WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, October 10, 2021

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ವಿಧಿವಶ

  

 ಬೆಂಗಳೂರು: ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ (72) ಅವರು ತಡರಾತ್ರಿ 2 ಗಂಟೆ ಸಮಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸತ್ಯಜಿತ್ ಅವರ​ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ ಬೌರಿಂಗ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. 

ಆಸ್ಪತ್ರೆಗೆ ಸತ್ಯಜಿತ್ ದಾಖಲಿಸಿದ ದಿನ ಮಾಧ್ಯಮದವರ ಜತೆ ಮಾತನಾಡಿದ್ದ​ ಪುತ್ರ ಆಕಾಶ್, ತಂದೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು. ಇನ್ನು ಮೂಲಗಳ ಪ್ರಕಾರ, ಹಲವು ದಿನಗಳಿಂದ ಆರೋಗ್ಯ ಕೈಕೊಟ್ಟಿದ್ದರಿಂದ ಸತ್ಯಜಿತ್​ ಕುಟುಂಬಕ್ಕೆ ಆರ್ಥಿಕ ಸಂಕಷ್ಟವೂ ಎದುರಾಗಿತ್ತು ಎಂದು ತಿಳಿದುಬಂದಿದೆ.

ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಬಳಿಕ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಾಲಿನಲ್ಲಿ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಸಿನಿಮಾ ರಂಗದಿಂದ ಅವರಿಗೆ ಬೇಡಿಕೆ ಕಡಿಮೆ ಆಯಿತು. ಬಳಿಕ ಕುಟುಂಬದ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿಲ್ಲ. ಅಲ್ಲದೆ, ಮಗಳ ಮೇಲೆಯೂ ಸತ್ಯಜಿತ್​ ಅಸಮಾಧಾನವಾಗಿತ್ತು. ಕುಟುಂಬ ಮತ್ತು ಆರೋಗ್ಯ ಸಮಸ್ಯೆಗಳಿಂದ ಸತ್ಯಜಿತ್​ ತುಂಬಾ ಕೊರಗಿ ಹೋಗಿದ್ದರು.
ಇನ್ನು 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ಅಭಿನಯದ ಸೆಕೆಂಡ್​ ಹಾಫ್​ ಚಿತ್ರದ ಸತ್ಯಜಿತ್‌ ಅಭಿನಯಿಸಿದ್ದರು. ಈ‌ ಸಿನಿಮಾ ಬಳಿಕ ಯಾವುದೇ ಸಿನಿಮಾಗಳಲ್ಲೂ ಅಭಿನಯಿಸಿಲ್ಲ. ಕನ್ನಡದಲ್ಲಿ ಸುಮಾರು 600 ಚಿತ್ರಗಳಲ್ಲಿ ಸತ್ಯಜಿತ್​ ನಟಿಸಿದ್ದಾರೆ. ವಿಲನ್​ ಮತ್ತು ಪೋಷಕ ಪಾತ್ರ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಕಾಮಿಡಿ ಟೈಮಿಂಗ್​ ಜನರನ್ನು ನಗಿಸಿದ್ದಾರೆ.
ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್ ಸೇರಿದಂತೆ ಸಾಕಷ್ಟು ಕಲಾವಿದರ ಸಿನಿಮಾಗಳಲ್ಲಿ ಸತ್ಯಜಿತ್‌ ಖಳನಟ ಹಾಗು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

(ಮಾಹಿತಿ ಕೃಪೆ ವಿಜಯವಾಣಿ)

 

Fact Check: ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿಯಲ್ಲಿ ರೈತರಿಗೆ 5 ಲಕ್ಷ ರೂ. ಸಹಾಯಧನ ನೀಡುತ್ತಿದ್ಯಾ? ಇಲ್ಲಿದೆ ವೈರಲ್‌ ಸುದ್ದಿಯ ಅಸಲಿಯತ್ತು

  

