WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Monday, June 14, 2021

ಮದುವೆ ಮಾಡಲಿಲ್ಲ ಎಂದು ಕುಡಿದ ಅಮಲಿನಲ್ಲಿ ಟವರ್ ಏರಿದ ಯುವಕ

 


ಮರಿಯಮ್ಮನಹಳ್ಳಿ: ಪ್ರೀತಿಸಿದ ಯುವತಿಯ ಜೊತೆ ಮದುವೆ ಮಾಡಿಕೊಡಲು ವಿಳಂಬ ಮಾಡುತ್ತಿರುವುದಕ್ಕೆ ಬೇಸತ್ತ ಯುವಕನೊಬ್ಬ ಕುಡಿದ ಅಮಲಿನಲ್ಲಿ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನೆಡದಿದೆ.
ಸ್ಥಳೀಯ ಆರನೇ ವಾರ್ಡ್‌ ಯುವಕ ಚಿರಂಜೀವಿ ಗೋಸಂಗಿ (23) ಪಕ್ಕದ ಮನೆಯ ಯುವತಿ ಉಮಾ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಮದುವೆಗೆ ಮನೆಯವರು ಒಪ್ಪಿದ್ದಾರೆ. ಆದರೆ, ಲಾಕ್ ಡೌನ್‌ನಿಂದ ಮದುವೆಗೆ ವಿಳಂಬವಾಗುತ್ತಿದೆ. ಇದರಿಂದ ಬೇಸತ್ತ ಯುವಕ ಕುಡಿದ ಅಮಲಿನಲ್ಲಿ ಹಳೆಯ ವೀರಭದ್ರೇಶ್ವರ ಟಾಕೀಸ್ ಬಳಿಯ ಏರ್‌ಟೆಲ್ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಸ್ಥಳಕ್ಕೆ ಸಿಪಿಐ ವಸಂತ ವಿ ಅಸೋದೆ, ಅಪರಾಧ ವಿಭಾಗದ ಪಿಎಸ್‌ಐ ಬಿ. ಮೀನಾಕ್ಷಿ, ಸಿಬ್ಬಂದಿ ಮತ್ತು ಸ್ಥಳೀಯರು ಬಂದು ಯುವಕನ ಮನವೊಲಿಸಲು ಯತ್ನಿಸಿದ್ದಾರೆ. ಇನ್ನೊಂದೆಡೆ ಏಳು ಜನ ಯುವಕರ ತಂಡ ಮೊಬೈಲ್ ಟವರ್ ಏರಿ ಅಮಲಿನಲ್ಲಿದ್ದ ಯುವಕನನ್ನು ಕೆಳಗಿಳಿಸಿ ಕರೆತಂದಿದ್ದಾರೆ. ಬಳಿಕ ಯುವಕನನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಈ ವೇಳೆ ನೂರಾರು ಜನ ನೆರೆದಿದ್ದರು.
ಮೊಬೈಲ್ ಟವರ್ ಏರಿ ಅಮಲಿನಲ್ಲಿದ್ದ ಯುವಕನನ್ನು ಕೆಳಗಿಳಿಸಿ ಕರೆತಂದ ಪೊಲೀಸರು

(ಮಾಹಿತಿ ಕೃಪೆ ಪ್ರಜಾವಾಣಿ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