WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, February 20, 2021

Simple Marriage: ಸರಳ ವಿವಾಹವಾಗುವ ವಧೂ ವರರಿಗೆ ಸರ್ಕಾರದಿಂದ ₹ 50 ಸಾವಿರ ಸಹಾಯಧನ!

 

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ತಿಂಗಳಿಗೊಮ್ಮೆ ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಈ ವರ್ಷ ಮಾ.31, ಏ.25, ಮೇ 21, ಜೂ.27 ಹಾಗೂ ಜು.7ರಂದು ಸರಳ ಸಾಮೂಹಿಕ ವಿವಾಹವು ಬೆಳಗ್ಗಿನ ಅಭಿಜಿನ್‌ ಲಗ್ನ ಸುಮೂಹೂರ್ತದಲ್ಲಿ ಸಂಪ್ರದಾಯಗಳಿಗೆ ಅನುಗುಣವಾಗಿ ನೆರವೇರಲಿದೆ ಎಂದು ಶ್ರೀ ದೇವಳದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್‌ ಉಳ್ಳಾಲ್‌ ತಿಳಿಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿಯ ಮೇಲ್ಮಹಡಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಮೂಹಿಕ ವಿವಾಹ(Marriage)ವಾಗಲು ಬಯಸುವ ವಧು ವರರು ದೇವಳದ ಕಚೇರಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದುಕೊಳ್ಳಬಹುದು ಅಥವಾ 7795489588, 8762919833, 9448529828ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಧನ ಸಹಕಾರ: ಸರಳ ವಿವಾಹವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್(Shirt)‌, ಶಲ್ಯ, ಪೇಟ, ಬಾಸಿಂಗ ಇತ್ಯಾದಿಗಳಿಗೆ ರು.5 ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ, ಕಾಲುಂಗುರ ಇತ್ಯಾದಿಗಳಿಗೆ ರು.10 ಸಾವಿರ ನೀಡಲಾಗುವುದು. ರು. 40 ಸಾವಿರ ಮೌಲ್ಯದ ಅಂದಾಜು 8 ಗ್ರಾಂ ತೂಕದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು.ಈ ಮೂಲಕ ಕಂದಾಯ ಇಲಾಖೆಯಿಂದ ಆದರ್ಶ ವಿವಾಹ ಯೋಜನೆಯಡಿಯಲ್ಲಿ ರು.10 ಸಾವಿರದ ನಿಶ್ಚಿತ ಠೇವಣಿ ನೀಡಲಾಗುವುದು. ಅಲ್ಲದೆ ಸಾಮೂಹಿಕ ವಿವಾಹದಲ್ಲಿ ವಿವಾಹವಾಗುವ ಪರಿಶಿಷ್ಟಜಾತಿಯ ಜೋಡಿಗೆ ಸರಳ ವಿವಾಹ ಯೋಜನೆಯಡಿಯಲ್ಲಿ ರೂ.50 ಸಾವಿರ ಒದಗಿಸಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಾಲಯದಿಂದ ಮಾಡಲಾಗುವುದು ಎಂದು ಡಾ.ಯತೀಶ್‌ ಉಳ್ಳಾಲ್‌ ಹೇಳಿದರು.

(ಮಾಹಿತಿ ಕೃಪೆzee kannada)

ನಲ್ಲಾಪುರ ಗ್ರಾಮದ ಸಮುದಾಯ ಭವನ ಭೂಮಿ ಪೂಜಾ ಕಾರ್ಯಕ್ರಮ

 ನಲ್ಲಾಪುರ ಗ್ರಾಮದಲ್ಲಿ ಸಮುದಾಯ ಭವನ ಪೂಜಾ ಕಾರ್ಯಕ್ರಮವನ್ನು 19/02/2021 ಶುಕ್ರವಾರದಂದು ಅಲ್ಲಿನ ಎಲ್ಲಾ ಊರಿನ ಮುಖಂಡರು ಸೇರಿ ಪೂಜೆಯನ್ನು ನೆರವೇರಿಸಿದರು 







ಫೆ. 24ರಿಂದ ಸ್ಥಗಿತಗೊಳ್ಳಲಿದೆ ಗೂಗಲ್ ‌ನ ಈ ಸೇವೆ; ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ


 ಫೆಬ್ರವರಿ 24ರಿಂದ ಆಚೆಗೆ ತನ್ನ 'ಪ್ಲೇ ಮ್ಯೂಸಿಕ್' ಅಪ್ಲಿಕೇಶನ್ ‌ಅನ್ನು ಸ್ಥಗಿತಗೊಳಿಸುವುದಾಗಿ ಗೂಗಲ್ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ತಿಳಿಸುತ್ತಲೇ ಬಂದಿದೆ.

ಪ್ಲೇ ಮ್ಯೂಸಿಕ್ ಲೈಬ್ರರಿಯಲ್ಲಿ ಮಾಡಲಾದ ಅಪ್ಲೋಡ್‌ಗಳು, ಖರೀದಿಗಳು ಸೇರಿದಂತೆ ಎಲ್ಲಾ ದತ್ತಾಂಶಗಳೂ ಮುಂದಿನ ವಾರ ಅಳಿಸಿ ಹೋಗಲಿದ್ದು, ಇವುಗಳನ್ನು ಏನೇ ಮಾಡಿದರೂ ರಿಕವರ್‌ ಮಾಡಲು ಸಾಧ್ಯವಿಲ್ಲ.

