರ್ಕಾರಿ ನೌಕರರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಟಿ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ವರದಿಯ ಪ್ರಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ ಧರಿಸುವಂತಹ ಅನೌಪಚಾರಿಕ ಡ್ರೆಸ್ಸಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲಾ ಅಧಿಕಾರಿಗಳು, ಉದ್ಯೋಗಿಗಳು ಕಚೇರಿಯಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಮತ್ತು ಉನ್ನತ ಅಧಿಕಾರಿಗಳೊಂದಿಗಿನ ಸಭೆಗಳಲ್ಲಿ ಜೀನ್ಸ್, ಟೀ ಶರ್ಟ್ ಧರಿಸಬಾರದು ಎಂದು ಅವರು ಹೇಳಿದರು. ಇದಲ್ಲದೆ, 'ಅನುಸರಣೆ ಮಾಡದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಅವರು ಎಚ್ಚರಿಸಿದ್ದಾರೆ.
ಕೆಲವು ಜಿಲ್ಲಾ ಮಟ್ಟದ ಉದ್ಯೋಗಿಗಳು ಮತ್ತು ಅಧಿಕಾರಿಗಳು ಡೆನಿಮ್ ಮತ್ತು ಟಿ-ಶರ್ಟ್ ಗಳನ್ನು ಹಾಕಿಕೊಂಡು ಸಭೆಗಳಿಗೆ ಹಾಜರಾಗುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಇದು ಸರ್ಕಾರಿ ನೌಕರನಿಗೆ ಯೋಗ್ಯವಾಗಿ ಕಾಣುವುದಿಲ್ಲ ಎಂದು ಕುಮಾರ್ ಹೇಳಿದ್ದಾರೆ.
(ಮಾಹಿತಿ ಕೃಪೆ Kannada News Now)