WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, March 2, 2022

ಜನಾರ್ದನ್ ರೆಡ್ಡಿ ಮಗನ ಚಿತ್ರಕ್ಕೆ ರಾಜಮೌಳಿ ಪವರ್ -ರೆಡ್ಡಿ ಮಗ 'ಕಿರೀಟಿ' ಚೊಚ್ಚಲ ಚಿತ್ರಕ್ಕೆ ಮುಹೂರ್ತ ಫಿಕ್ಸ


ಐದಾರು ತಿಂಗಳಿನಿಂದ ಒಂದು ಸುದ್ದಿ ಒಡಾಡುತ್ತಿದೆ. ಗಾಲಿ ಜನಾರ್ದನ್ ರೆಡ್ಡಿ ಅವರ ಮಗ ಸಿನಿಮಾ ರಂಗಕ್ಕೆ ಹೀರೋ ಆಗಿ ಬರಲಿದ್ದಾರೆ ಅಂತ. ಆದ್ರೆ ಯಾವಾಗ ಯಾವ ಸಿನಿಮಾ, ಯಾರ ಡೈರೆಕ್ಷನ್​​ನಲ್ಲಿ ಅನ್ನೋದೇ ಸರಿಯಾಗಿ ಮಾಹಿತಿ ಸಿಕ್ಕಿರಲಿಲ್ಲ. ರೆಡ್ಡಿ ಪುತ್ರರ ಸಿನಿಮಾಕ್ಕೆ ಟಾಲಿವುಡ್​​ನ ಚಿತ್ರಬ್ರಹ್ಮ ಎಸ್.ಎಸ್.ರಾಜಮೌಳಿ ಅವರ ಸೂಪರ್​ ಸಾಥ್ ಸಿಗುತ್ತಿದೆ.
ರಾಜಕೀಯ ರಂಗಕ್ಕೂ ಸಿನಿಮಾ ರಂಗಕ್ಕೂ ಹಿಂದಿನಿಂದಲೂ ನೆಂಟಸ್ತಿಕೆ ಇದೆ. ಆ ಸಂಪ್ರದಾಯದಂತೆ ಈಗ ಗಾಲಿ ಜನಾರ್ದನ್ ರೆಡ್ಡಿ ಅವರ ಸುಪುತ್ರ ಹೀರೋ ಆಗಲು ಸಜ್ಜಾಗುತ್ತಿದ್ದಾರೆ. ಕಿರೀಟಿ ಜನಾರ್ದನ್ ರೆಡ್ಡಿಯ ಹೊಸ ಚಿತ್ರಕ್ಕೆ ಟಾಲಿವುಡ್ ಜಕ್ಕಣ್ಣ ಸಾಥ್ ನೀಡ್ತಿದ್ದಾರೆ.
ರೆಡ್ಡಿ ಪುತ್ರ ಕಿರೀಟಿ ಹೊಸ ಚಿತ್ರಕ್ಕೆ ರಾಜಮೌಳಿ ಅನುಮೋದನೆ
ಕೆಲ ದಿನಗಳಿಂದ ಬಳ್ಳಾರಿಯಿಂದ ಗಾಂಧಿನಗರ ತನಕ ಗಾಂಧಿನಗರದಿಂದ ಟಾಲಿವುಡ್​ನ ಮಾಯ ಸಿನಿ ಬಜಾರ್ ತನಕ ಗಾಳಿ ಸುದ್ದಿಯಾಗಿ ಹಬ್ಬಿತ್ತು. ಈಗ ಆ ಗಾಳಿ ಸುದ್ದಿಗೆ ಜೀವ ಬಂದಿದೆ. ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರ ಸುಪುತ್ರ ಕಿರೀಟಿ ಹೀರೋ ಸಿನಿಮಾ ರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದ್ದಾರೆ.
ಹೌದು, ಜನಾರ್ಧನ್ ರೆಡ್ಡಿ ಅವರ ಪುತ್ರ ಸಿನಿಮಾ ರಂಗಕ್ಕೆ ಬರೋದು ಪಕ್ಕಾ ಆಗಿದೆ. ಸಿನಿಮಾ ಬ್ಯಾನರು, ಡೈರೆಕ್ಟರು ಎಲ್ಲವೂ ಫೈನಲ್ ಆಗಿದೆ.. ಶಿವರಾತ್ರಿ ಹಬ್ಬದ ಪ್ರಯುಕ್ತ ರೆಡ್ಡಿ ಫ್ಯಾಮಿಲಿಯಿಂದ ಈ ಗುಟ್ಟದಾ ಸಿನಿಮಾ ವಿಚಾರ ಚಿತ್ರಪ್ರೇಮಿಗಳೇ ತಂಡಕ್ಕೆ ಸಿಕ್ಕಿದೆ.
ಹೀರೋ ಆಗಿ ಲಾಂಚ್ ಆಗ್ತಿದ್ದಾರೆ ರೆಡ್ಡಿ ಪುತ್ರ ಕಿರೀಟಿ
ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮಡಿಲಿಗೆ ಹಾಕ್ತಿದೆ. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡ್ತಿದ್ದು, ಈ ಚಿತ್ರದ ಮೂಲಕ ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯನ್ನು ನಾಯಕನಾಗಿ ಪರಿಚಯಿಸ್ತಿದೆ.
ಕಿರೀಟಿ ರೆಡ್ಡಿ ನಟಿಸಲಿರುವ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗ್ತಿದ್ದು, ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರದ ಚಿತ್ರವಾಗಿರಲಿದೆ. ಕಿರೀಟಿ ನಟನೆಯ ಮೊದಲ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರನ್ನು ಈ ಸಿನಿಮಾದ ಭಾಗವಾಗಿದ್ದಾರೆ.
ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ. ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದ್ದು ಈ ಚಿತ್ರವನ್ನ ರಾಜಮೌಳಿ ಕ್ಲಾಪ್ ಮಾಡುವ ಮೂಲಕ ಶುಭ ಕೊರಲಿದ್ದಾರೆ.
newsfirstlive-epaper-firnew





 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