ನವದೆಹಲಿ: ಪಿಎಂ ಕಿಸಾನ್ (pM Kisan ) ಟ್ರಾಕ್ಟರ್ ಯೋಜನೆ ಹೆಸರಿನಲ್ಲಿ ಒಂದು ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ (social media) ಹರಿದಾಡುತ್ತಿದ್ದು ಕೆಲವು ಮಾಧ್ಯಮಗಳು ಕೂಡ ಈ ಬಗ್ಗೆ ಸುದ್ದಿಯನ್ನು ಪ್ರಸಾರ ಮಾಡಿದೆ. ವೈರಲ್‌ ಸುದ್ದಿಯಲ್ಲಿ (Viral news) ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ (PM Kisan Tractor Project) ಮೂಲಕ ರೈತರಿಗೆ 5 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ವೈರಲ್‌ ಆಗಿರುವ ಸುದ್ದಿಗೆ ಪಿಐಬಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಹೇಳಿರುವಪ್ರಕಾರ, ಕೇಂದ್ರ ಸರ್ಕಾರವು ಇನ್ನು ಮುಂದೆ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯನ್ನು ಜಾರಿಗೊಳಿಸುವುದಿಲ್ಲ. , ಈ ಯೋಜನೆಯ ಹೆಸರಿನಲ್ಲಿ ಮಾಡಿದ ಯಾವುದೇ ಹೇಳಿಕೆಗಳು ಸುಳ್ಳು ಅಂಥ ತಿಳಿಸಿದೆ. ಪಿಎಂಬಿ ಕಿಸಾನ್ ಟ್ರಾಕ್ಟರ್ ಯೋಜನೆ ಕುರಿತು ಅಂತರ್ಜಾಲದ ಸುಳ್ಳು ಸುದ್ದಿಗೆ ಸಂಬಂಧಿಸಿದಂತೆ ಪಿಐಬಿ ಟ್ವೀಟ್ ಮಾಡಿದೆ. ಪಿಐಬಿ ಪ್ರಕಾರ, ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಂತಹ ಯಾವುದೇ ಯೋಜನೆ ಇಲ್ಲ, ಮತ್ತು ಸರ್ಕಾರವು ಅದನ್ನು ಜಾರಿಗೊಳಿಸುತ್ತಿಲ್ಲ ಅಂಥ ತಿಳಿಸಿದೆ. 

(ಮಾಹಿತಿ ಕೃಪೆ Kannada News Now)

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

 

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 10 ರಿಂದ 13 ರವರೆಗೂ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

(ಮಾಹಿತಿ ಕೃಪೆ ಕನ್ನಡದುನಿಯಾ)

 

 

Thursday, October 7, 2021

ಹೊಸಪೇಟೆ: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಹೊಸಪೇಟೆ(ವಿಜಯನಗರ): ತಾಲ್ಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ ಸಂಜೆ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಲ್ಲೂಕಿನ ಕೊಂಡನಾಯಕನಹಳ್ಳಿಯ ಉದಯ್ ಇಂಗಳಗಿ (25) ಮೃತರು.  'ಉದಯ್‌, ಪಾಪಿನಾಯಕನಹಳ್ಳಿಯಿಂದ ಇಂಗಳಗಿಗೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಅತಿ ವೇಗದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವವಾಗಿ ಉದಯ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

ಗಾದಿಗನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಪ್ರಜಾವಾಣಿ)

 

Tuesday, September 21, 2021

ದಸರಾ ಉದ್ಘಾಟನೆ: ಸಾಲುಮರದ ತಿಮ್ಮಕ್ಕನ ಆಯ್ಕೆಗೆ ಸಾಮಾಜಿಕ ಜಾಲತಾಣ ಅಭಿಯಾನ

 