ಡಿಸೆಂಬರ್‌ 2020ರಲ್ಲಿಯೇ ಪ್ಲೇ ಮ್ಯೂಸಿಕ್ ಕೆಲಸ ಮಾಡುವುದನ್ನು ನಿಲ್ಲಿಸಿತ್ತು. ಆದರೂ ಸಹ ತನ್ನ ಅಪ್ಲಿಕೇಶನ್‌ನಲ್ಲಿ ಅಪ್ಲೋಡ್ ಮಾಡಲಾದ ದತ್ತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಲು ಫೆಬ್ರವರಿ 24ರವರೆಗೂ ಗೂಗಲ್ ತನ್ನ ಬಳಕೆದಾರರಿಗೆ ಅವಕಾಶ ಮಾಡಿಕೊಟ್ಟಿತ್ತು.

ತನ್ನ ಮತ್ತೊಂದು ಹೊಸ ನೀತಿಯ ಪ್ರಕಾರ, ಎರಡು ವರ್ಷಗಳ ಮಟ್ಟಿಗೆ ನಿಷ್ಕ್ರಿಯವಾಗಿರುವ ಗ್ರಾಹಕರ ಖಾತೆಗಳನ್ನು ಡಿಲೀಟ್ ಮಾಡುವ ಕೆಲಸವನ್ನು ಗೂಗಲ್‌ ಜೂನ್ 1, 2021 ರಿಂದ ಮಾಡುವ ಸಾಧ್ಯತೆ ಇದೆ.

ಹೀಗಾಗಿ ಬಳಕೆದಾರರು ತಂತಮ್ಮ ಗೂಗಲ್‌ ಖಾತೆಗಳನ್ನು ಆಗಾಗ ಭೇಟಿ ಕೊಟ್ಟು ವೀಕ್ಷಿಸುತ್ತಿರುವುದು ಉತ್ತಮ.

ಮಾಹಿತಿ ಕೃಪೆ ಕನ್ನಡದುನಿಯಾ)




 

Friday, February 19, 2021

ಆಲಿಕಲ್ಲು ನೋಡಲು ಮುಗಿಬಿದ್ದ ಜನರು


ಕೃಷಿ ಡಿಪ್ಲೋಮಾ ಉತ್ತೀರ್ಣರಾದವರಿಗೆ ಉದ್ಯೋಗ ಭಾಗ್ಯ: ಸಚಿವ ಬಿ.ಸಿ ಪಾಟೀಲ್

ಬೀದರ್: ಕೃಷಿ ಇಲಾಖೆಯಲ್ಲಿ ಸೇವೆಗಾಗಿ ರಾಜ್ಯದಲ್ಲಿ 3 ಸಾವಿರ ಕೃಷಿ ಡಿಪ್ಲೋಮಾದಲ್ಲಿ ತೇರ್ಗಡೆಯಾಗಿರುವವರನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಫಸಲು ಬಿಮಾ ಯೋಜನೆಯಡಿ ಎರಡು ಗ್ರಾಮ ಪಂಚಾಯತಗೆ ಒಬ್ಬರಂತೆ ಈ ನೇಮಕಾತಿ ಮಾಡಿಕೊಳ್ಳಲಾಗುವುದು. ವರ್ಷದಲ್ಲಿ 10 ತಿಂಗಳು ಇವರನ್ನು ಸೇವೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ಡಿಪ್ಲೊಮಾ ವಿದ್ಯಾರ್ಥಿಗಳು ತಾಂತ್ರಿಕವಾಗಿ ಪರಿಣಿತರಾಗಿರುವ ಹಿನ್ನಲೆ ಅವರನ್ನು 3 ತಿಂಗಳು ಬೆಳೆ ಸಮೀಕ್ಷೆಗಾಗಿ ನಂತರ ಉಳಿದ 7 ತಿಂಗಳು ಕೃಷಿ ಇಲಾಖೆಯ ಸೇವೆಗೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ ಸಚಿವ ಪಾಟೀಲ, ಕೃಷಿ ಇಲಾಖೆಯಲ್ಲಿ ಶೇ. 55 ರಷ್ಟು ಹುದ್ದೆಗಳು ಖಾಲಿ ಇದ್ದು, ಇದರಿಂದ ಕೆಳ ಹಂತದಲ್ಲಿ ಇಲಾಖೆಯ ಕಾರ್ಯಕ್ರಮಗಳನ್ನು ಮುಟ್ಟಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್.ನಿಂದ ಎದುರಾಗಿರುವ ಆರ್ಥಿಕ ಸ್ಥಿತಿ ಸುಧಾರಣೆ ಬಳಿಕ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಕೃಷಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುವ ರೈತರ ಮಕ್ಕಳಿಗೆ ಈಗಿರುವ ಶೇ. 40ರಷ್ಟು ಮೀಸಲಾತಿಯನ್ನು ಶೇ. 50ಕ್ಕೆ ಹೆಚ್ಚಿಸಲು ಮತ್ತು ಕೃಷಿ ನೀರಾವರಿ ಪಂಪ್ ಸೆಟ್ಗಳಿಗೆ ಸಧ್ಯ ನೀಡಲಾಗುತ್ತಿರುವ ಸಬ್ಸಿಡಿ ಪ್ರಮಾಣವನ್ನು ಶೇ. 25 ರಿಂದ ಶೇ. 40ಕ್ಕೆ ಹೆಚ್ಚಿಸುವ ಚಿಂತನೆ ನಡೆದಿದ್ದು, ಬಜೆಟ್ ನಲ್ಲಿ ಘೋಷಿಸಲು ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ ಅಕಸ್ಮಿಕವಾಗಿ ಸಾವನ್ನಪ್ಪುವ ರೈತರ ಪರಿಹಾರ ಮೊತ್ತವನ್ನು 2 ರಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸುವುದು ಹಾಗೂ ಹುಲ್ಲಿನ ಬಣಮಗೆ ಬೆಂಕಿ ನಷ್ಟದ ಪರಿಹಾರ ಮೊತ್ತ ಹೆಚ್ಚಳ ಕುರಿತು ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

