
Saturday, September 11, 2021
ಸೆ. 15ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹೊಸ ಚನ್ನಪಟ್ಟಣ ಸಿರುಗುಪ್ಪ (ತಾ). ಬಳ್ಳಾರಿ (ಜಿ) ಯಲ್ಲಿ ಯಾರು ಇಲ್ಲದವೇಳೆ ಗ್ಯಾಸ್ ಬ್ಲಾಸ್ಟ್ ದುರಂತವಗಿದೆ.
ಕಳೆದ ಮಂಗಳವಾರ 07/09/2021 ರಂದು ಮಾರೆಪ್ಪ s/o ಪಕ್ಕೀರಪ್ಪ #21ಸ್ಟ್ ವಾರ್ಡ್ ಹರಿಜನ ಕಾಲೊನಿ.. ಹಾವಿನಹಳ್ ಹೊಸ ಚನ್ನಪಟ್ಟಣ ಸಿರುಗುಪ್ಪ (ತಾ). ಬಳ್ಳಾರಿ (ಜಿ) ಯಲ್ಲಿ ಯಾರು ಇಲ್ಲದವೇಳೆ ಗ್ಯಾಸ್ ಬ್ಲಾಸ್ಟ್ ದುರಂತವಗಿದೆ. ಮನೆಯಲ್ಲಿ ಇದ್ದ ಯಾಲ್ಲವಸ್ತು ಜೊತೆಗೆ 45ಸಾವಿರ ಕೂಲಿ ಮಾಡಿ ಕೂಡಿಯಿಟ್ಟ.. ಹಣ ಬಾಸ್ಮವಾಗಿದೆ. ಪ್ರತಿವಂದು ಕುಟುಂಬ ಜಾಗೃತರಗಿ...
Tuesday, September 7, 2021
ವಿಜಯನಗರ ಜಿಲ್ಲೆ:- ನಲ್ಲಾಪುರ ಗ್ರಾಮ ದಲ್ಲಿ ಗ್ಯಾಸ್ ಬ್ಲಾಸ್ಟ್ ದುರಂತ
ವಿಜಯನಗರ ಜಿಲ್ಲೆ ಜನತೆಗೆ ಗುಡ್ ನ್ಯೂಸ್: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭ
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ.
ಎರಡು ಹಂತಗಳಲ್ಲಿ ಹುದ್ದೆಗಳ ಸೃಜನೆ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಎಸ್.ಪಿ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿ, ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರ ಯೋಜನೆ ಹಾಗೂ ಅರಣ್ಯ ಇಲಾಖೆಗಳ ಕಚೇರಿಗಳನ್ನು ಪ್ರಾರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಹಂತ ಹಂತವಾಗಿ ಎಲ್ಲ ಕಚೇರಿಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದರಲ್ಲಿ ಕೆಲವು ಹುದ್ದೆಗಳನ್ನು ಬಳ್ಳಾರಿಯಿಂದ ಸ್ಥಳಾಂತರ ಮಾಡುವ ಮೂಲಕ ಹಾಗೂ ಕೆಲವು ಹುದ್ದೆಗಳ ಸೃಜನೆಯ ಮೂಲಕ ಜಿಲ್ಲಾ ಮಟ್ಟದ ಕಚೇರಿ ಸ್ಥಾಪಿಸಲಾಗುವುದು. ಜಿಲ್ಲಾ ಕಚೇರಿಗಳ ನಿರ್ಮಾಣಕ್ಕೆ ಕರ್ನಾಟಕ ಗೃಹಮಂಡಳಿಯ 83 ಎಕರೆ ಭೂಮಿಯನ್ನು ಗುರುತಿಸಲಾಗಿದ್ದು, ಅನುದಾನವನ್ನು ಎರಡು ಹಂತದಲ್ಲಿ ವರ್ಗಾಯಿಸಲಾಗುವುದು ಎಂದು ಅವರು ತಿಳಿಸಿದರು.
ಅನಗತ್ಯ ಸ್ಥಳ ವ್ಯರ್ಥ ಮಾಡದೆ, ಕಾರ್ಯನಿರ್ವಹಣೆಗೆ ಪೂರಕವಾಗಿ ಸುಸಜ್ಜಿತ ಜಿಲ್ಲಾಡಳಿತ ಭವನದ ನಕ್ಷೆ ರೂಪಿಸಲು ಸಿಎಂ ಸೂಚಿಸಿದರು.