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ. ಏತನ್ಮಧ್ಯೆ ಈ ಬಾರಿಯ ದಸರಾ ಉದ್ಘಾಟಕರಾಗಿ ಪರಿಸರವಾದಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರನ್ನು ಆಯ್ಕೆ ಮಾಡುವ ಕುರಿತ ಸಾಮಾಜಿಕ ಜಾಲತಾಣ ಅಭಿಯಾನಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಳೆದ ವರ್ಷ ಮೈಸೂರು ದಸರಾವನ್ನು ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ.ಸಿ.ಎನ್.ಮಂಜುನಾಥ್ ಅವರು ನೆರವೇರಿಸಿದ್ದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಡಾ.ಮಂಜುನಾಥ್ ಅವರ ಆಯ್ಕೆ ನಡೆದಿತ್ತು. ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಉದ್ಘಾಟಕರ ನೇಮಕದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಲುಮರದ ತಿಮ್ಮಕ್ಕ ಅವರನ್ನು ಈ ಬಾರಿ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದರೆ ಹೇಗೆ ಎಂಬ ಅಭಿಯಾನಕ್ಕೆ ಸಾವಿರಾರು ಮಂದಿ ಬೆಂಬಲಿಸಿ ಕಮೆಂಟ್ ಮಾಡಿದ್ದು, ಅದರಲ್ಲಿ ಆಯ್ದ ಕೆಲವು ಕಮೆಂಟ್ ಗಳು ಇಲ್ಲಿವೆ.
"ಮರಗಳನ್ನು ಹೆತ್ತ ಮಕ್ಕಳಂತೆ ಕಂಡ ಮಹಾತಾಯಿ ನಮ್ಮ ಸಾಲುಮರದ ತಿಮ್ಮಕ್ಕನವ್ರು. ಇವರು ನಮ್ಮ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ರೆ. ಅದರ ಘಟತೆ ಇನ್ನೂ ಇಮ್ಮಡಿಯಾಗುತ್ತೆ. ಅರ್ಹ ವ್ಯಕ್ತಿ" ಎಂಬುದಾಗಿ ರಾಜಶ್ರೀ ಢವಳೆ ಎಂಬವರು ಫೇಸ್ ಬುಕ್ ಕಮೆಂಟ್ ನಲ್ಲಿ ತಿಳಿಸಿದ್ದಾರೆ.
'ಅರ್ಹ ಮತ್ತು ಸೂಕ್ತ ವ್ಯಕ್ತಿ. ದಸರಾ ಹಬ್ಬಕ್ಕೂ ಮೆರಗು" ಎಂದು ಮತ್ತೊಬ್ಬ ಓದುಗರಾದ ಶಿವಕುಮಾರ್ ದೊಡ್ಮನಿ ತಿಳಿಸಿದ್ದಾರೆ. ಪರಿಸರ ಬಗ್ಗೆ ಅಪಾರ ಗೌರವವಿದೆ. ಹಾಗೂ ಅವರ ಕೊಡುಗೆ ಕರ್ನಾಟಕಕ್ಕೆ ಅಪಾರ. ನಿಜವಾದ ದೇವರು ಅವರಿಂದ ಉದ್ಘಾಟನೆ ಮಾಡಿ.ನಾಡಪ್ರೇಮ, ದೇಶಪ್ರೇಮ"ಕ್ಕೆ ಇವರೇ ಸಾಟಿ" ಎಂದು ಆನಂದ್ ಎಚ್ ಆರ್ ಎಂಬ ಓದುಗ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವಕ್ಕೆ ಅಕ್ಟೋಬರ್ 7ರಂದು ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತವಾಗಿ ಚಾಲನೆ ಸಿಗಲಿದೆ. ಅಕ್ಟೋಬರ್ 15ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರವರೆಗೆ ನಂದಿಧ್ವಜ ಪೂಜೆ ನಡಯಲಿದೆ. 5ರಿಂದ 5.30ರೊಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ.
(ಮಾಹಿತಿ ಕೃಪೆ ಉದಯವಾಣಿ)

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

 