(ಮಾಹಿತಿ ಕೃಪೆ ಉದಯವಾಣಿ)

ರಾಜ್ಯ ವಿಧಾನಸಭೆ ಅಧಿವೇಶನ: ಬಜೆಟ್ ಮಂಡನೆ ದಿನಾಂಕ ನಿಗದಿ

ಬೆಂಗಳೂರು, ಫೆಬ್ರವರಿ 19: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವು ಮಾರ್ಚ್ 4 ರಿಂದ ನಡೆಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ರೂಪುರೇಷೆಯ ಬಗ್ಗೆ ಚರ್ಚೆ ನಡೆಸಲಾಯಿತು. ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾರ್ಚ್ ತಿಂಗಳ ಕೊನೆಯವರೆಗೂ ಅಧಿವೇಶನ ನಡೆಯಲಿದೆ. ಮಾರ್ಚ್ 4 ಮತ್ತು 5ರಂದು ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.           

      (ಮಾಹಿತಿ ಕೃಪೆ Oneindia)

ವಾಯುಭಾರ ಕುಸಿತ; ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ಕೆಲವೆಡೆ ಆಲಿಕಲ್ಲು ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕೇರಳದಿಂದ ಮಹಾರಾಷ್ಟ್ರದ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಗುರುವಾರ ರಾತ್ರಿ ತುಮಕೂರು, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಭದ್ರಾವತಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಾಪುರ ಸೇರಿದಂತೆ ರಾಜ್ಯಾದ್ಯಂತ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೇ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಹಾಗೂ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ಸಂಜೆಯ ನಂತರ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು.ಹಲವೆಡೆ ಜಿಟಿ ಜಿಟಿ ಮಳೆ ಆರಂಭವಾಗಿ ಕೆಲವು ನಿಮಿಷಗಳಲ್ಲಿ ಜೋರಾಗಿ‌ ಸುರಿಯಿತು. ರಸ್ತೆಗಳಲ್ಲಿ ನೀರು ಉಕ್ಕಿ ಹರಿಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು ವಾಹನಗಳು ನೀರಿನಲ್ಲೇ ಚಲಿಸುತ್ತಿದ್ದವು. ಏಕಾಏಕಿ ಮಳೆ ಸುರಿದಿದ್ದರಿಂದ ಕೆಲಸ ಮುಗಿಸಿ ಮನೆಗೆ ಹೊರಟಿದ್ದವರು ಪರದಾಡುವಂತಾಯಿತು.

ಕೊಡಗು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಶನಿವಾರಸಂತೆ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದಿದ್ದು, ಕಾಫಿ, ಹಸಿ ಮೆಣಸಿನ ಫಲಸು ಆಲಿಕಲ್ಲು ಹೊಡೆತಕ್ಕೆ ಸಂಪೂರ್ಣವಾಗಿ ನಾಶವಾಗಿದೆ.

(ಮಾಹಿತಿ ಕೃಪೆ ಕನ್ನಡ ಪ್ರಭ)

ವಿಜಯನಗರ (ಹೊಸಪೇಟೆ) ಇಂಗ್ಲಿಷ್‌ ಭಾಷೆಯಿಂದ ಭಾರತದಲ್ಲಿ ದೊಡ್ಡ ಬದಲಾವಣೆ: ಸಂಶೋಧನಾ ವಿದ್ಯಾರ್ಥಿ ಪ್ರೀತಿ

ವಿಜಯನಗರ (ಹೊಸಪೇಟೆ): 'ಡಚ್ಚರು, ಫ್ರೆಂಚರು, ಅರಬ್ಬರು, ತುರ್ಕರು ಸೇರಿದಂತೆ ಅನೇಕ ವಿದೇಶಿಯರು ದಾಳಿ ಮಾಡಿದ್ದರೂ ಬಹುತ್ವದ ಸಂಸ್ಕೃತಿ ಹೊಂದಿರುವ ಭಾರತದ ಮೇಲೆ ಹೆಚ್ಚಿನ ಪ್ರಭಾವವಾಗಲಿ, ಪರಿಣಾಮಗಳಾಗಿ ಆಗಲಿಲ್ಲ. ಆದರೆ, ಬ್ರಿಟಿಷರ ದಾಳಿಯಿಂದ ಭಾರತದ ಸಾಮಾಜಿಕ ಸಂರಚನೆ ಮೇಲೆ ಹಲವು ರೀತಿಯ ಪರಿಣಾಮಗಳಾಗಿವೆ' ಎಂದು ಸಂಶೋಧನಾ ವಿದ್ಯಾರ್ಥಿ ಎಸ್‌.ಕೆ. ಪ್ರೀತಿ ತಿಳಿಸಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಗುರುವಾರ ಏರ್ಪಡಿಸಿದ್ದ ದೇಸಿ ಮಾತು-2 ಕಾರ್ಯಕ್ರಮದಲ್ಲಿ ಮಾತನಾಡಿದರು.

