WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, May 4, 2021

BIG BREAKING NEWS : ಚಾಮರಾಜನಗರ ಜಿಲ್ಲಾಸ್ಪತ್ರೆ ಬಳಿಕ ಕಲಬುರ್ಗಿಯಲ್ಲಿ ಆಕ್ಸಿಜನ್ ಸಿಗದೇ 4 ಸಾವು, 32 ರೋಗಿಗಳ ಪರದಾಟ

 

ಕಲಬುರ್ಗಿ : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ ನಿನ್ನೆ 24 ಕೊರೋನಾ ಸೋಂಕಿತರು ಸಾವನ್ನಪ್ಪಿದ ಪ್ರಕರಣ ಹಸಿಯಾಗಿರುವಾಗಲೇ, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಾಲ್ಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಸಿಗದೇ ನಾಲ್ವರು ಕೊರೋನಾ ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಅಲ್ಲದೇ 32 ಸೋಂಕಿತರು ಆಕ್ಸಿಜನ್ ಸಿಗದೇ ಪರದಾಡುತ್ತಿರೋದಾಗಿ ತಿಳಿದು ಬಂದಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಆಕ್ಸಿಜನ್ ಕೊರತೆ ಉಂಟಾಗಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ, ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ನಾಲ್ವರು ಸೋಂಕಿತರು ಸಾವನ್ನಪ್ಪಿರೋ ದುರ್ಘಟನೆ ಸಂಭವಿಸಿದೆ. ಮುಂಜಾನೆ 4 ಗಂಟೆಯಿಂದ ಆಕ್ಸಿಜನ್ ಖಾಲಿಯಾಗಿ ನಾಲ್ವರು ಸೋಂಕಿತರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಇನ್ನೂ ಕಲಬುರ್ಗಿಯಲ್ಲಿ ನಾಲ್ವರು ಸೋಂಕಿತರು ಆಕ್ಸಿಜನ್ ಸಿಗದೇ ಸಾವನ್ನಪ್ಪಿದ್ದರೇ, 32ಕ್ಕೂ ಹೆಚ್ಚು ಸೋಂಕಿತರು ಆಕ್ಸಿಜನ್ ಖಾಲಿಯಾಗಿದ್ದರಿಂದಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರೋದಾಗಿ ತಿಳಿದು ಬಂದಿದೆ.

(ಮಾಹಿತಿ ಕೃಪೆ Kannada News Now)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