ಸಿಂದಗಿ: ಶಾಲೆ ಮಂಜೂರಾಗಿ 11 ವಸಂತಗಳನ್ನು ಕಂಡಿದೆ. 2016ರಲ್ಲಿ ಸುಸಜ್ಜಿತವಾದ ಕಟ್ಟದಹೊಂದಿದೆ. ವಿಶಾಲವಾದ ಆಟದ ಮೈದಾನವಿದೆ ಆದರೆ ಈ ಶಾಲೆಗೆ ಹೋಗುವ ರಸ್ತೆ ಸುಧಾರಣೆಯಾಗದೇ ಕೆಸರು ಗದ್ದೆಯಾಗಿದೆ. ಮಾರ್ಗ ಮಧ್ಯ ಇರುವ ತಗ್ಗು ಪ್ರದೇಶದಲ್ಲಿ ರಾಡಿ ನೀರು ನಿಲ್ಲುತ್ತದೆ. ಮಳೆಗಾಲದಲ್ಲಂತೂ ಹೇಳ ತೀರದ ಪೇಚಾಟ ವಿದ್ಯಾರ್ಥಿಗಳದ್ದು.
ಪಟ್ಟಣದಲ್ಲಿನ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಹೋಗುವ ರಸ್ತೆಯ ದುಸ್ಥಿಯಾಗಿದೆ. ಮಳೆಗಾಲದಲ್ಲಿ ಆದರ್ಶ ವಿದ್ಯಾಲಯಕ್ಕೆ ಹೋಗುವ ವಿದ್ಯಾರ್ಥಿಗಳ ಪೇಚಾಟ ಕಂಡು ವಿದ್ಯಾಲಯದ ಹತ್ತಿರ ಇರುವ ಗೌಡರು ತಮ್ಮ ಸ್ವಂತ ಖರ್ಚಿನಿಂದ ಎರಡು ಸಲ ಮುರುಮು ಹಾಕಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ತಪ್ಪದ್ದರೂ ಮಳೆಗಾಲದಲ್ಲಿ ಪೇಚಾಟ ತಪ್ಪಿದ್ದಲ್ಲ.
ಪುರಸಭೆಯ ಕೆಲ ಸದಸ್ಯರಿಗೆ ಸಮಸ್ಯೆ ಕುರಿತು ಹೇಳಿದಾಗ ಪುರಸಭೆಯಲ್ಲಿ ಹಣವಿಲ್ಲ. ಯಾರಿದಂದಲಾದರು ಸಾಲ ಕೊಡಿಸಿ ನಾನು ಈ ವಾರ್ಡಿನ ಸದಸ್ಯನಲ್ಲದಿದ್ದರೂ ನಾನು ಈ ರಸ್ತೆ ಕೆಲಸ ಮಾಡುತ್ತೇನೆ. ಬಿಲ್ ಬಂದ ಮೇಲೆ ನಾನು ಅವರಿಗೆ ಹಣ ನೀಡುತ್ತೇನೆ ಎಂದು ಹೆಸರು ಹೇಳಲು ಇಚ್ಚಿಸದ ಪುರಸಭೆ ಹಾಲಿ ಸದಸ್ಯ ನೀಡುವ ಉತ್ತರವಾಗಿದೆ.

