WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, April 8, 2021

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರ ಸಾವು

 

ಪಾಂಡವಪುರ (ಮಂಡ್ಯ ಜಿಲ್ಲೆ): ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಹಾಗೂ ಮತ್ತೊಬ್ಬ ಬಾಲಕ ಮುಳುಗಿ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಬಳೇಹತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಹದೇವಪ್ಪ-ಭಾರತಿ ದಂಪತಿಯ ಪುತ್ರರಾದ ಕಾರ್ತಿಕ್‌ (10), ಚಂದನ್‌ (11) ಹಾಗೂ ಮಲ್ಲಿಕಾರ್ಜುನ್‌-ಸುಮಾ ದಂಪತಿಯ ಪುತ್ರ ರಿತೇಶ್‌ (8) ಮೃತಪಟ್ಟವರು. ಕಾರ್ತಿಕ್‌ ಹಾಗೂ ಚಂದನ್‌ ಪಾಂಡವಪುರದ ನಿರ್ಮಲಾ ಕಾನ್ವೆಂಟ್‌ ವಿದ್ಯಾರ್ಥಿಗಳಿದ್ದು ಕ್ರಮವಾಗಿ 5, 6ನೇ ತರಗತಿಯಲ್ಲಿ ಓದುತ್ತಿದ್ದರು. ರಿತೇಶ್‌ ಬಳೇಹತ್ತಿಗುಪ್ಪೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ.

ಶಾಲೆಗೆ ರಜೆ ಇರುವ ಕಾರಣ ಬಾಲಕರು ಗ್ರಾಮದ ಹೊರಹೊಲಯದಲ್ಲಿರುವ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದರು. ಹೊಂಡದಲ್ಲಿ ತುಂಬಿದ್ದ ಕೆಸರಿನಲ್ಲಿ ಸಿಲುಕಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಮಾಹಿತಿ ಕೃಪೆ ಪ್ರಜಾವಾಣಿ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