'ವ್ಯಾಪಾರದ ಕಾರಣದಿಂದ ಭಾರತಕ್ಕೆ ಬಂದ ಬ್ರಿಟಿಷರು ನಂತರದಲ್ಲಿ ಧಾರ್ಮಿಕ ಪ್ರಚಾರದಲ್ಲಿ ತೊಡಗಿದರು. ತಮ್ಮ ಸಂಸ್ಕೃತಿಯನ್ನು ಭಾರತೀಯರ ಮೇಲೆ ಒತ್ತಾಯಪೂರ್ವಕವಾಗಿ ಹೇರತೊಡಗಿದರು. ಜಾತಿ ಪದ್ಧತಿಯ ಮೇಲೆ ನಿಂತಿದ್ದ ಭಾರತೀಯ ಸಮಾಜದಲ್ಲಿ ಬ್ರಿಟಿಷರ ಮೂಲಕವಾಗಿ ಬಂದ ಇಂಗ್ಲಿಷ್‌ ಭಾಷೆಯು ಪಾಶ್ಚಾತ್ಯರ ಅನೇಕ ಚಿಂತನೆಗಳನ್ನು ಪರಿಚಯಿಸಿಯಿತು. ಸಮಾಜದ ಎಲ್ಲಾ ವರ್ಗದವರಿಗೂ ಶಿಕ್ಷಣ ನೀಡಿತು' ಎಂದರು.

'ಬಹುಸಂಸ್ಕೃತಿ, ಬಹುಭಾಷಿಕ ಹಿನ್ನೆಲೆಯ ಭಾರತವನ್ನು ಇಂಗ್ಲಿಷ್‌ ಭಾಷೆಯ ಮೂಲಕವಾಗಿ ಭಾಷಿಕ ಯಜಮಾನಿಕೆಗೆ ಸ್ಥಾಪಿಸಿತು. ಹೀಗೆ ಪಾಶ್ಚಾತ್ಯ ಭಾಷೆಯೊಂದು ಭಾರತೀಯ ಸಮಾಜಕ್ಕೆ ಆಡಳಿತ ಭಾಷೆಯಾಗುವುದಷ್ಟೇ ಅಲ್ಲದೆ ಶಿಕ್ಷಣದ ಭಾಷೆಯಾಗಿ ಪ್ರಾತಿನಿಧ್ಯವನ್ನು ಪಡೆಯಿತು. ಇದರಿಂದ ಭಾರತೀಯ ಸಮಾಜದ ಶ್ರೇಣೀಕರಣ ವ್ಯವಸ್ಥೆಯಲ್ಲಿ ಬದಲಾವಣೆಗಳು ಆದವು' ಎಂದು ತಿಳಿಸಿದರು.

'ಭಾರತೀಯ ಸಮಾಜ ಅದನ್ನು ಒಪ್ಪಿಕೊಂಡಿತು, ಅಪ್ಪಿಕೊಂಡಿತು. ಸಮಾನ ಶಿಕ್ಷಣದ ತಳಪಾಯದಲ್ಲಿ ತಳವರ್ಗಗಳಿಗೆ ಬ್ರಿಟಿಷರು ನೀಡಿದ ಶಿಕ್ಷಣವು ಮೇಲ್ವರ್ಗದವರನ್ನು ಪ್ರತಿಭಟಿಸಲು, ಅವರ ಮೋಸ, ವಂಚನೆಗಳನ್ನು ಎದುರಿಸಿ ಕೇಳುವ ಧೈರ್ಯವನ್ನು ನೀಡಿದ್ದರಿಂದ ತಳಮಟ್ಟದ ಜನರಿಂದಲೂ ಅದು ಸ್ವೀಕಾರಕ್ಕೆ ಅರ್ಹವಾಯಿತು' ಎಂದು ವಿವರಿಸಿದರು.

'ಮೇಲ್ವರ್ಗದವರೂ ಇಂಗ್ಲಿಷ್‌ ಭಾಷೆಯನ್ನು ತಮ್ಮ ಸ್ಥಾನಮಾನಗಳನ್ನು ಹೆಚ್ಚಿನ ಮಟ್ಟದಲ್ಲಿ ಗುರುತಿಸಿಕೊಳ್ಳುವ ಪ್ರತಿಷ್ಠೆಯಾಗಿ ಸ್ವೀಕರಿಸಿದರು. ಸಂಸ್ಕೃತ ಭಾಷೆಯನ್ನು ಬಳಸುತ್ತಿದ್ದ ಬ್ರಾಹ್ಮಣರು ಸಹ ಹೆಚ್ಚಿನ ಮಟ್ಟದಲ್ಲಿ ಇಂಗ್ಲಿಷ್‌ ಭಾಷೆಯ ಮೇಲೆ ವ್ಯಾಮೋಹಗೊಂಡರು. ಕನ್ನಡ ಭಾಷೆಯ ಮಟ್ಟಿಗೆ ಹೇಳುವುದಾದರೆ ವಾಸ್ತವದಲ್ಲಿ ನೋಡಿದರೆ ಇಂದಿಗೂ ಸಹ ಮೇಲ್ವರ್ಗದವರು ಇಂಗ್ಲಿಷ್‌ ಭಾಷೆಯನ್ನು, ತಳವರ್ಗಗಳು ಕನ್ನಡ ಭಾಷೆಯನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ' ಎಂದರು.