ಸರಕಾರಿ ಆದರ್ಶ ವಿದ್ಯಾಲಯದಲ್ಲಿ 6 ರಿಂದ 10ನೇ ವರ್ಗದವರೆಗೆ 400 ವಿದ್ಯಾರ್ಥಿಗಳು ಕಲಿಯುತ್ತಾರೆ. ಇವರೆಲ್ಲರೂ ಶಾಲೆಗೆ ಬರಲು ಒಂದೇ ಮಾರ್ಗವಿದೆ. ಅದು ಸಂಪೂರ್ಣ ತಗ್ಗುಗಳಿಂದ ಕೂಡಿ ಹಾಳಾಗಿದೆ.
ಸ್ಥಳಿಯ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಕಲಿಯುತ್ತಾರೆ. ಅವರು ವಿದ್ಯಾಲಯಕ್ಕೆ ಹೋಗಬೇಕಾಗದಲ್ಲಿ ಕೆಸರು ತುಂಬಿದ ರಸ್ತೆಯೊಂದೇ ಮಾರ್ಗವಾಗಿದೆ. ಮಳೆಗಾಳದಲ್ಲಿ ಕೆಸರು ರಸ್ತೆಯಲ್ಲಿ ಶಾಲೆಗೆ ಹೋಗುವುದರಿಂದ ನಿತ್ಯ ಸಮವಸ್ತ್ರಗಳು ಕೆಸರಾಗುತ್ತವೆ. ಇನ್ನಾದರು ಜನಪ್ರತಿನಿಧಿಗಳು, ಅಧಿಕಾರಿಗಳು ರಸ್ತೆ ದುರಸ್ಥಿಗೆ ಮುಂದಾಗಬೇಕು ಎಂದು ಪಾಲಕರ ಮನವಿಯಾಗಿದೆ.
ರಸ್ತೆ ದುರಸ್ತಿಗೆ ಅನೇಕ ಬಾರಿ ಸಂಬಂಧಿಸಿದವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಶಾಲೆಯವರು ಹೇಳುತ್ತಾರೆ. ಆದರೆ ನಿತ್ಯ ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ನಮಗೆ ಎದುರಾಗಿದೆ ಎಂದು ಸರಕಾರಿ ಆದರ್ಶ ವಿದ್ಯಾರ್ಥಿಗಳ ಅಳಲಾಗಿದೆ. ಸ್ವಲ್ಪ ಮಳೆ ಬಂದರಾಯಿತು ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ನರಕಯಾತೆ ಪಡೆಯುವಂತಾಗಿದೆ. ಅಲ್ಲದೇ ಪ್ರತಿ ದಿನ ಸಮವಸ್ತ್ರ ರಾಡಿಯಾಗುತ್ತವೆ ಅವುಗಳನ್ನು ತೊಳೆದು ಸಾಕಾಗಿದೆ ಎಂದು ವಿದ್ಯಾರ್ಥಿಗಳ ತಾಯಂದಿರ ಮನದಾಳದ ಮಾತಾಗಿದೆ.

ರಸ್ತೆ ಸಂಪೂರ್ಣ ತೆಗ್ಗುಗಳಿಂದ ಕೂಡಿದೆ. ಮಳೆ ಬಂತೆಂದರೆ ತಗ್ಗುಗಳಲ್ಲಿ ನೀರು ನಿಲ್ಲುತ್ತವೆ. ಆಗ ರಸ್ತೆಯಾವುದೋ ಗುಂಡಿ ಯಾವುದೋ ಗೊತ್ತಾಗುವುದಿಲ್ಲ. ಮಕ್ಕಳಿಗೆ ಬೈಕ್ ಮೇಲೆ ಶಾಲೆಗೆ ಬಿಡುವ ಸಂದರ್ಭದಲ್ಲಿ ಸಾಕಷ್ಟು ಅಪಘಾತಗಳಾಗಿವೆ. ನಮಗೂ, ಮಕ್ಕಳಿಗೂ ಗಾಯಗಳಾಗಿವೆ. ನಮ್ಮ ಕಷ್ಟ ಯಾರಿಗೆ ಹೇಳಬೇಕು.
ಸ್ಥಳಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಲ್ಲದೇ ರಸ್ತೆ ಮಳೆಗಾಲದಲ್ಲಿ ರಸ್ತೆಯ ಗುಂಡಿಗಳಲ್ಲಿ ನೀರು ನಿಲ್ಲುತ್ತದೆ. ಇದರಿಂದ ಅಲ್ಲಿ ಕೊಳಚೆ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ತಾಣವಾಗಿ ಪರಿವರ್ತನೆಯಾಗುತ್ತದೆ. ಶಾಲೆಯ ಸುತ್ತಮುತ್ತಲಿನ ವಾತಾವರಣ ಆರೋಗ್ಯಕರವಾಗಿರಬೇಕು. ಆದ್ದರಿಂದ ಸಂಬಂಧಿಸಿದ ಇಲಾಖೆ ಶಾಲೆಯ ರಸ್ತೆ ದುರಸ್ಥಿ ಮಾಡಬೇಕು.
-ಡಾ.ಮಹೇಶ ಹಿರೇಮಠ, ವೈಧ್ಯರು, ಸಿಂದಗಿ.

ಮಳೆಗಾಲದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರಬೇಕಾದರೆ ನರಕಯಾತನೆ ಪಡುತ್ತಾರೆ. ಈ ರಸ್ತೆ ದುರಸ್ಥಿ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಮತ್ತು ಶಾಲೆಯಿಂದ ಪುರಸಭೆಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರು ರಸ್ತೆ ದುರಸ್ಥಿಗೆ ಪುರಸಭೆ ಆಢಳಿತ ಮುಂದಾಗಬೇಕು.
-ರಮೇಶ ಚಟ್ಟರಕಿ, ಪ್ರಭಾರಿ ಮುಖ್ಯೋಧ್ಯಾಪಕ, ಸರಕಾರಿ ಆದರ್ಶ ವಿದ್ಯಾಲಯ, ಸಿಂದಗಿ.
ರಸ್ತೆ ದುರಸ್ತಿಗೆ ಅನೇಕ ಬಾರಿ ಸಂಬಂಧಿಸಿದವರಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಆದರೆ ನಿತ್ಯ ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ನಮ್ಮ ಶಾಳೆಯ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೆಸರಿನಿಂದ ಕೂಡಿದ ರಸ್ತೆಯಲ್ಲಿ ಶಾಲೆಗೆ ಹೋದರೆ ಸಾಕು ಸಮವಸ್ತ್ರಗಳು ರಾಡಿಮಯವಾಗುತ್ತವೆ. ಪಾಲಕರು ಸಾಕಷ್ಟು ಬಾರಿ ತಮ್ಮ ಸಂಕಷ್ಟ ತೊಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಂಕಷ್ಟ ಅರಿತು ಇನ್ನಾದರೂ ರಸ್ತೆ ದುರಸ್ಥಿ ಮಾಡಲು ಪುರಸಭೆ ಮುಂದಾಗಬೇಕು.
-ಎಸ್.ಎಸ್. ಕುಂಬಾರ, ಅಧ್ಯಕ್ಷರು, ಎಸ್‌ಡಿಎಂಸಿ, ಸರಕಾರಿ ಆದರ್ಶ ವಿದ್ಯಾಲಯ ಸಿಂದಗಿ.

– ರಮೇಶ ಪೂಜಾರ

(ಮಾಹಿತಿ ಕೃಪೆ)

(ಮಾಹಿತಿ ಕೃಪೆ ಉದಯವಾಣಿ)

Sunday, September 12, 2021

Sai Dharam Tej Health Update : ತೆಲುಗು ನಟ ಸಾಯಿಧರ್ಮ ತೇಜ್ ಆರೋಗ್ಯದಲ್ಲಿ ಚೇತರಿಕೆ

 

ಹೈದರಾಬಾದ್ : ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ನಟ ಸಾಯಿ ಧರ್ಮ ತೇಜ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸಾಯಿಧರ್ಮ ತೇಜ್ ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಅಪೊಲೊ ಆಸ್ಪತ್ರೆಯಿಂದ ಹೇಳಿಕೆ ನೀಡಲಾಗಿದೆ. ಈ ಸಮಯದಲ್ಲಿ, ಸಾಯಿ ಅವರ ಸ್ಥಿತಿ ಈಗಾಗಲೇ ಚೆನ್ನಾಗಿದೆ, ಆದರೆ ಅವರು ಇದೀಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. ಸಾಯಿ ಧರ್ಮ ತೇಜ್ ನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಪ್ರಾಥಮಿಕ ತನಿಖೆಗಳ ಆಧಾರದ ಮೇಲೆ, ಮೆದುಳು, ಬೆನ್ನುಮೂಳೆ ಮತ್ತು ಪ್ರಮುಖ ಅಂಗಗಳಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಅವರ ಅಂಗಾಂಶಗಳು ಹಾನಿಗೊಳಗಾಗಿವೆ ಮತ್ತು ಕಾಲರ್ ಬೋನ್ ನಲ್ಲಿ ಮುರಿತಗಳಾಗಿವೆ. ಅವುಗಳನ್ನು ಈಗ ತಪಾಸಣೆಗಾಗಿ ಮಾತ್ರ ಐಸಿಯುನಲ್ಲಿ ಇಡಲಾಗುವುದು ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