ಬಳ್ಳಾರಿ ಜಿಲ್ಲೆಯ ಜಿಲ್ಲಾ ಖನಿಜ ನಿಧಿಗೆ ಸಂಬಂಧಿಸಿದಂತೆ ಈಗಾಗಲೇ 2023-24ರ ವರೆಗೆ ಅನುಮೋದನೆಯಾಗಿರುವ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು. ನಂತರ ಜಿಲ್ಲಾ ಖನಿಜ ನಿಧಿಯನ್ನು ಎರಡೂ ಜಿಲ್ಲೆಗಳ ನಡುವೆ ಹಂಚಿಕೆ ಮಾಡುವ ಕುರಿತು ಒಂದು ಸೂತ್ರ ರೂಪಿಸಲಾಗುವುದು ಎಂದು ತಿಳಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ವಿಫುಲ ಅವಕಾಶವಿದ್ದು, ಹಂಪಿಯಲ್ಲಿ ಹಾಗೂ ಮತ್ತಿತರ ಪಾರಂಪರಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಆರ್ಕಿಯಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
(ಮಾಹಿತಿ ಕೃಪೆ ಕನ್ನಡ ದುನಿಯಾ)
Saturday, September 4, 2021
Friday, September 3, 2021
ದೇವಾಲಯದಲ್ಲಿ ನಾವು ಮಾಡಬಾರದ ಅಪಚಾರಗಳು
" *ದೇವಾಲಯದಲ್ಲಿ ನಾವು ಮಾಡೋ ಅಪರಾಧಗಳು*..
೧. ದೇವರ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨. ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩. ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಭಗವಂತನ ಮಂದಿರಕ್ಕೆ ಸಿಗರೇಟು, ಬೀಡಾ, ಸಾರಾಯಿ, ಮಾಂಸ ಸೇವಿಸಿ ಪ್ರವೇಶಿಸುವುದು.
೫. ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್, ಚಪ್ಪಲಿ, ಕೈ ಚೀಲ ಧರಿಸಿ ಕೊಂಡು ಹೋಗುವುದು.
೬. ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭. ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮. ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯. ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦. ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.
೧೧. ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು. ದೇವರ ಹುಂಡಿ, ಕಾಣಿಕೆ ಹಣ ದುರುಪಯೋಗ ಮಾಡಿಕೊಳ್ಳುವುದು.
೧೨. ದೇವರಿಗೆ ಸಂಬಂಧಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩. ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.
೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..
೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨. ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..
೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನು ತೋರಿಸಿ ಕೂಡುವುದು..
೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩. ದೇವಾಲಯದಲ್ಲಿ ಕಣ್ಣು, ಕಿವಿ, ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪. ದೇವಾಲಯದಲ್ಲಿ ಉಗುರು ಕಡಿಯುವುದು, ಕತ್ತರಿಸುವುದು.
೩೫. ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು, ಕಾಯಿ, ಹೂವು, ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ, ಭಿಕ್ಷುಕರಿಗೆ ನೀಡುವುದು.
೩೬. ದೇವಾಲಯದ ಹೊರಗೆ ಕುಳಿತಿರುವ ಭಿಕ್ಷುಕರಿಗೆ ಭಿಕ್ಷೆ ನೀಡಿ ಭಿಕ್ಷಾ ವೃತ್ತಿಯನ್ನು ಉತ್ತೇಜಿಸುವುದು.
೩೭. ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮. ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯. ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦. ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.
೪೧. ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨. ದೇವರಿಗೆ ಅರ್ಪಿಸುವ ಮೊದಲು ಹೂವು, ಹಣ್ಣು, ಊದು ಬತ್ತಿಗಳನ್ನು ಆಘ್ರಾಣಿಸುವುದು (ಮೂಸಿ ನೋಡುವುದು).
೪೩. ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು. ಕಡಿಮೆ ಬಾಡಿಗೆಗೆ ಪಡೆದು ಹೆಚ್ಚಿನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪. ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫. ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.
Tuesday, August 31, 2021
ರಾಜ್ಯದ ಜನರಲ್ಲಿ ಕೊರೋನಾ ಜೊತೆ ಮತ್ತೊಂದು ಆತಂಕ ಶುರು..?

ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ನಡೆಸಲಾದ ಈ ಅಭಿಯಾನದಲ್ಲಿ ಕೋವಿಡ್ನಿಂದ ಚೇತರಿಸಿಕೊಂಡ 5,37,333 ಜನರನ್ನು ಕ್ಷಯ ರೋಗ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 104 ಜನರಲ್ಲಿ ಕ್ಷಯರೋಗ ಪತ್ತೆಯಾಗಿದೆ.
ಇದೇ ವೇಳೆ ಕೋವಿಡ್ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಸಂಪರ್ಕ ಹೊಂದಿದ್ದ 51 ಜನರಲ್ಲಿ ಕ್ಷಯ ರೋಗ ಕಂಡು ಬಂದಿದೆ. ರೋಗ ತಪಾಸಣೆಗಾಗಿ 17,74,240 ಕೋವಿಡ್ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಮನೆಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಲಾಗಿತ್ತು ಎಂದು ಇಲಾಖೆ ತಿಳಿಸಿದೆ.
ಕ್ಷಯ ರೋಗ ಪತ್ತೆ ಅಭಿಯಾನದಲ್ಲಿ ಒಟ್ಟು 24,598 ಜನರಲ್ಲಿ ಕ್ಷಯ ರೋಗ ಇರುವ ಬಗ್ಗೆ ಆರೋಗ್ಯ ಇಲಾಖೆ ಶಂಕೆ ವ್ಯಕ್ತಪಡಿಸಿತ್ತು. ಆದರೆ ಕೋವಿಡ್ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ 104 ಮಂದಿಗೆ ಕ್ಷಯ ರೋಗ ಬಂದಿರುವುದು ಪತ್ತೆಯಾಗಿದೆ.
ಕ್ಷಯ ರೋಗವು ಕೋವಿಡ್ ಸೋಂಕಿತರಲ್ಲಿ ಹೆಚ್ಚಿನ ಅಪಾಯ ಉಂಟು ಮಾಡುವುದರಿಂದ, ಸರ್ಕಾರ ಕೋವಿಡ್ನಿಂದ ಚೇತರಿಸಿಕೊಂಡವರ ಕ್ಷಯ ರೋಗ ಪತ್ತೆ ಅಭಿಯಾನ ಹಮ್ಮಿಕೊಂಡಿದೆ
Thursday, August 26, 2021
weather Update : ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ : 13 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಮೋದಿ ಮತ್ತೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವನ್ನು ಕೊಂಡಾಡಿರುವ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ, ಮೋದಿಯವರು ಪ್ರಧಾನಿಯಾಗಿರುವ ಕಾರಣಕ್ಕೆ ದೇಶ ಒಳ್ಳೆ ಮಟ್ಟದಲ್ಲಿ ಸುಧಾರಣೆ ಕಾಣುತ್ತಿದೆ. ಒಂದೊಮ್ಮೆ ಮುಂದಿನ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗದಿದ್ದರೆ ದೇಶದ ಪರಿಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಹ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಎಲ್ಲ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು ಎಂದು ಭಾವಿಸೋಣ. ಇನ್ನುಳಿದ ಪಕ್ಷಗಳವರು ಮಂತ್ರಿಗಳಾಗಲಿದ್ದು, ಇಂತಹ ಸಂದರ್ಭದಲ್ಲಿ ಪಾಕಿಸ್ತಾನದವರು ಗುಂಡು ಹೊಡೆದರೆ ನಮ್ಮ ಸೈನಿಕರು ಪ್ರತ್ಯುತ್ತರ ನೀಡಲು ಇವರುಗಳು ಬಿಡುತ್ತಾರೆಯೇ ಎಂದು ಪ್ರಶ್ನಿಸಿದರು. ಇನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ತಾಲಿಬಾನಿಗಳಿಗೆ ಕೆಲವರು ಹೋಲಿಸುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಎಸ್.ಎಲ್. ಭೈರಪ್ಪ, ಪ್ರಜಾಪ್ರಭುತ್ವ ಇರುವ ರಾಷ್ಟ್ರದಲ್ಲಿ ಎಂದಿಗೂ ತಾಲಿಬಾನಿಗಳಂತಿರುವವರು ಇರಲು ಸಾಧ್ಯವಿಲ್ಲ. ಕೆಲವರು ಅಧಿಕಾರಕ್ಕಾಗಿ ತಮಗೆ ಮನಬಂದಂತೆ ಮಾತನಾಡುತ್ತಾರೆ ಎಂದು ಹೇಳಿದರು.



