ಅಧ್ಯಕ್ಷತೆ‌ ವಹಿಸಿದ್ದ ಸಂಶೋಧನಾ ವಿದ್ಯಾರ್ಥಿ ಎಚ್‌.ಕೆ. ಅಭಿಲಾಷ, 'ಕೇಂದ್ರ ಸರ್ಕಾರದ ಹಿಂದಿ ಹೇರಿಕೆ, ತ್ರಿಭಾಷಾ ಸೂತ್ರ ಇವುಗಳು ಭಾಷಿಕ ಯಜಮಾನಿಕೆಯಿಂದ ಬಂದಿವೆ' ಎಂದು ಹೇಳಿದರು.

ಸಂಶೋಧನಾ ವಿದ್ಯಾರ್ಥಿಗಳಾದ ಬಿಳೇನಿ ಸಿದ್ದು ಬಿರಾದಾರ,‌ ಸತೀಶ ಶಿವಪ್ಪಯ್ಯನಮಠ, ಲಚಮಪ್ಪ, ನಾಗೇಶ್ ಪೂಜಾರಿ, ಎಚ್‌.ಎಸ್‌. ಆನಂದಕುಮಾರ, ವಿ. ಪಂಪಾಪತಿ ಕಾರ್ಯಕ್ರಮ ನಡೆಸಿಕೊಟ್ಟರು.

(ಮಾಹಿತಿ ಕೃಪೆ ವಿಜಯವಾಣಿ)

ಸರ್ಕಾರಕ್ಕೆ ಮೀಸಲಾತಿಯದ್ದೇ ತಲೆಬಿಸಿ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: 'ಇತ್ತೀಚೆಗೆ ರಾಜ್ಯದಲ್ಲಿ ಎಲ್ಲ ಸಮುದಾಯದವರು ಗುರುಗಳು, ಸ್ವಾಮೀಜಿಗಳು ಏಕಾಏಕಿ ರಸ್ತೆಗಿಳಿದು ಹೋರಾಟ ಮಾಡುತ್ತಿರುವುದು ಇದೇ ಮೊದಲು. ಹಾಗಾಗಿ, ಮೀಸಲಾತಿ ವಿಚಾರ ಇದೀಗ ಸರ್ಕಾರಕ್ಕೆ ತಲೆಬಿಸಿಯಾಗಿ ಪರಿಣಮಿಸಿದೆ' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಮಡಿವಾಳ ಮಾಚಿದೇವರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

'ನಾನು ಈ ರೀತಿ ಎಂದಿಗೂ ನೋಡಿರಲಿಲ್ಲ. ಎಲ್ಲ ಸಮುದಾಯದವರ ಗುರುಗಳು, ಸ್ವಾಮೀಜಿಗಳು ರಸ್ತೆಗಿಳಿದು ಪಾದಯಾತ್ರೆ ಮಾಡುತ್ತಿರುವುದು ಸರ್ಕಾರಕ್ಕೆ ಸವಾಲಿನ ಪ್ರಶ್ನೆಯಾಗಿದೆ. ಆದರೆ, ರಾಜಕೀಯದ ತೀರ್ಮಾನಗಳನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ' ಎಂದು ಹೇಳಿದರು.

'ಯಾವ ನೆಲಗಟ್ಟಿನ ಮೇಲೆ ಮೀಸಲಾತಿಯನ್ನು ಕಲ್ಪಿಸಬೇಕು ಎಂಬುದರ ಕುರಿತು ಸಾಮಾಜಿಕ, ಆರ್ಥಿಕವಾಗಿ, ಶೈಕ್ಷಣಿಕ ಅವಕಾಶಗಳಿಂದ ವಂಚಿತರಾಗಿರುವವರನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಾನೂನು ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಮೀಸಲಾತಿಯನ್ನು ನೀಡಬೇಕಾಗುತ್ತದೆ' ಎಂದರು.

ಸುಪ್ರೀಂಕೋರ್ಟ್‌ ಮಾರ್ಗದರ್ಶನದ ಅನ್ವಯ ಎಲ್ಲ ಮೀಸಲಾತಿಯನ್ನು ಸೇರಿಸಿ ಶೇ. 50 ರಷ್ಟು ದಾಟುವ ಆಗಿಲ್ಲ. ಆದರೆ, ಕೇವಲ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ರಾಜಕೀಯ ಪ್ರೇರಿತವಾಗಿ ಮನಸೋ ಇಚ್ಛೆಯಿಂದ ಮೀಸಲಾತಿ ಜಾರಿಗೆ ತರಲಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಆದರೆ, ತಮಿಳುನಾಡಿನಲ್ಲಿ ಮಾತ್ರ ಶೇ 67ರಷ್ಟು ಮೀಸಲಾತಿ ಕೊಡಲಾಗಿದೆ' ಎಂದು ವಿವರಿಸಿದರು.

'ನಾನು ಮೀಸಲಾತಿ ಹೋರಾಟವನ್ನು ವಿರೋಧಿಸುವುದಿಲ್ಲ. ಜೊತೆಗೆ, ಮೀಸಲಾತಿ ಕುರಿತು ಸುಳ್ಳು ಭರವಸೆಯೂ ನೀಡುವುದಿಲ್ಲ. ವರದಿಯನ್ನು ತೆಗೆದುಕೊಂಡು ಯಾವ ಸಮುದಾಯಗಳಿಗೆ ನ್ಯಾಯಬದ್ಧ ಮೀಸಲಾತಿಯನ್ನು ಕಲ್ಪಸಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸುತ್ತದೆ' ಎಂದು ಹೇಳಿದರು.

