WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, June 12, 2021

'ಸಿಎಂ ಯಡಿಯೂರಪ್ಪ' ರಾಜೀನಾಮೆ ವಿಚಾರದ ಕುರಿತು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದೇನು..?

 


ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಸಾಕಷ್ಟು ವಿಚಾರ ಚರ್ಚೆಯಾಗುತ್ತಿದೆ. ಇದೀಗ ಈ ಕುರಿತು ಡಿ ವಿ ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದು, ಮುಂದಿನ ಎರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂಬುದರಲ್ಲಿ ಯಾವುದೇ ಸಂಶಯ ಬೇಡವೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಹೇಳಿದ್ದು, ವರಿಷ್ಠರು ಚರ್ಚೆ ಮಾಡಿಯೇ ಈ ಮಾತನ್ನು ಹೇಳಿಸಿದ್ದಾರೆ. ಹೀಗಾಗಿ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.
ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಒಬ್ಬೊಬ್ಬ ಉಸ್ತುವಾರಿ ಇರುತ್ತಾರೆ. ಕೇಂದ್ರದ ವರಿಷ್ಠರು ನೀಡಿದ ಮಾಹಿತಿಯನ್ನು ರಾಜ್ಯಗಳಿಗೆ ಉಸ್ತುವಾರಿಗಳು ನೀಡುತ್ತಾರೆ. ಹಾಗಾಗಿಯೇ, ಉಸ್ತುವಾರಿ ಅರುಣ್ ಸಿಂಗ್ ಕೂಡ ಇರಲಿದ್ದಾರೆ ಎಂದರು. ಮುಂದಿನ ಎರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂಬುದರಲ್ಲಿ ಯಾವುದೇ ಸಂಶಯ ಬೇಡ, ಸುಖಾ ಸುಮ್ಮನೆ ಹೇಳಿಕೆ ನೀಡುವುದು ಬೇಡ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
(ಮಾಹಿತಿ ಕೃಪೆ Kannada News Now)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