(ಮಾಹಿತಿ ಕೃಪೆ Kannada News Now)


ಸೆ. 15ರ ತನಕ ಮಳೆ; ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

 

ಬೆಂಗಳೂರು, ಸೆಪ್ಟೆಂಬರ್ 12; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪಂಜಾಬ್, ನವದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್ ಪೂರ್ವ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆಕಂಡು ಬಂದಿದೆ. ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈನಲ್ಲಿ ಶೇ 7ರಷ್ಟು, ಆಗಸ್ಟ್‌ನಲ್ಲಿ ಶೇ 24 ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.
(ಮಾಹಿತಿ ಕೃಪೆ Oneindia)

ಬೆಳೆ ಸಂರಕ್ಷಣೆಗೆ ಹೊಸ ಉಪಕರಣ ಅಭಿವೃದ್ದಿ | ರೈತರಿಗೆ ನೆಮ್ಮದಿ

 



ಮಂಗನ ಚಿಕಿತ್ಸೆಗಾಗಿ ಯುವಕನ ಅಲೆದಾಟ

 

(ಮಾಹಿತಿ ಕೃಪೆ ವಿಜಯ ಕರ್ನಾಟಕ)

Saturday, September 11, 2021

ಇನ್ಮುಂದೆ ಈ ರಾಜ್ಯದ ಸರ್ಕಾರಿ ನೌಕರರು ಜೀನ್ಸ್-ಟೀ ಶರ್ಟ್ ಗಳನ್ನು ಧರಿಸುವಂತಿಲ್ಲ!

ನವದೆಹಲಿ : ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಉತ್ತರಾಖಂಡದ ಸರ್ಕಾರಿ ನೌಕರರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಟಿ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ವರದಿಯ ಪ್ರಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ ಧರಿಸುವಂತಹ ಅನೌಪಚಾರಿಕ ಡ್ರೆಸ್ಸಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಜಿಲ್ಲಾ ಅಧಿಕಾರಿಗಳು, ಉದ್ಯೋಗಿಗಳು ಕಚೇರಿಯಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಮತ್ತು ಉನ್ನತ ಅಧಿಕಾರಿಗಳೊಂದಿಗಿನ ಸಭೆಗಳಲ್ಲಿ ಜೀನ್ಸ್, ಟೀ ಶರ್ಟ್ ಧರಿಸಬಾರದು ಎಂದು ಅವರು ಹೇಳಿದರು. ಇದಲ್ಲದೆ, 'ಅನುಸರಣೆ ಮಾಡದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಅವರು ಎಚ್ಚರಿಸಿದ್ದಾರೆ.
ಕೆಲವು ಜಿಲ್ಲಾ ಮಟ್ಟದ ಉದ್ಯೋಗಿಗಳು ಮತ್ತು ಅಧಿಕಾರಿಗಳು ಡೆನಿಮ್ ಮತ್ತು ಟಿ-ಶರ್ಟ್ ಗಳನ್ನು ಹಾಕಿಕೊಂಡು ಸಭೆಗಳಿಗೆ ಹಾಜರಾಗುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಇದು ಸರ್ಕಾರಿ ನೌಕರನಿಗೆ ಯೋಗ್ಯವಾಗಿ ಕಾಣುವುದಿಲ್ಲ ಎಂದು ಕುಮಾರ್ ಹೇಳಿದ್ದಾರೆ.
(ಮಾಹಿತಿ ಕೃಪೆ Kannada News Now)