2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ

ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, 'ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ ಸಹಿಸಿಕೊಳ್ಳೊಕೆ ಆಗುತ್ತಾ? ಅದಕ್ಕೆ ಇನ್ನೆರೆಡು ವರ್ಷದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರ್ತಿವಿ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೋಡ್ತಿವಿ. ಎಷ್ಟು ದುಡ್ಡು ಬೇಕಾದ್ರು ಖರ್ಚಾಗಲಿ. ಇದ್ರಲ್ಲಿ ಯಾವುದೇ ಅನುಮಾನ ಇಲ್ಲ. 100 ಪರ್ಸೆಂಟ್‌ ವಿ ವಿಲ್‌ ಕಮ್‌ ಬ್ಯಾಕ್‌' ಎಂದರು.       

(ಮಾಹಿತಿ ಕೃಪೆ Kannada News Now)         

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ

ರಾಮನಗರ: ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ.

ಸಚಿವರು‌ ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬಂಕ್ ನಲ್ಲಿ‌ ಪೆಟ್ರೋಲ್ ಹಾಕಿಸಿಕೊಂಡು ಹಿಂತಿರುಗುವ ಸಂದರ್ಭ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಆಯಿತು.

ಘಟನೆಯಲ್ಲಿ ಸಚಿವರು, ಅವರ ಕಾರು ಚಾಲಕ ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.

(ಮಾಹಿತಿ ಕೃಪೆ ಪ್ರಜಾವಾಣಿ)

Wednesday, February 17, 2021

ಈಕೆಗೆ ನೇಣು ಹಾಕಲು ಸಿದ್ಧವಾಗಿದೆ ಮಥುರಾ ಜೈಲು- ಸ್ವಾತಂತ್ರ್ಯಾನಂತರದ ಮೊದಲ ಗಲ್ಲುಶಿಕ್ಷೆಗೊಳಗಾಗುವ ಹೆಣ್ಣೀಕೆ!

ಮಥುರಾ: ಈ ಚಿತ್ರದಲ್ಲಿ ಕಾಣುತ್ತಿರುವ ಭಯಾನಕ ಕೊಲೆಪಾತಕಿಯ ಹೆಸರು ಶಬನಂ. ಸೆಷನ್ಸ್‌ ಕೋರ್ಟ್‌ನಿಂದ ಸುಪ್ರೀಂಕೋರ್ಟ್‌ವರೆಗೂ ಗಲ್ಲುಶಿಕ್ಷೆಯೇ ಈಕೆಗೆ ಗತಿಯಾಗಿದೆ. ಕೊನೆಯದಾಗಿ ರಾಷ್ಟ್ರಪತಿಗಳ ಕ್ಷಮಾದಾನ ಅರ್ಜಿಯೂ ತಿರಸ್ಕೃತಗೊಂಡಿರುವ ಕಾರಣ, ಇದೀಗ ನೇಣಿಗೆ ಕೊರಳು ನೀಡಲು ಸಿದ್ಧವಾಗಿದ್ದಾಳೆ ಈ ಕೊಲೆಗಾತಿ.

ಇವಳನ್ನು ನೇಣುಗಂಬಕ್ಕೆ ಏರಿಸಲು ಮಥುರಾ ಜೈಲು ಸಕಲ ಸಿದ್ಧತೆ ನಡೆಸಿದೆ. ಕುತೂಹಲದ ಸಂಗತಿ ಎಂದರೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಗಲ್ಲುಶಿಕ್ಷೆ ಅನುಭವಿಸುತ್ತಿರುವ ಮೊದಲ ಮಹಿಳೆ ಈಕೆ.

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲಿಗೇರಿದ್ದ ಅಪರಾಧಿಗಳನ್ನು ನೇಣಿಗೇರಿಸಿದ್ದ ಪವನ್ ಜಲ್ಲದ್ ಅವರೇ ಶಬನಮ್​ಳನ್ನೂ ನೇಣಿಗೇರಿಸಲಿದ್ದಾರೆ. ಆಕೆಯನ್ನು ನೇಣಿಗೇರಿಸುವ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ

ಆದರೆ ಶೀಘ್ರದಲ್ಲಿಯೇ ಡೆತ್‌ವಾರೆಂಟ್‌ ಜಾರಿಯಾಗಲಿರುವ ಕಾರಣದಿಂದ ಗಲ್ಲುಶಿಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಥುರಾ ಜೈಲಿನಲ್ಲಿ 150 ವರ್ಷಗಳ ಹಿಂದೆ ಮೊದಲ ಮಹಿಳಾ ನೇಣುಗಂಬದ ಕೊಠಡಿಯನ್ನು ನಿರ್ಮಿಸಲಾಗಿತ್ತು. ಆದರೆ, ಸ್ವಾತಂತ್ರ್ಯ ಸಿಕ್ಕ ಬಳಿಕ ಇದುವರೆಗೂ ಯಾವ ಮಹಿಳಾ ಕೈದಿಯೂ ಗಲ್ಲುಶಿಕ್ಷೆಗೆ ಒಳಗಾಗಿಲ್ಲ. ಈ ಮೂಲಕ ಈಕೆ ಪ್ರಥಮ ಕೈದಿ ಎನಿಸಲಿದ್ದಾಳೆ. ಈಕೆಯ ಜತೆ ಈಕೆಯ ಪ್ರೇಮಿ ಸಲೀಂ ಕೂಡ ಗಲ್ಲುಶಿಕ್ಷೆಗೆ ಒಳಗಾಗಲಿದ್ದಾನೆ.

ಅಷ್ಟಕ್ಕೂ ಯಾರೀ ಶಬನಂ?
ಉತ್ತರ ಪ್ರದೇಶದ ಅಮ್ರೋಹಾದ ಹಸನ್ಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಬವಾಂಖೇಡಿ ಎಂಬ ಗ್ರಾಮದ ಶಬನಂ ಮಾಡಿರುವ ಕೃತ್ಯ ಎಂದರೆ, ಏಳು ಮಂದಿಯನ್ನು ಕೊಚ್ಚಿ ಕೊಲೆ ಮಾಡಿದ್ದಾಳೆ! 2008ರ ಏಪ್ರಿಲ್‌ 14 ಮತ್ತು 15ರ ಮಧ್ಯರಾತ್ರಿ ನೆನಪಿಸಿಕೊಂಡರೆ ಗ್ರಾಮಸ್ಥರು ಇಂದಿಗೂ ಬೆಚ್ಚಿ ಬೀಳುತ್ತಾರೆ.
ತನ್ನದೇ ಕುಟುಂಬದ 7 ಜನರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಳು ಈಕೆ. ಅಷ್ಟಕ್ಕೂ ಇಂಥದ್ದೊಂದು ಕೃತ್ಯ ಎಸಗಲು ಕಾರಣ, ಈಕೆಯ ಲವ್‌ ಸ್ಟೋರಿ.

ಮೊದಲೇ ಸಲೀಂ ಎಂಬಾತನನ್ನು ಪ್ರೀತಿಸುತ್ತಿದ್ದ ಈಕೆಯ ಮದುವೆ ಬೇರೆಯವರ ಜತೆ ಆಗಿತ್ತು ಆದರೆ ಮದುವೆಯಾದ ಮೇಲೂ ಸಲೀಂನನ್ನು ಪ್ರೀತಿಸುತ್ತಿದ್ದ ಶಬನಮ್ ತನ್ನ ಪ್ರಿಯಕರನ ಜತೆ ಸೇರಿ ತನ್ನ ಗಂಡನ ಮನೆಯ 7 ಜನರನ್ನು ಕೊಚ್ಚಿ ಕೊಲೆ ಮಾಡಿದ್ದಳು. ಇದಕ್ಕೆ ಕಾರಣ, ಆಕೆಯ ಕುಟುಂಬದವರು ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರಿಂದ. ಕೊಲೆ ಮಾಡಿದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಶಬನಂ, ನಿರುದ್ಯೋಗಿ ಪ್ರೇಮಿ ಸಲೀಂ ಜತೆ ಸಂಚು ರೂಪಿಸಿ ಮನೆಯರಿಗೆ ಚಹಾದಲ್ಲಿ ಮತ್ತು ಬರಿಸುವ ಔಷಧ ಬೆರೆಸಿದ್ದಳು. ನಂತರ ಮನೆಗೆ ಬಂದ ಸಲೀಂ ಏಳು ಮಂದಿಯ ಕುತ್ತಿಗೆ ಸೀಳಿದ್ದ.

ಆದ್ದರಿಂದ ಈಕೆ ತಂದೆ ಮಾಸ್ಟರ್ ಶೌಕತ್, ತಾಯಿ ಹಶ್ಮಿ, ಸಹೋದರರಾದ ಅನೀಸ್ ಮತ್ತು ರಶೀದ್, ಅತ್ತಿಗೆ ಅಂಜುಮ್ ಮತ್ತು ಅವರ ಸಹೋದರಿ ರಬಿಯಾ ಹಾಗೂ ಸೋದರಳಿಯ ಅರ್ಶ್‌ನನ್ನು ಕೊಲೆ ಮಾಡಿದ್ದಳು. ಇದಕ್ಕೆ ಸಲೀಂ ಸಹಕರಿಸಿದ್ದ.

ಈ ಹಿನ್ನೆಲೆಯಲ್ಲಿ ಆಕೆಗೆ ಎಲ್ಲಾ ಕೋರ್ಟ್‌ಗಳೂ ಮರಣದಂಡನೆ ವಿಧಿಸಿದ್ದವು. ಸುಪ್ರೀಂಕೋರ್ಟ್‌ ಕೊನೆಗೆ ರಾಷ್ಟ್ರಪತಿ ಕ್ಷಮಾದಾನದ ವರೆಗೆ ಹೋದರೂ ಈಕೆಗೆ ಬಿಡುಗಡೆ ಸಿಗಲಿಲ್ಲ. ಮರಣದಂಡನೆಯೇ ಗತಿಯಾಯ್ತು. ಇದೀಗ ನೇಣುಗಂಬ ಸಿದ್ಧಗೊಂಡಿದ್ದು, ಈಕೆ ಮತ್ತು ಪ್ರೇಮಿಗಾಗಿ ಕಾದಿದೆ.

ಶಬನಂ, ಸಲೀಂಗೆ ಸಣ್ಣ ಮಗುವಿದೆ. ಇಬ್ಬರಿಗೂ ಗಲ್ಲುಶಿಕ್ಷೆಯಾದರೆ ಮಗು ಅನಾಥವಾಗುವುದು ಎಂದು ಪ್ರಕರಣದ ಅಮಿಕಸ್‌ ಕ್ಯೂರಿ ದುಷ್ಯಂತ್‌ ಪರಾಶರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ವಾದವನ್ನು ಕೋರ್ಟ್‌ ಮಾನ್ಯ ಮಾಡಲಿಲ್ಲ.

