WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, March 4, 2021

ಆರೋಪ ಬಂದಾಗಲೇ ರಮೇಶ ರಾಜೀನಾಮೆ ಕೊಡಬೇಕಿತ್ತು: ಸತೀಶ ಜಾರಕಿಹೊಳಿ


 ಬೆಳಗಾವಿ: 'ಆರೋಪ ಕೇಳಿಬಂದ ಕೂಡಲೇ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಒಂದು ದಿನ ಕಾಯುವ ಅಗತ್ಯವಿರಲಿಲ್ಲ' ಎಂದು ಸಹೋದರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಗೋಕಾಕದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷ, ಆಡಳಿತ ಪಕ್ಷ ಹಾಗೂ ಜನರ ಆಗ್ರಹದಂತೆ ರಾಜೀನಾಮೆ ನೀಡಿದ್ದಾರೆ. ಈಗ
ನೈತಿಕತೆಯ ವಿಚಾರ ಮುಗಿದಿದೆ. ಇನ್ನೇನಿದ್ದರೂ ಕಾನೂನು ಹೋರಾಟವಷ್ಟೆ. ಆ ಸಿ.ಡಿ. ನಕಲಿಯೋ, ಅಸಲಿಯೋ ಎನ್ನುವುದನ್ನು ಪೊಲೀಸರು ತನಿಖೆ ಮಾಡಬೇಕು. ಸತ್ಯ ಬಯಲಿಗೆಳೆಯಬೇಕು' ಎಂದರು.

'ನಾವು ಸಹೋದರರಿರಬಹುದು. ಆದರೆ, ಪಕ್ಷ ಬೇರೆ. ಪಕ್ಷವೆಂದು ಬಂದಾಗ ನಮ್ಮ ಪಕ್ಷದ ಪರ ನಿಲ್ಲುತ್ತೇವೆ. ಎಲ್ಲದ್ದಕ್ಕೂ ಕುಟುಂಬ ಬೆರೆಸುವುದು ಸರಿಯಲ್ಲ' ಎಂದು ಹೇಳಿದರು.

'ರಮೇಶಗೆ ಅವರ ಪಕ್ಷದಲ್ಲೂ ಆಗದವರು ಇರುತ್ತಾರೆ. ಎಚ್ಚರಿಕೆಯಿಂದ ಇರಬೇಕು' ಎಂದು ಸಲಹೆ ನೀಡಿದರು.

(ಮಾಹಿತಿ ಕೃಪೆ ಪ್ರಜಾವಾಣಿ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