(ಮಾಹಿತಿ ಕೃಪೆ ವಿಜಯವಾಣಿ)

ಶ್ರಮಜೀವಿಗಳಿಗೆ ಬದುಕು-ಭರವಸೆ


Tuesday, February 16, 2021

ಬಿಪಿಎಲ್‌ ಕಾರ್ಡ್‌ ನಿಯಮಗಳಲ್ಲಿ ಬದಲಾವಣೆ ಇಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಬೆಂಗಳೂರು: ಬಿಪಿಎಲ್‌ ಕಾರ್ಡ್‌ ಪಡೆಯಲು ಈಗ ಜಾರಿಯಲ್ಲಿರುವ ನಿಯಮಾವಳಿಗಳನ್ನೇ ಮುಂದುವರಿಸಲಾಗುತ್ತದೆ. ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸ್ಪಷ್ಟಪಡಿಸಿದೆ.

ಮನೆಯಲ್ಲಿ ಬೈಕ್, ಟಿ.ವಿ. ರೆಫ್ರಿಜರೇಟರ್‌ ಮತ್ತು ಹೆಚ್ಚು ಭೂಮಿ ಹೊಂದಿದವರಿಗೆ ಬಿಪಿಎಲ್‌ ಕಾರ್ಡ್‌ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಬೆಳಗಾವಿಯಲ್ಲಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದ್ದಂತೆ 2016 ಮತ್ತು 2017 ರಲ್ಲಿ ಮಾಡಿದ ಆದೇಶವನ್ನೇ ಪಾಲಿಸಲಾಗುತ್ತದೆ. ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದಿದ್ದಾರೆ.

ಸಚಿವರು ಹೇಳಿದ್ದೇನು?

ಟಿ.ವಿ. ರೆಫ್ರಿಜರೇಟರ್‌, ಬೈಕ್‌, ಹೆಚ್ಚು ಜಮೀನು ಹೊಂದಿರುವವರು.

ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ₹1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಇರುವವರು ಬಿಪಿಎಲ್‌ ಕಾರ್ಡ್‌ ಹೊಂದುವಂತಿಲ್ಲ. ಅಂತಹವರು ಬಿಪಿಎಲ್ ಕಾರ್ಡ್‌ ಹೊಂದಿದ್ದರೆ ಕೂಡಲೇ ಅದನ್ನು ಮರಳಿಸಬೇಕು. ಇದಕ್ಕೆ ಮಾರ್ಚ್‌ 31 ಗಡುವು ನಿಗದಿ ಮಾಡಲಾಗಿದೆ ಎಂದು ಹೇಳಿದ್ದರು.

ಮುಂಬರುವ ದಿನಗಳಲ್ಲಿ ಸಮೀಕ್ಷೆ ನಡೆಸಿ ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿರುವವರನ್ನು ಪತ್ತೆ ಮಾಡಿ ರದ್ದು ಮಾಡುವುದಾಗಿ ಹೇಳಿದ್ದರು.

ಶಾಸಕ ಯು.ಟಿ.ಖಾದರ್‌ ಮತ್ತು ಇತರರು ಸಚಿವರ ಹೇಳಿಕೆಯನ್ನು ಟೀಕಿಸಿದ್ದಾರೆ.

ಬಿಪಿಎಲ್‌ ಕಾರ್ಡ್‌ಗೆ ಯಾರು ಅರ್ಹರಲ್ಲ

2017 ರ ಮಾರ್ಚ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್‌ ಪಡೆಯಲು ಅರ್ಹರಲ್ಲದ ಕುಟುಂಬಗಳು

* ಸರ್ಕಾರ,ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ-ಮಂಡಳಿಗಳ ಕಾಯಂ ನೌಕರರು.

* ಆದಾಯ ತೆರಿಗೆ, ವೃತ್ತಿ ತೆರಿಗೆ, ಸೇವಾ ತೆರಿಗೆ ಪಾವತಿಸುವ ಕುಟುಂಬಗಳು

*ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ನಗರ ಪ್ರದೇಶಗಳಲ್ಲಿ 1000 ಚದರಡಿಗಿಂತಲೂ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು

* ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ವಾಣಿಜ್ಯ ವಾಹನಗಳಾದ ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಬಿಟ್ಟು, ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲ ಕುಟುಂಬಗಳು

* ತಿಂಗಳಿಗೆ 150 ಯುನಿಟ್‌ಗಳಿಗಿಂತಲೂ ಹೆಚ್ಚಿನ ವಿದ್ಯುತ್‌ ಬಳಕೆ ಮಾಡುವ ಕುಟುಂಬಗಳು

* ವಾರ್ಷಿಕ ಆದಾಯ ₹1.20 ಲಕ್ಷಕ್ಕೂ ಅಧಿಕ ಆದಾಯ ಹೊಂದಿರುವ ಕುಟುಂಬಗಳು

ಮಾಜಿ ರಾಜ್ಯಪಾಲ ಎಂ. ರಾಮಾ ಜೋಯಿಸ್ ನಿಧನ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ ಎಂ. ರಾಮಾ ಜೋಯಿಸ್ (89) ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ರಾಮಾ ಜೋಯಿಸ್ ಅವರು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

(ಮಾಹಿತಿ ಕೃಪೆ ಪ್ರಜಾವಾಣಿ)